Lokayukta vs DKS: BIG SHOCK for DCM DK Shivakumar after CM

DK Shivakumar ಡಿಸೆಂಬರ್​ ಒಳಗೆ ಸಿಎಂ ಆಗ್ತಾರೆ..! ಸ್ಫೋಟಕ ಭವಿಷ್ಯ..

DK Shivakumar ಡಿಸೆಂಬರ್​ ಒಳಗೆ ಸಿಎಂ ಆಗ್ತಾರೆ..! ಸ್ಫೋಟಕ ಭವಿಷ್ಯ..

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಆರೋಪ ಕೇಳಿಬಂದಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಸಿಎಂ ವಿರುದ್ಧ ತನಿಖೆಗೂ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಮುಡಾ ಕಂಟಕ ಎದುರಾಗಿದೆ. ಏತನ್ಮಧ್ಯೆ, ಸಿಎಂ ರಾಜೀನಾಮೆ ಮಾತು ಜೋರಾಗಿ ಕೇಳಿಬರುತ್ತಿವೆ. ಇದರ ಮಧ್ಯೆ ಯೇ ವಿಪಕ್ಷ ನಾಯಕ ಆರ್.. ಅಶೋಕ್​ (R Ashok) ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ.

Join Our Telegram: https://t.me/dcgkannada

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸೆಂಬರ್​ ಒಳಗಡೆ ಡಿ.ಕೆ ಶಿವಕುಮಾರ್​ (DK Shuvakumar) ಮುಖ್ಯಮಂತ್ರಿ ಆಗುತ್ತಾರೆ ಎಂದು ಅಜ್ಜಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೆ, ಅದು ಕಾಂಗ್ರೆಸ್​ ಪಕ್ಷದ ಒಳಗಿನ ವಿಚಾರ, ನಮಗೆ ಸಂಬಂಧವಿಲ್ಲ. ಗೃಹ ಸಚಿವ ಜಿ. ಪರಮೇಶ್ವರ, ಮಲ್ಲಿಕಾರ್ಜುನ್ ಖರ್ಗೆ, ಎಂ.ಬಿ ಪಾಟೀಲ್​ ಮತ್ತು ಡಿಕೆ ಶಿವಕುಮಾರ್ ಯಾರು ಸಿಎಂ ಆಗಬೇಕು ಎಂಬುವುದು ಅವರ ಪಕ್ಷದ ನಿರ್ಧಾರ‌ ಎಂದಿದ್ದಾರೆ.

ನಮ್ಮ ಹೋರಾಟದ ಫಲವಾಗಿ ಸಚಿವರರೊಬ್ಬರ ತಲೆತಂಡವಾಗಿದೆ. ಅದೇ ರೀತಿ ಸಿಎಂ ವಿಕೆಟ್​ ಕೂಡ ಬೀಳಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Accident: ಟೋಲ್ ಸಿಬ್ಬಂದಿ ಎಡವಟ್ಟು.. ಸರಣಿ ಅಪಘಾತ..

ಇತ್ತ, ಡಿಕೆಶಿ ಸಿಎಂ ಬೆನ್ನಿಗೆ ಕಲ್ಲುಬಂಡೆ ತರ ನಿಲ್ಲುವೆ.. ಅವರೇ ನಮ್ಮ ನಾಯಕ. ಅವರು ಏಕೆ ರಾಜೀನಾಮೆ ನೀಡಬೇಕು? ಎಂದು ಸುದ್ದಿಗೋಷ್ಠಿಯಲ್ಲಿ ಅಬ್ಬರಿಸಿದ್ದಾರೆ.

ಏನೇ ಆದರೂ ರಾಜಕಾರಣದಲ್ಲಿ ಎಲ್ಲದಕ್ಕೂ ಕಾಲವೇ ಉತ್ತರಿಸಬೇಕು ಎಂಬುದು ವಾಸ್ತವದ ಮಾತಾಗಿದೆ ಎನ್ನುತ್ತಾರೆ ರಾಜಕೀಯ ಪಂಡಿತರು.

‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು.

ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್