Lokayukta vs DKS: BIG SHOCK for DCM DK Shivakumar after CM

DK Shivakumar ಡಿಸೆಂಬರ್​ ಒಳಗೆ ಸಿಎಂ ಆಗ್ತಾರೆ..! ಸ್ಫೋಟಕ ಭವಿಷ್ಯ..

DK Shivakumar ಡಿಸೆಂಬರ್​ ಒಳಗೆ ಸಿಎಂ ಆಗ್ತಾರೆ..! ಸ್ಫೋಟಕ ಭವಿಷ್ಯ..

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಆರೋಪ ಕೇಳಿಬಂದಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಸಿಎಂ ವಿರುದ್ಧ ತನಿಖೆಗೂ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಮುಡಾ ಕಂಟಕ ಎದುರಾಗಿದೆ. ಏತನ್ಮಧ್ಯೆ, ಸಿಎಂ ರಾಜೀನಾಮೆ ಮಾತು ಜೋರಾಗಿ ಕೇಳಿಬರುತ್ತಿವೆ. ಇದರ ಮಧ್ಯೆ ಯೇ ವಿಪಕ್ಷ ನಾಯಕ ಆರ್.. ಅಶೋಕ್​ (R Ashok) ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ.

Join Our Telegram: https://t.me/dcgkannada

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸೆಂಬರ್​ ಒಳಗಡೆ ಡಿ.ಕೆ ಶಿವಕುಮಾರ್​ (DK Shuvakumar) ಮುಖ್ಯಮಂತ್ರಿ ಆಗುತ್ತಾರೆ ಎಂದು ಅಜ್ಜಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೆ, ಅದು ಕಾಂಗ್ರೆಸ್​ ಪಕ್ಷದ ಒಳಗಿನ ವಿಚಾರ, ನಮಗೆ ಸಂಬಂಧವಿಲ್ಲ. ಗೃಹ ಸಚಿವ ಜಿ. ಪರಮೇಶ್ವರ, ಮಲ್ಲಿಕಾರ್ಜುನ್ ಖರ್ಗೆ, ಎಂ.ಬಿ ಪಾಟೀಲ್​ ಮತ್ತು ಡಿಕೆ ಶಿವಕುಮಾರ್ ಯಾರು ಸಿಎಂ ಆಗಬೇಕು ಎಂಬುವುದು ಅವರ ಪಕ್ಷದ ನಿರ್ಧಾರ‌ ಎಂದಿದ್ದಾರೆ.

ನಮ್ಮ ಹೋರಾಟದ ಫಲವಾಗಿ ಸಚಿವರರೊಬ್ಬರ ತಲೆತಂಡವಾಗಿದೆ. ಅದೇ ರೀತಿ ಸಿಎಂ ವಿಕೆಟ್​ ಕೂಡ ಬೀಳಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Accident: ಟೋಲ್ ಸಿಬ್ಬಂದಿ ಎಡವಟ್ಟು.. ಸರಣಿ ಅಪಘಾತ..

ಇತ್ತ, ಡಿಕೆಶಿ ಸಿಎಂ ಬೆನ್ನಿಗೆ ಕಲ್ಲುಬಂಡೆ ತರ ನಿಲ್ಲುವೆ.. ಅವರೇ ನಮ್ಮ ನಾಯಕ. ಅವರು ಏಕೆ ರಾಜೀನಾಮೆ ನೀಡಬೇಕು? ಎಂದು ಸುದ್ದಿಗೋಷ್ಠಿಯಲ್ಲಿ ಅಬ್ಬರಿಸಿದ್ದಾರೆ.

ಏನೇ ಆದರೂ ರಾಜಕಾರಣದಲ್ಲಿ ಎಲ್ಲದಕ್ಕೂ ಕಾಲವೇ ಉತ್ತರಿಸಬೇಕು ಎಂಬುದು ವಾಸ್ತವದ ಮಾತಾಗಿದೆ ಎನ್ನುತ್ತಾರೆ ರಾಜಕೀಯ ಪಂಡಿತರು.

‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು.

ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.

Latest News

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ ಶೇ.100ರಷ್ಟಾಗಿದೆ. ಪರೀಕ್ಷೆಗೆ ಕೂತಿದ್ದ 46 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ.ಅದರಲ್ಲಿ ಶೇ.95ಕ್ಕೂ ಅಧಿಕ ಅಂಕವನ್ನು 10 ವಿದ್ಯಾರ್ಥಿಗಳು,ಶೇ.90ಕ್ಕೂ ಅಧಿಕ ಅಂಕವನ್ನು 25 ವಿದ್ಯಾರ್ಥಿಗಳು ಶೇ.80 ಕ್ಕೂ ಹೆಚ್ಚು ಅಂಕವನ್ನು 11 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಶೇ.98 ಅಂಕ ಪಡೆದ ರೋಹನ್ ಸೂಳಿಭಾವಿ ಮುದ್ದೇಬಿಹಾಳ ನಗರಕ್ಕೆ ಪ್ರಥಮ,ಶೇ.97.5 ಅಂಕ ಪಡೆದಿರುವ ಚೆನ್ನಪ್ಪ ಸಜ್ಜನ ದ್ವಿತೀಯ ಹಾಗೂ ಶೇ.97.33 ಅಂಕ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ ಕೂತಿದ್ದ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಆಸೀಫಾ ಕಾಶೀಮ್ ಖತೀಬ ಶೇ.98ರಷ್ಟು ಅಂಕ ಪಡೆದು ಮುದ್ದೇಬಿಹಾಳ ನಗರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ಇನ್ನುಳಿದAತೆ ಶೇ.97.83 ಅಂಕ ಪಡೆದ ಲಕ್ಷಿö್ಮÃ ಉಂಡಿ ದ್ವಿತೀಯ,ಶೇ.97.33 ಅಂಕ ಪಡೆದ ಸುಷ್ಮಿತಾ ದನ್ನೂರ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.ಉತ್ತೀರ್ಣರಾದ 229ರಲ್ಲಿ ಅದರಲ್ಲಿ 142 ಡಿಸ್ಟಿಂಕ್ಷನ್,76 ಪ್ರಥಮ,11 ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಣಿತದಲ್ಲಿ 54,ಬಯೋಲಜಿ