ಮುದ್ದೇಬಿಹಾಳ : ಪ್ರಜಾನಾಡು ಡಿಜಿಟಲ್ ಸುದ್ದಿವಾಹಿನಿಯ ದಿನದರ್ಶಿಕೆ ಲೋಕಾರ್ಪಣೆ ಕಾರ್ಯಕ್ರಮ ಡಿ.22 ರಂದು ಸಂಜೆ 5ಕ್ಕೆ ಖಾಸ್ಗತೇಶ್ವರ ಮಠದ ಆವರಣದಲ್ಲಿ ನಡೆಯಲಿದೆ ಎಂದು ಪತ್ರಕರ್ತ ಸಚಿನ ಚಲವಾದಿ ತಿಳಿಸಿದ್ದಾರೆ.
ದಿವ್ಯ ಸಾನಿಧ್ಯವನ್ನು ಖಾಸ್ಗತೇಶ್ವರ ಮಠದ ಶರಣೆ ನೀಲಮ್ಮ ತಾಯಿಯವರು ವಹಿಸಲಿದ್ದು ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ಉದ್ಘಾಟಿಸುವರು.ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಪುರಸಭೆ ಮಾಜಿ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಜಂಗಮ ಸಮಾಜದ ತಾಲ್ಲೂಕು ಅಧ್ಯಕ್ಷ ದಾನಯ್ಯ ಹಿರೇಮಠ, ಬಿಎಲ್ಡಿಇ ಸೌಹಾರ್ದ ಬ್ಯಾಂಕ್ ಸಲಹಾ ಸಮಿತಿ ನಿರ್ದೇಶಕ ಮಹಾಂತೇಶ ಬೂದಿಹಾಳಮಠ, ಕೆಯುಸಿ ಬ್ಯಾಂಕ್ ನಿರ್ದೇಶಕ ಶ್ರೀಕಾಂತ ಚಲವಾದಿ, ಪತ್ರಕರ್ತರಾದ ಪುಂಡಲೀಕ ಮುರಾಳ, ನಾರಾಯಣ ಮಾಯಾಚಾರಿ,ಪರಶುರಾಮ ಕೊಣ್ಣೂರ ಆಗಮಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







