SC, ST ವಿದ್ಯಾರ್ಥಿಗಳಿಗೆ ನಿರಾಸೆ.. ₹50 ಲಕ್ಷ ನೀಡುವ ಸ್ಕೀಮ್ಗೆ ಕೊಕ್..

SC, ST ವಿದ್ಯಾರ್ಥಿಗಳಿಗೆ ನಿರಾಸೆ.. ₹50 ಲಕ್ಷ ನೀಡುವ ಸ್ಕೀಮ್ಗೆ ಕೊಕ್..

ಬೆಂಗಳೂರು: ಮೆಡಿಕಲ್‌ ಕಾಲೇಜು ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಎಸ್ಸಿ, ಎಸ್ಟಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50 ಲಕ್ಷ ರೂಪಾಯಿವರೆಗೆ ಕಾಲೇಜು ಶುಲ್ಕ ಪಾವತಿಸುವ ಸಮಾಜ ಕಲ್ಯಾಣ ಇಲಾಖೆಯ ಪ್ರೋತ್ಸಾಹಧನ ಯೋಜನೆಯನ್ನು ಆರ್ಥಿಕ ಇಲಾಖೆಯು ತಿರಸ್ಕರಿಸಿದೆ.

ಸಮಾಜ ಕಲ್ಯಾಣ ಇಲಾಖೆಯು ಅ.24ರಂದು ಹೊರಡಿಸಿರುವ ‘ಸೇರ್ಪಡೆ ಆದೇಶ’ದ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.95ರಷ್ಟು ಅಂಕ ಪಡೆದು, ನೀಟ್ ಪರೀಕ್ಷೆಯ ರ್ಯಾಂಕ್‌ನಿಂದ ಸರ್ಕಾರಿ ಕೋಟಾದಡಿ ಸೀಟ್ ಲಭ್ಯವಾಗದೆ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ಕಾಲೇಜು ಶುಲ್ಕ ಪಾವತಿಸಲು 25 ಲಕ್ಷ ಪ್ರೋತ್ಸಾಹ ಧನ ನೀಡಬೇಕು. ಅಲ್ಲದೇ, ಆ ವಿದ್ಯಾರ್ಥಿ 1ನೇ ವರ್ಷದ ಪರೀಕ್ಷೆಯಲ್ಲಿ ಶೇ.60 ರಷ್ಟು ಅಂಕ ಪಡೆದರೆ ಪುನಃ 25 ಲಕ್ಷ ರೂಪಾಯಿ ಮಂಜೂರು ಮಾಡಬೇಕು ಎಂದು ತಿಳಿಸಲಾಗಿತ್ತು. ಆದರೆ, ಈ ಆದೇಶ ಹೊರಡಿಸಿದ ಎರಡೇ ದಿನಗಳಲ್ಲಿ ಅಂದರೆ ಅ.26ರಂದು ಹಣಕಾಸು ಇಲಾಖೆಯು ಪ್ರಸ್ತಾವನೆಯನ್ನು ತಿರಸ್ಕರಿಸಿದೆ.

ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯೊಂದಿಗೆ ಮೆರಿಟ್ ಆಧಾರದ ಮೇಲೆ ಹಾಸ್ಟೆಲ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೂಲಸೌಕರ್ಯ ಸುಧಾರಣೆಗಾಗಿ ಅನುದಾನ ಕೋರಿರುವ ಅನೇಕ ಪ್ರಸ್ತಾವನೆಗಳು ಬಾಕಿ ಇವೆ. ಇಂತಹ ಸಂದರ್ಭದಲ್ಲಿ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರೋತಾಹಧನ ನೀಡುವ ಯೋಜನೆಯನ್ನು ಕೈಬಿಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನುಸಾರ ಈ ಕ್ರಮ ವಹಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಗೆ ಆರ್ಥಿಕ ಇಲಾಖೆ ತಿಳಿಸಿದೆ ಎಂದು ಮೂಲಗಳಿಂದ ಖಚಿತವಾಗಿದೆ.

ಮೆರಿಟ್ ಸೀಟು ಪಡೆದವರಿಗೆ ಸಿಗೋದು ₹2 ಲಕ್ಷ!

ಇಲಾಖೆಯು ಹಾಲಿ ಹೊಂದಿರುವ ಯೋಜನೆಯಡಿಯಲ್ಲಿ ಕಠಿಣವಾದ ಸ್ಪರ್ಧಾತ್ಮಕ ಪ್ರವೇಶಪರೀಕ್ಷೆಗಳನ್ನು ಬರೆದು ಐಐಟಿ, ಐಐಎಂ, ಐಐಎಸಿ, ಎನ್‌ಐಟಿ ಮುಂತಾದಡೆ ಸೀಟು ಪಡೆಯುವ ಪ್ರತಿಭಾನ್ವಿತರಿಗೆ ಹಾಗೂ ನೀಟ್ ಮೂಲಕ ಸರ್ಕಾರಿ ಸೀಟು ಪಡೆದು ಎಂಬಿಬಿಎಸ್ ಓದುವವರಿಗೆ 2 ಲಕ್ಷ ರು. ಪ್ರೋತ್ಸಾಹಧನ ನೀಡ ಲಾಗುತ್ತಿದೆ. ಹೀಗಿರುವಾಗ ಆಡಳಿತ ಮಂಡಳಿ ಕೋಟಾದವರಿಗೆ 50 ಲಕ್ಷ ರು. ಪ್ರೋತ್ಸಾಹಧನ ನೀಡುವುದು ಅಸಮಂಜಸವಾಗುತ್ತದೆ ಎನ್ನುವ ಕಾರಣಕ್ಕೆ ಆರ್ಥಿಕ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ