SC, ST ವಿದ್ಯಾರ್ಥಿಗಳಿಗೆ ನಿರಾಸೆ.. ₹50 ಲಕ್ಷ ನೀಡುವ ಸ್ಕೀಮ್ಗೆ ಕೊಕ್..

SC, ST ವಿದ್ಯಾರ್ಥಿಗಳಿಗೆ ನಿರಾಸೆ.. ₹50 ಲಕ್ಷ ನೀಡುವ ಸ್ಕೀಮ್ಗೆ ಕೊಕ್..

ಬೆಂಗಳೂರು: ಮೆಡಿಕಲ್‌ ಕಾಲೇಜು ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಎಸ್ಸಿ, ಎಸ್ಟಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50 ಲಕ್ಷ ರೂಪಾಯಿವರೆಗೆ ಕಾಲೇಜು ಶುಲ್ಕ ಪಾವತಿಸುವ ಸಮಾಜ ಕಲ್ಯಾಣ ಇಲಾಖೆಯ ಪ್ರೋತ್ಸಾಹಧನ ಯೋಜನೆಯನ್ನು ಆರ್ಥಿಕ ಇಲಾಖೆಯು ತಿರಸ್ಕರಿಸಿದೆ.

ಸಮಾಜ ಕಲ್ಯಾಣ ಇಲಾಖೆಯು ಅ.24ರಂದು ಹೊರಡಿಸಿರುವ ‘ಸೇರ್ಪಡೆ ಆದೇಶ’ದ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.95ರಷ್ಟು ಅಂಕ ಪಡೆದು, ನೀಟ್ ಪರೀಕ್ಷೆಯ ರ್ಯಾಂಕ್‌ನಿಂದ ಸರ್ಕಾರಿ ಕೋಟಾದಡಿ ಸೀಟ್ ಲಭ್ಯವಾಗದೆ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ಕಾಲೇಜು ಶುಲ್ಕ ಪಾವತಿಸಲು 25 ಲಕ್ಷ ಪ್ರೋತ್ಸಾಹ ಧನ ನೀಡಬೇಕು. ಅಲ್ಲದೇ, ಆ ವಿದ್ಯಾರ್ಥಿ 1ನೇ ವರ್ಷದ ಪರೀಕ್ಷೆಯಲ್ಲಿ ಶೇ.60 ರಷ್ಟು ಅಂಕ ಪಡೆದರೆ ಪುನಃ 25 ಲಕ್ಷ ರೂಪಾಯಿ ಮಂಜೂರು ಮಾಡಬೇಕು ಎಂದು ತಿಳಿಸಲಾಗಿತ್ತು. ಆದರೆ, ಈ ಆದೇಶ ಹೊರಡಿಸಿದ ಎರಡೇ ದಿನಗಳಲ್ಲಿ ಅಂದರೆ ಅ.26ರಂದು ಹಣಕಾಸು ಇಲಾಖೆಯು ಪ್ರಸ್ತಾವನೆಯನ್ನು ತಿರಸ್ಕರಿಸಿದೆ.

ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯೊಂದಿಗೆ ಮೆರಿಟ್ ಆಧಾರದ ಮೇಲೆ ಹಾಸ್ಟೆಲ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೂಲಸೌಕರ್ಯ ಸುಧಾರಣೆಗಾಗಿ ಅನುದಾನ ಕೋರಿರುವ ಅನೇಕ ಪ್ರಸ್ತಾವನೆಗಳು ಬಾಕಿ ಇವೆ. ಇಂತಹ ಸಂದರ್ಭದಲ್ಲಿ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರೋತಾಹಧನ ನೀಡುವ ಯೋಜನೆಯನ್ನು ಕೈಬಿಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನುಸಾರ ಈ ಕ್ರಮ ವಹಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಗೆ ಆರ್ಥಿಕ ಇಲಾಖೆ ತಿಳಿಸಿದೆ ಎಂದು ಮೂಲಗಳಿಂದ ಖಚಿತವಾಗಿದೆ.

ಮೆರಿಟ್ ಸೀಟು ಪಡೆದವರಿಗೆ ಸಿಗೋದು ₹2 ಲಕ್ಷ!

ಇಲಾಖೆಯು ಹಾಲಿ ಹೊಂದಿರುವ ಯೋಜನೆಯಡಿಯಲ್ಲಿ ಕಠಿಣವಾದ ಸ್ಪರ್ಧಾತ್ಮಕ ಪ್ರವೇಶಪರೀಕ್ಷೆಗಳನ್ನು ಬರೆದು ಐಐಟಿ, ಐಐಎಂ, ಐಐಎಸಿ, ಎನ್‌ಐಟಿ ಮುಂತಾದಡೆ ಸೀಟು ಪಡೆಯುವ ಪ್ರತಿಭಾನ್ವಿತರಿಗೆ ಹಾಗೂ ನೀಟ್ ಮೂಲಕ ಸರ್ಕಾರಿ ಸೀಟು ಪಡೆದು ಎಂಬಿಬಿಎಸ್ ಓದುವವರಿಗೆ 2 ಲಕ್ಷ ರು. ಪ್ರೋತ್ಸಾಹಧನ ನೀಡ ಲಾಗುತ್ತಿದೆ. ಹೀಗಿರುವಾಗ ಆಡಳಿತ ಮಂಡಳಿ ಕೋಟಾದವರಿಗೆ 50 ಲಕ್ಷ ರು. ಪ್ರೋತ್ಸಾಹಧನ ನೀಡುವುದು ಅಸಮಂಜಸವಾಗುತ್ತದೆ ಎನ್ನುವ ಕಾರಣಕ್ಕೆ ಆರ್ಥಿಕ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ