ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ವಿಜಯಪುರ : ಇತ್ತೀಚಿಗೆ ಬೀಸಿದ‌‌ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು‌‌ ಮೂರು‌ ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ‌ ಕೆ. ಅವರು‌ ಅಧಿಕಾರಿಗಳಿಗೆ‌ ಸೂಚಿಸಿದರು.‌

ಕೃಷಿ, ತೋಟಗಾರಿಕೆ ಹಾಗೂ‌ ಕಂದಾಯ ಇಲಾಖೆ‌ ಅಧಿಕಾರಿಗಳು ಹಾಗೂ ಬೆಳೆ ವಿಮಾ ಕಂಪನಿಯ ಅಧಿಕಾರಿಗಳೊಂದಿಗೆ‌ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಈ ಸೂಚನೆ‌ ನೀಡಿದರು.

ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ರಚಿಸಿ ಹಾನಿಗೊಳಗಾದ ಕ್ಷೇತ್ರಗಳಿಗೆ ಭೇಟಿ ನೀಡಿ ನಿಖರವಾದ ಸಮೀಕ್ಷೆ ಕೈಗೊಂಡು 3 ದಿನಗೊಳಗಾಗಿ ಜಂಟಿ ಸಮೀಕ್ಷೆ ನಡೆಸಿ ವರದಿಯನ್ನು ನೀಡಬೇಕು ಎಂದು ಸೂಚಿಸಿದರು.

ಇತ್ತೀಚಿನ ದಿನಗಳಲ್ಲಿ ಬಿದ್ದ ಮಳೆ, ಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ ಬೆಳೆ ಹಾನಿಗೊಳಗಾದ ರೈತರು ಬೆಳೆ ವಿಮೆ ಮಾಡಿಸಿದ್ದರೆ ಅಂತಹ ರೈತರು ಮುಂದಿನ 3 ದಿನಗೊಳಗಾಗಿ (ಮುಂದಿನ 72 ಗಂಟೆಗೂಳಗಾಗಿ) ಓರಿಯಂಟಲ್ ಜನರಲ್ ಇನ್ಸೂರನ್ಸ್ ಕಂಪನಿ Toll Free Number 1800 425 6678 ಗೆ ಕರೆ ಮಾಡಿ ವೈಯಕ್ತಿಕ ಸ್ಥಳ ನಿರ್ದಿಷ್ಟ ವಿಕೋಪಗಳ (ILLA) ಕುರಿತು ದೂರು ದಾಖಲಿಸಬಹುದಾಗಿದೆ ಎಂದು‌ ಜಿಲ್ಲಾಧಿಕಾರಿಗಳು ಸೂಚಿಸಿದರು.

2025-26 ನೇ ಸಾಲಿನ RWBCIS ಯೋಜನೆಯಡಿ ದ್ರಾಕ್ಷಿ, ದಾಳಿಂಬೆ ಹಾಗೂ ಲಿಂಬೆ ಬೆಳೆಗಳಿಗೆ ಆಲಿಕಲ್ಲು ಮಳೆಯಿಂದಾಗಿ ಬೆಳೆಹಾನಿ ಸಂಭವಿಸಿದ್ದಲ್ಲಿ, ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾಗೂ ಮಾಹಿತಿಯನ್ನು 72 ಗಂಟೆಗಳೊಳಗಾಗಿ ಅಗ್ರಿಕಲ್ಟರ್ ಇನ್ಸುರನ್ಸ್ ಕಂಪನಿ ಆಪ್ ಇಂಡಿಯಾ ಲಿ. ರವರಿಗೆ Toll Free Number 1800 425 0505 ಗೆ ಕರೆ ಮಾಡಿ ರೈತರು ಮಾಹಿತಿ ನೀಡಬಹುದಾಗಿದೆ‌ ಎಂದರು.

ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ಎಲ್ಲಾ ಇಲಾಖಾ ಅಧಿಕಾರಿಗಳು 3 ದಿನಗಳೊಳಗಾಗಿ ಜಂಟಿ ಸಮೀಕ್ಷೆ ಕೈಗೊಂಡು ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.‌

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ