ಅನರ್ಹತೆ: ವಿನೇಶ್ ಫೋಗಟ್‌ರಿಂದ ಪದಕ ಕಸಿಯಲಾಗಿದೆ ಎಂದು ಟ್ವೀಟ್ ಮಾಡಿದ ಕ್ರಿಕೆಟ್ ದೇವರು!

ಅನರ್ಹತೆ: ವಿನೇಶ್ ಫೋಗಟ್‌ರಿಂದ ಪದಕ ಕಸಿಯಲಾಗಿದೆ ಎಂದು ಟ್ವೀಟ್ ಮಾಡಿದ ಕ್ರಿಕೆಟ್ ದೇವರು!

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನ 50 ಕೆಜಿ ವಿಭಾಗದ ಮಹಿಳೆಯರ ಕುಸ್ತಿ ಫೈನಲ್ ಸ್ಪರ್ಧೆಯಿಂದ ಕೆಲವೇ ಗ್ರಾಂ ತೂಕದ ಕಾರಣ ಅನರ್ಹಗೊಂಡಿರುವ ವಿನೇಶ್ ಫೋಗಟ್ (Vinesh Pogat) ಅವರಿಗೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಅಂತೆಯೇ ವಿನೇಶ್ (Vinesh Pogat) ಫೈನಲ್‌ಗೆ ನ್ಯಾಯಯುತವಾಗಿ ಅರ್ಹತೆ ಪಡೆದಿದ್ದಾರೆ. ಹೀಗಾಗಿ ಅರ್ಹ ಪದಕವನ್ನು ಕಸಿದುಕೊಳ್ಳಲಾಗಿದೆ ಎಂದು ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Join Our Telegram: https://t.me/dcgkannada

ಈ ಕುರಿತು ಟ್ವಿಟ್ ಮಾಡಿರುವ ಅವರು, ವಿನೇಶ್ (Vinesh Pogat) ಫೈನಲ್‌ಗೆ ನ್ಯಾಯಯುತವಾಗಿ ಅರ್ಹತೆ ಪಡೆದಿದ್ದಾರೆ. ಹೀಗಾಗಿ ಅರ್ಹ ಪದಕವನ್ನು ಕಸಿದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಸಾಮರ್ಥ್ಯ ವರ್ಧನೆಯ ಔಷಧಿಗಳ ಬಳಕೆಯಂತಹ ದುಷ್ಕೃತ್ಯಗಳಾಗಿದ್ದರೆ ಅನರ್ಹತೆ ಅರ್ಥಪೂರ್ಣವಾಗುತ್ತಿತ್ತು. ವಿನೇಶ್‌ಗೆ ಅರ್ಹ ಮನ್ನಣೆ ಸಿಗುತ್ತದೆ.

ಪ್ರತಿಯೊಂದು ಕ್ರೀಡೆಗೂ ನಿಯಮಗಳಿವೆ. ಆ ನಿಯಮಗಳನ್ನು ಸಂದರ್ಭಕ್ಕೆ ಅನುಗುಣವಾಗಿ ನೋಡಬೇಕು. ನಿಯಮಗಳನ್ನು ಕಾಲಕಾಲಕ್ಕೆ ಮರುಪರಿಶೀಲಿಸಬಹುದು.

ವಿನೇಶ್ ಫೋಗಟ್ ಫೈನಲ್‌ಗೆ ಅರ್ಹತೆ ಪಡೆದಿದ್ದರು. ಬಳಿಕ ಹೆಚ್ಚು ತೂಕದ ಆಧಾರದ ಮೇಲೆ ಅವರನ್ನು ಅನರ್ಹಗೊಳಿಸಲಾಯಿತು. ಅವರಿಂದ ಬೆಳ್ಳಿ ಪದಕವನ್ನು ಕಸಿದುಕೊಳ್ಳುವುದು ಕ್ರೀಡಾ ಪ್ರಜ್ಞೆಯನ್ನು ಉಲ್ಲಂಘನೆಯಾಗಿದೆ.

ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಔಷಧಿಗಳ ಬಳಕೆಯಂತಹ ನೈತಿಕತೆಯ ಉಲ್ಲಂಘನೆಗಳಿಗಾಗಿ ಕ್ರೀಡಾಪಟುವನ್ನು ಅನರ್ಹಗೊಳಿಸಿದ್ದರೆ ಅದು ಅರ್ಥವಾಗುತ್ತಿತ್ತು. ಅಂತಹ ಸಂದರ್ಭದಲ್ಲಿ ಯಾವುದೇ ಪದಕ ನೀಡದಿರುವುದು ಮತ್ತು ಕೊನೆಯ ಸ್ಥಾನಕ್ಕೆ ಕೊಂಡೊಯ್ಯುವುದು ಸಮರ್ಥನೀಯ.

ಇದನ್ನೂ ಓದಿ: ನಾಗರ ಪಂಚಮಿಯಂದೇ ಹಾವು ಕಚ್ಚಿ ಬಾಣಂತಿ ದುರ್ಮರಣ!

ವಿನೇಶ್ ತನ್ನ ಎದುರಾಳಿಗಳನ್ನು ನ್ಯಾಯಯುತವಾಗಿ ಸೋಲಿಸಿ ಅಗ್ರ ಎರಡರೊಳಗಿನ ಸ್ಥಾನ ತಲುಪಿದರು. ಅವರು ಖಂಡಿತವಾಗಿಯೂ ಬೆಳ್ಳಿ ಪದಕಕ್ಕೆ ಅರ್ಹರು.

ನಾವೆಲ್ಲರೂ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ. ವಿನೇಶ್ ಅವರಿಗೆ ಅರ್ಹವಾದ ಮನ್ನಣೆ ಸಿಗುತ್ತದೆ ಎಂದು ನಾವು ಭಾವಿಸುತ್ತೇವೆ ಮತ್ತು ಪ್ರಾರ್ಥಿಸೋಣ ಎಂದು ಸುದೀರ್ಘವಾಗಿ ಬರೆದಿದ್ದಾರೆ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ