Distribution of smart cards to 91 categories of unorganized workers: Labor Minister Lad

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

ಮೈಸೂರು,ಆ.06: ರಾಜ್ಯದಲ್ಲಿ ಶೇ 83 ರಷ್ಟು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸಣ್ಣ ವೃತ್ತಿಯಲ್ಲಿ ತೊಡಗಿರುವ 91 ವರ್ಗದ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಡೀಸೆಲ್- ಪೆಟ್ರೋಲ್ ‌ಮೇಲಿನ ಸೆಸ್ ನಲ್ಲಿ ಒಂದಂಶ ಪಡೆದು ಅದನ್ನು ಕಾರ್ಮಿಕರ ಕಲ್ಯಾಣಕ್ಕೆ ನೀಡುವ ಚಿಂತನೆ ಇದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಹೇಳಿದರು.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಮೈಸೂರು ಇವರ ಸಹಯೋಗದಲ್ಲಿ ಮೈಸೂರು ಜಿಲ್ಲೆಯ ವಿವಿಧ ಸಂಘಟಿತ ಕಾರ್ಮಿಕರಿಗೆ “ಸ್ಮಾರ್ಟ್ ಕಾರ್ಡ್” ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿ 25.55 ಲಕ್ಷ ಕಾರ್ಮಿಕರು ನೋಂದಣಿ ಆಗಿದ್ದಾರೆ. ಸಾರಿಗೆ ವಲಯದಲ್ಲಿ 10.55 ಲಕ್ಷ ಕಾರ್ಮಿಕರು ನೋಂದಣಿ ಆಗಿದ್ದಾರೆ. ಪತ್ರಿಕಾ ವಿತರಕರ ವರ್ಗದಲ್ಲಿ 7 ಸಾವಿರ ಅಸಂಘಟಿತ ಕಾರ್ಮಿಕರು ನೋಂದಣಿ ಆಗಿದ್ದಾರೆ ಎಂದು ತಿಳಿಸಿದರು.

ಸಾರಿಗೆ ವಲಯದಲ್ಲಿ ಅಪಘಾತ ಆಗಿ ಮರಣ ಹೊಂದಿದರೆ 5 ಲಕ್ಷ ಅಪಘಾತ ವಿಮೆ ನೀಡಲಾಗುತ್ತದೆ. ಇತರೆ ವರ್ಗದ ಕಾರ್ಮಿಕರು ಅಪಘಾತ ಆಗಿ ಮರಣ ಹೊಂದಿದರೆ 1 ಲಕ್ಷ ಅಪಘಾತ ವಿಮೆ, ಶಾಶ್ವತ ಅಂಗವಿಕಲತೆ ಉಂಟಾದರೆ 1 ಲಕ್ಷ , ಆಸ್ಪತ್ರೆ ವೆಚ್ಚ ಮರುಪಾವತಿ 50 ಸಾವಿರ, ಸಹಜ ಸಾವು ಸಂಭವಿಸಿದರೆ 10 ಸಾವಿರ ನೀಡಲಾಗುತ್ತದೆ ಎಂದು ತಿಳಿಸಿದರು.

ದೇಶದಲ್ಲಿ ತಲಾ ಆದಾಯದಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿ ಇದೆ.‌ ಜಿಎಸ್ ಟಿ ಸಂಗ್ರಹದಲ್ಲೂ ಮುಂಚೂಣಿಯಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಯಶಸ್ಸು ಕಾರಣ. ಆಶಾ ದೀಪ ಕಾರ್ಯಕ್ರಮದಲ್ಲಿ ಎಸ್ ಸಿ/ ಎಸ್ ಟಿ ವರ್ಗದವರಿಗೆ ಕೆಲಸ ನೀಡುವವರಿಗೆ ರೂ 7500 ವರೆಗೆ ನೆರವು ನೀಡಲಾಗುತ್ತಿದೆ. ಹೊರಗುತ್ತಿಗೆ ನೌಕರರು ಸೊಸೈಟಿ ಮೂಲಕ ಕಾರ್ಯ ನಿರ್ವಹಿಸಲಿದ್ದು, ಸಂಬಳ ಸಮಸ್ಯೆ ತಪ್ಪಲಿದೆ. ಮುಂದಿನ ದಿನಗಳಲ್ಲಿ ಮನೆ ಕೆಲಸ ಕಾರ್ಮಿಕರಿಗೆ ಕನಿಷ್ಢ ವೇತನ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದರು.

ಚಾಮರಾಜ ಕ್ಷೇತ್ರದ ವಿಧಾನಸಭಾ ಶಾಸಕರಾದ ಕೆ ಹರೀಶ್ ಗೌಡ ಅವರು ಮಾತನಾಡಿ ಚಾಮರಾಜ ಕ್ಷೇತ್ರದಲ್ಲಿ 60 ಸಾವಿರ ಅಸಂಘಟಿತ ಕಾರ್ಮಿಕರಿದ್ದಾರೆ. ಸರ್ಕಾರದ ಯೋಜನೆಗಳ ಕುರಿತು ರಾಜ್ಯವ್ಯಾಪಿ ಪ್ರಚಾರ ನಡೆಸಬೇಕಿದೆ ಎಂದು ಹೇಳಿದರು.

ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಸುಮಾರು 40 ಲಕ್ಷ ಇರು ವುದಾಗಿ ಅಂದಾಜಿಸಲಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ, ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಕೃಷ್ಣರಾಜನಗರ ವಿಧಾನಸಭೆ ಕ್ಷೇತ್ರದ ಶಾಸಕರಾದ ರವಿಶಂಕರ್ .ಡಿ, ವಿಧಾನ ಪರಿಷತ್ತಿನ ಶಾಸಕರಾದ ಡಾ. ಯತೀಂದ್ರ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯಕೇಶ್ ಕುಮಾರ್, ಅಪರ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿಗಳಾದ ಡಾ. ಎಸ್. ಬಿ ರವಿಕುಮಾರ್ , ಕಾರ್ಮಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Latest News

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ

ಸಿದ್ಲೀಪುರ(ಶಿವಮೊಗ್ಗ ಜಿಲ್ಲೆ) ಆಗಸ್ಟ್‌ 04: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಶಿವಮೊಗ್ಗ, ಆಗಸ್ಟ್ 04 : ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು,

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಮುಧೋಳ : ನಗರದ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕೋ ಅರ್ಡಿನೆಟರ್ ಅಗಿದ್ದ ನಗರದ

ಮಹಿಳಾ ಕಾಂಗ್ರೆಸ್‌ಗೆ ಅಕ್ಷತಾ ಚಲವಾದಿ ನೇಮಕ

ಮಹಿಳಾ ಕಾಂಗ್ರೆಸ್‌ಗೆ ಅಕ್ಷತಾ ಚಲವಾದಿ ನೇಮಕ

ಮುದ್ದೇಬಿಹಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷೆಯಾಗಿ ಅಕ್ಷತಾ ಶರಣು ಚಲವಾದಿ ಅವರನ್ನು

ವಲಯ ಮಟ್ಟದ ಕ್ರೀಡಾಕೂಟ: ಕರ್ಲಕೊಪ್ಪ ಶಾಲೆಯ ಬಾಲಕಿಯರಿಗೆ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ

ವಲಯ ಮಟ್ಟದ ಕ್ರೀಡಾಕೂಟ: ಕರ್ಲಕೊಪ್ಪ ಶಾಲೆಯ ಬಾಲಕಿಯರಿಗೆ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ

ಕುಳಗೇರಿ ಕ್ರಾಸ್: ಸಮೀಪದ ಕುಳಗೇರಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರ್ ಎಸ್ ಕೆ ಯಲ್ಲಿ ಆಯೋಜನೆಗೊಂಡಿತ್ತು. ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಲಕೊಪ್ಪದ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ಬಾಲಕಿಯರ ಕಬ್ಬಡ್ಡಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ವೈಯಕ್ತಿಕ ಆಟಗಳಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರಿಗೆ ಶಾಲಾ ಆಡಳಿತ ಹಾಗೂ ಎಸ್.ಡಿ.ಎಂ.ಸಿಯ ಅಧ್ಯಕ್ಷರು ಮತ್ತು ಸರ್ವ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಮುದ್ದೇಬಿಹಾಳ : ರಂಜಾನ್ ಮಾಸದಲ್ಲಿ ಈದ್ ಸೌಹಾರ್ದ ಕೂಟ ಏರ್ಪಡಿಸಿದಂತೆ ಈ ಬಾರಿ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಶ್ರಾವಣ ಮಾಸದ ಸೌಹಾರ್ದ ಕೂಟ ಹಮ್ಮಿಕೊಂಡಿದ್ದೇವೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ತಾಳಿಕೋಟಿ, ಮುದ್ದೇಬಿಹಾಳ ಹಾಗೂ ನಾಲತವಾಡದಲ್ಲಿ ಅನೇಕ ವರ್ಷಗಳಿಂದ ಟ್ರಸ್ಟ್ನಿಂದ ವಿಧವೆಯರಿಗೆ ಪಿಂಚಣಿ, ಈದ್ ಕಿಟ್ ವಿತರಣೆ, ಬೀದಿಯಲ್ಲಿರುವ ನಿರಾಶ್ರಿತರಿಗೆ ಆಶ್ರಯ, ಬಡ ವಿದ್ಯಾರ್ಥಿಗಳಿಗೆ