Dharwad: District in-charge minister Santosh S Lad visited the areas of continuous rain and crop damage

ಧಾರವಾಡ: ನಿರಂತರ ಮಳೆ, ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಭೇಟಿ

ಧಾರವಾಡ: ನಿರಂತರ ಮಳೆ, ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಭೇಟಿ

ಧಾರವಾಡ, ಆಗಸ್ಟ್‌ 23: “ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗದಲ್ಲಿ ಅಪಾರ ಪ್ರಮಾಣದ ಬೆಳೆ‌ ಹಾನಿಯಾಗಿದೆ. ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಬೆಳೆ ನಷ್ಟವಾಗಿದೆ. ಹೆಸರು, ಉದ್ದು, ಸೋಯಾಬಿನ್ ಸೇರಿದಂತೆ ಮುಂಗಾರು ಬೆಳೆಗಳನ್ನು ಬಿತ್ತಿದ್ದ ರೈತರು ಭಾರೀ ನಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಬೆಳೆ ವಿಮೆ ಕಂಪನಿ ಮತ್ತು ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಲಾಗುವುದು. ವಿಮಾ ಕಂಪನಿಯ ಕೆಲವು ನಿಯಮ‌ ಬದಲಾವಣೆ ಬಗ್ಗೆ ಸಭೆ ನಡೆಸಲಾಗುವುದು” ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು.

ಮಳೆಯಿಂದ ಹಾನಿಯಾದ ನವಲಗುಂದ ಪಟ್ಟಣದ ಮನೆಗಳು, ನಾಯಕನೂರ ಗ್ರಾಮದ ಹೊಲಗಳಲ್ಲಿನ ಹೆಸರು ಮತ್ತು ಈರುಳ್ಳಿ ಬೆಳೆಯನ್ನು ಸಚಿವರು ಇಂದು ಪರಿಶೀಲಿಸಿದರು.

ಅಣ್ಣಿಗೇರಿ ತಾಲೂಕಿನ ಮಣಕವಾಡ, ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಸುತ್ತಮುತ್ತಲಿನ ಜಮೀನುಗಳಿಗೆ ಹಾನಿಯಾಗಿರುವುದನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿಯೂ ಹಾನಿಗೊಳಗಾಗಿರುವ ಹೆಸರು, ಉದ್ದು, ಶೇಂಗಾ, ಈರುಳ್ಳಿ ಹಾಗೂ ಇತರ ಬೆಳೆಗಳ ಹಾನಿ ಪ್ರದೇಶಗಳನ್ನು ಪರಿವೀಕ್ಷಿಸಲಾಯಿತು. ಜೊತೆಗೆ ಮಳೆ ನೀರಲ್ಲಿ ಕೊಚ್ಚಿಕೊಂಡು ಹೋಗಿರುವ ತಡಹಾಳ ಗ್ರಾಮದ ಸೇತುವೆಯನ್ನು ಇದೇ ವೇಳೆ ವೀಕ್ಷಿಸಿದರು.

ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಭಾರಿ ಮಳೆಗೆ ಹೆಚ್ಚಿನ ಬೆಳೆಯಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗಿದೆ. ಮಳೆಯಿಂದಾಗಿ ಮನೆಗಳು ಕುಸಿದು ಬಿದ್ದಿದ್ದು, ಜನರಿಗೆ ಸಾಕಷ್ಟು ತೊಂದರೆಯಾಗಿದೆ. ಹೊಲಗಳಲ್ಲಿ ನೀರು ನಿಂತಿದ್ದರಿಂದ ಬೆಳೆಗಳು ಕೊಳೆಯಲಾರಂಭಿಸಿವೆ. ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಸಮಗ್ರ ಮಾಹಿತಿ ಪಡೆಯಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ನವಲಗುಂದ ಪಟ್ಟಣದ ಗುಡ್ಡದಕೇರಿ ಓಣಿಯಲ್ಲಿನ ದ್ಯಾಮವ್ವ ಬಣ್ಣೆಣ್ಣನವರ ಎಂಬವರ ಮನೆ ಮಳೆಗೆ ಸಂಪೂರ್ಣ ಹಾನಿಯಾಗಿತ್ತು. ಬಿದ್ದ ಮನೆ ವೀಕ್ಷಣೆ ಮಾಡಿದ ಸಚಿವ ಲಾಡ್ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಸಚಿವರಿಗೆ ಗ್ರಾಮಸ್ಥರ ಅಳಲು: ನವಲಗುಂದ ಭಾಗದಲ್ಲಿ ಹೆಸರು, ಈರುಳ್ಳಿ ಬೆಳೆ ಕಳೆದುಕೊಂಡು ಸಂಕಷ್ಟ ಎದುರಿಸುತ್ತಿರುವ ರೈತರು ಸಚಿವರ ಮುಂದೆ ಅಳಲನ್ನು ತೋಡಿಕೊಂಡರು. “ಸಾಲಸೋಲ ಮಾಡಿ ಬೆಳೆ ಹಾಕಿದ್ದೆವು. ಈಗ ನೋಡಿದರೆ ಮಳೆಯಿಂದ ಬೆಳೆ ಸಂಪೂರ್ಣ ಹಾನಿಯಾಗಿವೆ. ಸರ್ಕಾರದಿಂದ ಪರಿಹಾರ ಕೊಡಿಸಬೇಕು” ಎಂದು ಮನವಿ ಮಾಡಿದರು.

ತಡಹಾಳ ಗ್ರಾಮದ ಸೇತುವೆ ಪರಿಶೀಲನೆ: ತಡಹಾಳ ಬಳಿಯ ಬೆಣ್ಣೆಹಳ್ಳದಿಂದ ಉಂಟಾಗಿರುವ ನಷ್ಟದ ಕುರಿತು ಮಾತನಾಡಿದ ಸಚಿವರು, ಸೇತುವೆ ಹಳೆಯದಾಗಿದೆ. ಇದನ್ನು ಮೇಲ್ದರ್ಜೆಗೇರಿಸಲಾಗುವುದು. ಸದ್ಯ ತಾತ್ಕಾಲಿಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು. ಬೆಣ್ಣೆಹಳ್ಳಕ್ಕೆ ಶಾಶ್ವತ ಸೇತುವೆ ನಿರ್ಮಾಣ ಮಾಡುವ ಕುರಿತು ಭರವಸೆ ನೀಡಿದರು.

ನವಲಗುಂದ ತಾಲೂಕಿನ ತಡಹಾಳ ಗ್ರಾಮದ ಸೇತುವೆ ಹಾನಿಯಾಗಿದ್ದರಿಂದ ನರಗುಂದ ಹಾಗೂ ನವಲಗುಂದ ತಾಲೂಕಿನ ಕೆಲ ಗ್ರಾಮಗಳ ಸಂಪರ್ಕ ಕಡಿತಗೊಂಡಿತ್ತು.
ಕಳೆದ ಒಂದು ತಿಂಗಳ ಹಿಂದಷ್ಟೇ ಸೇತುವೆ ದುರಸ್ತಿ ಮಾಡಲಾಗಿತ್ತು. ಈ ಮುಂಚೆಯೂ ಸೇತುವೆ ಇದೇ ರೀತಿ ಕೊಚ್ಚಿಕೊಂಡು ಹೋಗಿತ್ತು. ಕೊಚ್ಚಿ ಹೋದ ಸೇತುವೆಯಿಂದ ಜನರಿಗೆ ಸಂಕಷ್ಟ ಎದುರಾಗಿತ್ತು.

ಭೇಟಿ ವೇಳೆ ಸಚಿವರಿಗೆ ನವಲಗುಂದ ಕ್ಷೇತ್ರದ ಶಾಸಕ ಎನ್. ಹೆಚ್. ಕೋನರಡ್ಡಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಸಾಥ್ ನೀಡಿದರು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ