Distribution of smart cards to 91 categories of unorganized workers: Labor Minister Lad

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

ಮೈಸೂರು,ಆ.06: ರಾಜ್ಯದಲ್ಲಿ ಶೇ 83 ರಷ್ಟು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸಣ್ಣ ವೃತ್ತಿಯಲ್ಲಿ ತೊಡಗಿರುವ 91 ವರ್ಗದ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಡೀಸೆಲ್- ಪೆಟ್ರೋಲ್ ‌ಮೇಲಿನ ಸೆಸ್ ನಲ್ಲಿ ಒಂದಂಶ ಪಡೆದು ಅದನ್ನು ಕಾರ್ಮಿಕರ ಕಲ್ಯಾಣಕ್ಕೆ ನೀಡುವ ಚಿಂತನೆ ಇದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಹೇಳಿದರು.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಮೈಸೂರು ಇವರ ಸಹಯೋಗದಲ್ಲಿ ಮೈಸೂರು ಜಿಲ್ಲೆಯ ವಿವಿಧ ಸಂಘಟಿತ ಕಾರ್ಮಿಕರಿಗೆ “ಸ್ಮಾರ್ಟ್ ಕಾರ್ಡ್” ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿ 25.55 ಲಕ್ಷ ಕಾರ್ಮಿಕರು ನೋಂದಣಿ ಆಗಿದ್ದಾರೆ. ಸಾರಿಗೆ ವಲಯದಲ್ಲಿ 10.55 ಲಕ್ಷ ಕಾರ್ಮಿಕರು ನೋಂದಣಿ ಆಗಿದ್ದಾರೆ. ಪತ್ರಿಕಾ ವಿತರಕರ ವರ್ಗದಲ್ಲಿ 7 ಸಾವಿರ ಅಸಂಘಟಿತ ಕಾರ್ಮಿಕರು ನೋಂದಣಿ ಆಗಿದ್ದಾರೆ ಎಂದು ತಿಳಿಸಿದರು.

ಸಾರಿಗೆ ವಲಯದಲ್ಲಿ ಅಪಘಾತ ಆಗಿ ಮರಣ ಹೊಂದಿದರೆ 5 ಲಕ್ಷ ಅಪಘಾತ ವಿಮೆ ನೀಡಲಾಗುತ್ತದೆ. ಇತರೆ ವರ್ಗದ ಕಾರ್ಮಿಕರು ಅಪಘಾತ ಆಗಿ ಮರಣ ಹೊಂದಿದರೆ 1 ಲಕ್ಷ ಅಪಘಾತ ವಿಮೆ, ಶಾಶ್ವತ ಅಂಗವಿಕಲತೆ ಉಂಟಾದರೆ 1 ಲಕ್ಷ , ಆಸ್ಪತ್ರೆ ವೆಚ್ಚ ಮರುಪಾವತಿ 50 ಸಾವಿರ, ಸಹಜ ಸಾವು ಸಂಭವಿಸಿದರೆ 10 ಸಾವಿರ ನೀಡಲಾಗುತ್ತದೆ ಎಂದು ತಿಳಿಸಿದರು.

ದೇಶದಲ್ಲಿ ತಲಾ ಆದಾಯದಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿ ಇದೆ.‌ ಜಿಎಸ್ ಟಿ ಸಂಗ್ರಹದಲ್ಲೂ ಮುಂಚೂಣಿಯಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಯಶಸ್ಸು ಕಾರಣ. ಆಶಾ ದೀಪ ಕಾರ್ಯಕ್ರಮದಲ್ಲಿ ಎಸ್ ಸಿ/ ಎಸ್ ಟಿ ವರ್ಗದವರಿಗೆ ಕೆಲಸ ನೀಡುವವರಿಗೆ ರೂ 7500 ವರೆಗೆ ನೆರವು ನೀಡಲಾಗುತ್ತಿದೆ. ಹೊರಗುತ್ತಿಗೆ ನೌಕರರು ಸೊಸೈಟಿ ಮೂಲಕ ಕಾರ್ಯ ನಿರ್ವಹಿಸಲಿದ್ದು, ಸಂಬಳ ಸಮಸ್ಯೆ ತಪ್ಪಲಿದೆ. ಮುಂದಿನ ದಿನಗಳಲ್ಲಿ ಮನೆ ಕೆಲಸ ಕಾರ್ಮಿಕರಿಗೆ ಕನಿಷ್ಢ ವೇತನ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದರು.

ಚಾಮರಾಜ ಕ್ಷೇತ್ರದ ವಿಧಾನಸಭಾ ಶಾಸಕರಾದ ಕೆ ಹರೀಶ್ ಗೌಡ ಅವರು ಮಾತನಾಡಿ ಚಾಮರಾಜ ಕ್ಷೇತ್ರದಲ್ಲಿ 60 ಸಾವಿರ ಅಸಂಘಟಿತ ಕಾರ್ಮಿಕರಿದ್ದಾರೆ. ಸರ್ಕಾರದ ಯೋಜನೆಗಳ ಕುರಿತು ರಾಜ್ಯವ್ಯಾಪಿ ಪ್ರಚಾರ ನಡೆಸಬೇಕಿದೆ ಎಂದು ಹೇಳಿದರು.

ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಸುಮಾರು 40 ಲಕ್ಷ ಇರು ವುದಾಗಿ ಅಂದಾಜಿಸಲಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ, ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಕೃಷ್ಣರಾಜನಗರ ವಿಧಾನಸಭೆ ಕ್ಷೇತ್ರದ ಶಾಸಕರಾದ ರವಿಶಂಕರ್ .ಡಿ, ವಿಧಾನ ಪರಿಷತ್ತಿನ ಶಾಸಕರಾದ ಡಾ. ಯತೀಂದ್ರ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯಕೇಶ್ ಕುಮಾರ್, ಅಪರ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿಗಳಾದ ಡಾ. ಎಸ್. ಬಿ ರವಿಕುಮಾರ್ , ಕಾರ್ಮಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ