Distribution of Kits for Ramadan Celebrations: Donation should be motivation, not propaganda: Satish Oswal

ರಂಜಾನ್ ಹಬ್ಬದ ಆಚರಣೆಗೆ ಕಿಟ್ ವಿತರಣೆ:ದಾನ, ಧರ್ಮ ಪ್ರಚಾರವಾಗದೇ ಪ್ರೇರಣೆಯಾಗಿರಲಿ: ಸತೀಶ ಓಸ್ವಾಲ್

ರಂಜಾನ್ ಹಬ್ಬದ ಆಚರಣೆಗೆ ಕಿಟ್ ವಿತರಣೆ:ದಾನ, ಧರ್ಮ ಪ್ರಚಾರವಾಗದೇ ಪ್ರೇರಣೆಯಾಗಿರಲಿ: ಸತೀಶ ಓಸ್ವಾಲ್

ಮುದ್ದೇಬಿಹಾಳ : ಸಮಾಜಕ್ಕೆ ಪ್ರೇರಣೆಯಾಗುವ ಸೇವೆಯನ್ನು ನಾವೆಲ್ಲ ಮಾಡಬೇಕು ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್ ಹೇಳಿದರು.

ಪಟ್ಟಣದ ಮೇಲಿನ ಓಣಿಯಲ್ಲಿ ಲಾಡ್ಲೇಮಶ್ಯಾಕ್ ನಾಯ್ಕೋಡಿ ಕುಟುಂಬದವರಿಂದ ಭಾನುವಾರ ಬಡ ಮುಸ್ಲಿಂರಿಗೆ ರಂಜಾನ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾಲ್ಕು ಜನರಿಗೆ ಒಳ್ಳೆಯದನ್ನು ಮಾಡಬೇಕು ಎಂಬ ಚಿಂತನೆಯಳ್ಳವರಿಂದ ಇಂತಹ ಕಾರ್ಯ ಸಾಧ್ಯ ಎಂದರು.

ಸಹಕಾರಿ ಧುರೀಣ ಲಾಡ್ಲೇಮಶಾಕ ನಾಯ್ಕೋಡಿ ಮಾತನಾಡಿ, ನನ್ನ ತಾಯಿಯ ಆಸೆಯಂತೆ ಏಳು ವರ್ಷದಿಂದ ಆಹಾರಧಾನ್ಯ ಕಿಟ್‌ನ್ನು ಕೊಡುವ ಕೆಲಸ ಮಾಡುತ್ತಿದ್ದೇವೆ. ನಾವು ಇದು ಪ್ರಚಾರಕ್ಕೆ ಮಾಡುತ್ತಿಲ್ಲ. ಇದು ಮತ್ತೊಬ್ಬರಿಗೆ ಪ್ರೇರಣೆದಾಯಕವಾಗಲಿ ಎಂದು ಕಿಟ್ ವಿತರಿಸುತ್ತಿದ್ದೇವೆ ಎಂದರು.

ಎಂಜಿವಿಸಿ ಕಾಲೇಜು ಪ್ರಾಧ್ಯಾಪಕ ಅಬ್ದುಲರಹೀಮ ಮುಲ್ಲಾ ಮಾತನಾಡಿ, ಶ್ರೀಮಂತರು ಧಾನ ಧರ್ಮ ಮಾಡುವೂದು ದೊಡ್ಡದಲ್ಲ. ಆದರೆ ಲಾಡ್ಲೇಮಶಾಕ ನಾಯ್ಕೋಡಿ ಅವರು ಅಷ್ಟೊಂದು ಉಳ್ಳವರಲ್ಲ. ಮಧ್ಯಮ ವರ್ಗದಲ್ಲಿದ್ದುಕೊಂಡು ತಾವು ದುಡಿದ ಆದಾಯದಲ್ಲಿ ಬಡವರಿಗೆ ಮೀಸಲಿಟ್ಟು ರಂಜಾನ ತಿಂಗಳಲ್ಲಿ ಜಕಾತಿನ ಹೆಸರಲ್ಲಿ ತಮ್ಮ ಸಮಾಜ ಅಷ್ಟೇ ಅಲ್ಲದೆ ಇತರೆ ಸಮಾಜದ ಬಡ ಕುಟುಂಬದವರನ್ನು ಮನೆಗೆ ಕರಿಯಿಸಿ ಆಹಾರಧಾನ್ಯ ಕಿಟ್ ವಿತರಿಸುವುದು ಇನೊಬ್ಬರಿಗೆ ಪೇರಣೆಯಾಗಿದೆ ಎಂದರು.

ದಿವ್ಯ ಸಾನಿದ್ಯವನ್ನು ಮೌಲಾನ ನಿಸಾರಅಹ್ಮದ ಜಾಮಿಯ ವಹಿಸಿದ್ದರು. ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ, ಮುಖಂಡರಾದ ಎಂ. ಬಿ. ಜಕ್ಕೇರಾಳ, ಹೈದರಲಿ ನಾಯ್ಕೋಡಿ, ರಫೀಕ ಶಿರೋಳ, ಅಜೀಜ್ ಢವಳಗಿ, ನಬೀಲಾಲ ನಾಯ್ಕೋಡಿ, ದಾವಲಬಿ ನಾಯ್ಕೋಡಿ, ಬುಡ್ಡೇಸಾಬ ಚಪ್ಪರಬಂದ ಇದ್ದರು.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ