District In-charge Minister Santhosh Lad visited the flood affected areas of Kundagola Taluk

ಅತಿವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ

ಅತಿವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ

ಹುಬ್ಬಳ್ಳಿ, ಜೂನ್‌ 13: ಎರಡು ಮೂರು ದಿನದಿಂದ ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ‌. ಅಣ್ಣಿಗೇರಿ, ನವಲಗುಂದ ಹಾಗೂ ಕುಂದಗೋಳ ತಾಲೂಕಿನ 130 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಾನಿಯಾದ ಮನೆಗಳಿಗೆ ಎಸ್.ಡಿ.ಆರ್.ಎಫ್ ನಿಯಮಾವಳಿಗಳ ಅನುಸಾರ ಪರಿಶೀಲಿಸಿ, ಪರಿಹಾರವನ್ನು ನೀಡಲಾಗುತ್ತದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಹೇಳಿದರು.

ಇಂದು ಕುಂದಗೋಳ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಜಿಲ್ಲಾಡಳಿತದಿಂದ ಪರಿಹಾರ ಕಾರ್ಯಗಳು ನಡೆಯುತ್ತಿವೆ. ಇನ್ನೂ ಹೆಚ್ಚಾಗಿ ಮಳೆ ಬರುವ ಸಾಧ್ಯತೆಯಿದೆ. ಸಾರ್ವಜನಿಕರು ಜಾಗರೂಕರಾಗಬೇಕಿದೆ. ಜನರು ಸರ್ಕಾರ, ಜಿಲ್ಲಾಡಳಿತ ನೀಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲನೆ ಮಾಡಬೇಕು ಎಂದರು.

ಮೃತವ್ಯಕ್ತಿ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ

ಕಟ್ಟಿಹಳ್ಳ ದಾಟುವಾಗ ಮಳೆ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಟ್ರಾಕ್ಟರ್ ಉರುಳಿ ಬಿದ್ದಿದೆ. ಪರಿಣಾಮವಾಗಿ ಶಿವಯ್ಯ ಬಸಯ್ಯ ವಟ್ನಾಳಮಠ ಅವರು ಮೃತಪಟ್ಟಿದ್ದಾರೆ. ಜಾಗ್ರತೆ ವಹಿಸಿದ್ದರೆ ಒಂದು ಜೀವ ಉಳಿಯುತ್ತಿತ್ತು. ಇನ್ನೂ ಇಬ್ಬರಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರ್ಘಟನೆ ನಡೆಯಬಾರದಿತ್ತು. ಶಾಸಕರು, ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಸರ್ಕಾರದ ವತಿಯಿಂದ ಮೃತ ಕುಟುಂಬಸ್ಥರಿಗೆ ರೂ.5 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಧಾರವಾಡ ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುತ್ತದೆ. ಪ್ರವಾಹ ರೀತಿಯಲ್ಲಿ ಹಳ್ಳಗಳು ಹರಿಯುತ್ತಿವೆ‌. ಇಂತಹ ಸಂದರ್ಭದಲ್ಲಿ ಬೈಕ್, ಕಾರ್, ಟ್ರಾಕ್ಟರ್, ಲಾರಿ, ಬಸ್ ಸೇರಿದಂತೆ ಯಾವುದೇ ರೀತಿಯ ವಾಹನಗಳನ್ನು ಹಳ್ಳಗಳನ್ನು, ಸೇತುವೆಗಳನ್ನು ದಾಟುವಾಗ ಎಚ್ಚರಿಕೆ ವಹಿಸಬೇಕು. ಯಾವುದೇ ರೀತಿಯ ದುಸ್ಸಾಹಸಕ್ಕೆ ಸಾರ್ವಜನಿಕರು ಮುಂದಾಗಬಾರದು. ನೀರು ಹರಿಯುವ ಪ್ರಮಾಣ ಇಳಿಮುಖವಾದ ನಂತರ ಜನರು ಹಳ್ಳ, ಸೇತುವೆಗಳನ್ನು ದಾಟಬೇಕು ಎಂದು ಹೇಳಿದರು.

ಸರ್ಕಾರ ಹಂತದಲ್ಲಿ ಮೂರು ತಿಂಗಳ ಹಿಂದೆ ಕಟ್ಟಿಹಳ್ಳ ಸೇತುವೆ ಬಗ್ಗೆ ಶಾಸಕರು, ಇಲಾಖೆ ಅಧಿಕಾರಿಗಳು ವರದಿಯನ್ನು ಸಲ್ಲಿಸಿದ್ದಾರೆ. ಬಯಲು ಪ್ರದೇಶದಲ್ಲಿ ಈ ತರಹದ ಸಾಕಷ್ಟು ಸೇತುವೆಗಳನ್ನು ನಿರ್ಮಾಣ ಮಾಡಲಾಗಿದ್ದು, ಅಲ್ಲದೇ ಇನ್ನೂ ಸೇತುವೆಗಳು ಬೇಕಾಗಿವೆ. ಈ ಪ್ರದೇಶದಲ್ಲಿನ ಪ್ರಮುಖವಾದ ಕಟ್ಟಿ ಹಳ್ಳ ಸೇತುವೆ ಮಾತ್ರ ಉಳಿದುಕೊಂಡಿದೆ. ಈ ಸೇತುವೆ ನಿರ್ಮಾಣಕ್ಕೆ ಸ್ವತಃ ಸಂಧಿಸಿದ ಸಚಿವರಲ್ಲಿ ಮನವಿ ಮಾಡಿ, ಶೀಘ್ರಗತಿಯಲ್ಲಿ ಬ್ರಜ್ ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಚಿವರು ತಿಳಿಸಿದರು.

ಹಳ್ಳಗಳ ಅಗಲೀಕರಣ ಮಾಡಿದಾಗ ಸಹ ಬದುಗಳಲ್ಲಿ ನೀರು ತುಂಬುತ್ತದೆ. ಸುಮಾರು 30 ರಿಂದ 60 ಕಿ.ಮೀ‌. ವರೆಗೆ ರೂ.200 ಕೋಟಿ ವೆಚ್ಚದಲ್ಲಿ ಬೆಣ್ಣೆ ಹಳ್ಳ ಹೂಳು ತೆಗೆಯಲಾಗುತ್ತದೆ. ರೈತರು ತಮ್ಮ ಹೊಲಗಳಲ್ಲಿನ ಬದುಗಳನ್ನು ಅಗಲೀಕರಣ ಮಾಡಲು ಅವಕಾಶ ನೀಡುವುದಿಲ್ಲ. ರೈತರು ಜೆಸಿಬಿಗಳನ್ನು ವಾಪಸ್ಸು ಕಳಿಸುತ್ತಿದ್ದಾರೆ. ಇದರಿಂದ ಸಮಸ್ಯೆಗಳು ಉಳಿದುಕೊಳ್ಳುತ್ತವೆ. ರೈತರು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಹುಬ್ಬಳ್ಳಿಯ ನೇಕಾರ ನಗರದಲ್ಲಿ ಹುಸೇನಸಾಬ್ ಎಂಬುವವರು ನೀರಿನಲ್ಲಿ ಕೊಚ್ಚಿ ಕೊಂಡು ಹೋಗಿರುವ ಸಾಧ್ಯತೆ ಇದೆ. ಅವರ ಪತ್ತೆಗೆ ಪೊಲೀಸ್, ಅಗ್ನಿಶಾಮಕ, ಎಸ್‌‌ಡಿಆರ್‌‌ಎಫ್ ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ. ಘಟನಾ ಸ್ಥಳ ಸಮೀಪದ ಸಿಸಿಟಿವಿಯನ್ನು ಪರಿಶೀಲನೆ ಮಾಡಲಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದೆ ಎಂದು ಅವರು ಮಾಹಿತಿ ನೀಡಿದರು.

ರೂ. 5 ಲಕ್ಷ ಪರಿಹಾರ ಬಿಡುಗಡೆ ಆದೇಶದ ಪ್ರತಿ

ಕುಂದಗೋಳ ತಾಲೂಕಿನಲ್ಲಿ ಹಂಚನಾಳ-ದ್ಯಾವೂರ ಗ್ರಾಮಗಳ ಮದ್ಯದಲ್ಲಿ ಹರಿಯುವ ಕಟ್ಟಿಹಳ್ಳದಲ್ಲಿ ಟ್ರ್ಯಾಕ್ಟರ್ ಮೇಲೆ ಹೋಗುವಾಗ ಪ್ರವಾಹಕ್ಕೆ ಸಿಲುಕಿ ಮೃತನಾದ ಶಿವಯ್ಯ ಬಸಯ್ಯ ವಟ್ನಾಳಮಠ ಇವರ ಮನೆಗೆ ಸಚಿವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ಸರ್ಕಾರದಿಂದ ರೂ. 5 ಲಕ್ಷ ಪರಿಹಾರ ಬಿಡುಗಡೆ ಮಾಡಿದ ಆದೇಶದ ಪ್ರತಿಯನ್ನು ಕುಟುಂಬಸ್ಥರಿಗೆ ವಿತರಿಸಿದರು.

ಗಾಯಾಳುವಿಗೆ ಆರ್ಥಿಕ ನೆರವು ನೀಡಿದ ಸಚಿವರು

ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಟ್ಟಿಹಳ್ಳದ ಟ್ರ್ಯಾಕ್ಟರ್ ದುರಂತದಲ್ಲಿ ಸಿಲುಕಿ ಗಾಯಾಳು ಆಗಿದ್ದ ವಾಸು ಶಿವಪ್ಪ ಹೈಬತಿ ಅವರ ಆರೋಗ್ಯವನ್ನು ಸಚಿವರು ವಿಚಾರಣೆ ನಡೆಸಿದರು. ಗಾಯಾಳುವಿಗೆ ಸ್ವತಃ ರೂ. 20 ಸಾವಿರ ಹಣವನ್ನು ವಿತರಿಸಿದರು. ಅಲ್ಲದೇ ವೈದ್ಯರಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಕುಂದಗೋಳ ತಾಲೂಕು ಆಸ್ಪತ್ರೆ, ಹಂಚಿನಾಳ ಮತ್ತು ದೇವನೂರ ಮಧ್ಯೆ ಬರುವ ಕಟ್ಟಿ ಹಳ್ಳದ ವೀಕ್ಷಣೆ, ದೇವನೂರ ಮತ್ತು ಕಮಡೊಳ್ಳಿ ಮಧ್ಯೆ ಬರುವ ಬೆಣ್ಣೆ ಹಳ್ಳ ಮತ್ತು ಬೆಳೆ ಹಾನಿ ವೀಕ್ಷಣೆ, ಹಿರೇನರ್ತಿ ಗ್ರಾಮದ ರಸ್ತೆ ಹಾಗೂ ಸರಕಾರಿ ಪ್ರೌಢಶಾಲೆ ವೀಕ್ಷಣೆ ಹಾಗೂ ಮುಳ್ಕೊಳ್ಳಿ ಗ್ರಾಮದ ರಸ್ತೆ ಹಾಗೂ ಬೆಳೆ ಹಾನಿ ವೀಕ್ಷಣೆ ಮಾಡಿದರು.

ಶಾಸಕ ಎಂ.ಆರ್.ಪಾಟೀಲ, ಮಾಜಿ ಶಾಸಕರಾದ ಎಂ.ಎಸ್.ಅಕ್ಕಿ, ಕುಸುಮಾವತಿ ಶಿವಳ್ಳಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಡಿವೈಎಸ್ಪಿ ವಿನೋದ ಮುಕ್ತೆದಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಕುಂದಗೋಳ ತಹಶೀಲ್ದಾರ ರಾಜು ಮಾವರಕರ, ಡಿಎಚ್ಓ ಡಾ.ಹೋನಕೇರಿ, ಹಿರಿಯ ಕಾರ್ಮಿಕ ನಿರೀಕ್ಷಕಿ ರಜನಿ ಹಿರೇಮಠ, ಕುಂದಗೋಳ ತಾಲೂಕು ವೈದ್ಯಾಧಿಕಾರಿ ಡಾ.ಸೋಫಿಯಾ, ಸಿಪಿಐ ನವೀನ ಜಕಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು, ರೈತರು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ