Dilapidated school building: Minister Santosh Lad instructs for alternative arrangement

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಸಚಿವ ಸಂತೋಷ್‌ ಲಾಡ್‌ ಸೂಚನೆ

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಸಚಿವ ಸಂತೋಷ್‌ ಲಾಡ್‌ ಸೂಚನೆ

ಧಾರವಾಡ, ಜುಲೈ 30: ಜಿಲ್ಲೆಯಲ್ಲಿ ಕೆಲವು ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿದ್ದು, ಈ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಸೂಚಿಸಿದ್ದಾರೆ.

ಈ ಸಂಬಂಧ ಅವರು, ಧಾರವಾಡ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಧಾರವಾಡದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರು ಹಾಗೂ ಧಾರವಾಡದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶರಿಗೆ ಪತ್ರ ಬರೆದಿದ್ದಾರೆ.

ಧಾರವಾಡ ಮತ್ತು ಇತರೆ ಪ್ರದೇಶಗಳಲ್ಲಿ ಕೆಲವು ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿರುವುದು ಗಮನಕ್ಕೆ ಬಂದಿದೆ. ಕಲಘಟಗಿ ಕ್ಷೇತ್ರದ ಪ್ರವಾಸದಲ್ಲಿದ್ದಾಗ ಕೊಠಡಿಗಳು ಶಿಥಿಲಗೊಂಡಿರುವುದು ಗಮನಿಸಿದ್ದೇನೆ. ಇಂತಹ ಕೊಠಡಿಗಳು ಮಕ್ಕಳಿಗೆ ಸೂಕ್ತವಲ್ಲ ಎಂದಿರುವ ಅವರು, ಪರ್ಯಾಯ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.

ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯ ತಾಂತ್ರಿಕ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಿ ವಿವರ ವರದಿಯೊಂದಿಗೆ ಪೂರ್ಣ ಪ್ರಮಾಣದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಾಲಮಿತಿಯಲ್ಲಿ ಸಲ್ಲಿಸಲು ಸಚಿವರು ಸೂಚಿಸಿದ್ದಾರೆ.

Latest News

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ 2.50 ಲಕ್ಷ ಜನರು ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.ಪ್ರತಿ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶ್ರಮಿಕರು, ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಆಸರೆಯಾಗುವ ಕಾರ್ಯ ಮಾಡುವ ಮೂಲಕ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತಂಗಡಗಿ ರಸ್ತೆಯ ಕೋಳೂರು ಕ್ರಾಸ್‌ನಲ್ಲಿ ಭಾನುವಾರ ನಡೆದಿದೆ. ಕೂಡಲಸಂಗಮ ಮೂಲದ ಶರಣಬಸಯ್ಯ ನಿಜಗುಣಯ್ಯ ಹಿರೇಮಠ(43) ಮೃತಪಟ್ಟಿರುವ ವ್ಯಕ್ತಿ. ಬೈಕ್ ಚಲಾಯಿಸುತ್ತಿದ್ದ ಸವಾರ ಅಮರೇಶ ಸಂಗಪ್ಪ ಗುಗ್ಗರಿಗೂ ಗಂಭೀರವಾದ ಗಾಯಳಾಗಿದ್ದು ಅವರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಿಫ್ಟ್ ಡಿಜೈರ್ ಕಾರ ನಂಬರ್ ಕೆ.ಎ-37, ಎನ್-3584 ಚಾಲಕನು ಮುದ್ದೇಬಿಹಾಳ ಕಡೆಯಿಂದ ಹುನಗುಂದ ಕಡೆಗೆ ಅತೀ ವೇಗವಾಗಿ

ಗ್ಯಾರಂಟಿ ಯೋಜನೆ:                                                     ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಗ್ಯಾರಂಟಿ ಯೋಜನೆ: ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರ ಹಾಗೂ ಹೊರಪೇಟಿಯಲ್ಲಿ ಮನೆ ಮನೆಗೆ ತೆರಳಿದ ಪಂಚ ಗ್ಯಾರಂಟಿ ಸಮೀತಿ ಪದಾಧಿಕಾರಿಗಳು ನಿವಾಸಿಗಳ ಮನೆ ಎದುರಿಗೆ ರಂಗೋಲಿ ಬಿಡಿಸಿ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸಿದರು. ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ,ಪುರಸಭೆ ಮಾಜಿ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಸಮೀತಿ ಪದಾಧಿಕಾರಿಗಳು ಇದ್ದರು.