DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

ಮಂಡ್ಯ: ತಮ್ಮನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಟೀಕೆ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ‌‌ ಎಂದು ಟಾಂಗ್ (DKS vs HDK) ನೀಡಿದರು.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಡಿಕೆಶಿಯ ಮುಂದಿನ ಸ್ಥಿತಿಗತಿಗಳ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಂತೆ ಇದ್ದ ಅವರ ಹೇಳಿಕೆ; ಯಾರು ಮೆಂಟಲ್ ಆಸ್ಪತ್ರೆಗೆ ಹೋಗುತ್ತಾರೆ ನೋಡೋಣ ಬನ್ನಿ. ನಾವು ಮೆಂಟಲ್ ಆಸ್ಪತ್ರೆಗೆ ಹೋಗಿ ಟ್ರೀಟ್ಮೆಂಟ್ ತಗೆದುಕೊಳ್ಳಬಹುದು‌, ಇರಲಿ.. ಆದರೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ತಾರೆ ನೋಡೋಣ ಬನ್ನಿ‌‌ ಎಂದು ಡಿಕೆ ಶಿವಕುಮಾರ್ ಗೆ ತಿರುಗೇಟು (DKS vs HDK) ಕೊಟ್ಟರು.

Join Our Telegram: https://t.me/dcgkannada

ಆ ವ್ಯಕ್ತಿಯ ಹೇಳಿಕೆಗೆ ಹೆಚ್ಚು ಮಹತ್ವ ಕೊಡುವ ಅಗತ್ಯ ಇಲ್ಲ. ಪಾದಯಾತ್ರೆ ಮುಕ್ತಾಯ ಮಾಡಿದ್ದೇವೆ. ಕಾಂಗ್ರೆಸ್ ವಿರುದ್ಧ ಹೋರಾಟ ನಿರಂತರವಾಗಿ ಇರುತ್ತದೆ. ಪಾದಯಾತ್ರೆ ಯಶಸ್ಸು ಸಹಿಸಲಾಗದೆ ಈ ರೀತಿ ಮಾತನಾಡುತ್ತಿದ್ದಾರೆ. ಲೂಟಿ ಮಾಡಿಕೊಂಡು ಸಾಗುತ್ತಿದೆ ಸರಕಾರ. ನಮ್ಮ ಬಗ್ಗೆ ಸಹಿಷ್ಣುತೆ ಇಲ್ಲದೆ ವ್ಯಕ್ತಿಗತ ಟೀಕೆ ಮಾಡುತ್ತಿದ್ದಾರೆ. ಜನರೇ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.

ನಾವು ಪಾದಯಾತ್ರೆ ಮಾಡಿದ್ದು ಜನಜಾಗೃತಿ ಮೂಡಿಸಲಿಕ್ಕೆ. ಈ ಸರ್ಕಾರದ ಭ್ರಷ್ಟಾಚಾರವನ್ನು ತಿಳಿಸಲು ಪಾದಯಾತ್ರೆ ಮಾಡಿದ್ದೇವೆ. ಮುಂದೆ ಕಾನೂನು ರೀತಿಯ ಹೋರಾಟವನ್ನೂ ನಡೆಸುತ್ತೇವೆ. ಕರ್ನಾಟಕದ ಖಜಾನೆ ಸದಾ ತುಂಬಿರುತ್ತದೆ. ಈ ಖಜಾನೆಯನ್ನು ಈ ಸರಕಾರ ಲೂಟಿ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಈ ಸರಕಾರ ಮಾಡುತ್ತಿಲ್ಲ. ಇಲ್ಲಿ ಸಿಎಂ ಕುರ್ಚಿ ಅಲ್ಲಾಡುತ್ತಿಲ್ಲ, ಕುರ್ಚಿಯಲ್ಲಿ ಕೂತವರು ಅಲ್ಲಾಡುತ್ತಿದ್ದಾರೆ ಅಷ್ಟೇ..ರಾಜ್ಯದ ಅಧಕಾರದ ಕುರ್ಚಿ ಭದ್ರವಾಗಿಯೇ ಇರುತ್ತದೆ. ಕೆಂಗಲ್ ಹನುಮಂತಯ್ಯ ಕಟ್ಟಿರುವ ವಿಧಾನಸೌಧ ಕುರ್ಚಿ ಗಟ್ಟಿಯಾಗಿದೆ. ಕುರ್ಚಿಯಲ್ಲಿ‌ ಕೂರೋರು ಭದ್ರವಾಗಿ ಇರೋಕೆ ಆಗಲ್ಲ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾದ ಘಟನೆ: ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ರಾಜ್ಯ ಸರಕಾರ ಎಲ್ಲಾ ಜಲಾಶಯಗಳ ಕ್ರಸ್ಟ್ ಗೇಟ್ ಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ.

ಇದನ್ನೂ ಓದಿ: TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಲಾಕ್ ಕಟ್ ವಿಚಾರ ಅತ್ಯಂತ ಕಳವಳಕಾರಿ. ಇದು ದೊಡ್ಡ ಅನಾಹುತ. 19ನೇ ಕ್ರಸ್ಟ್ ಗೇಟ್ ತೆರೆದುಕೊಂಡು ಭಾರೀ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಇದರಿಂದ ಜಲಾಶಯದ 60 ಟಿಎಂಸಿ ನೀರು ಖಾಲಿಯಾಗುತ್ತದೆ. ಒಳ್ಳೆಯ ಮಳೆಯಾಗಿ ಜಲಾಶಯ ತುಂಬಿತ್ತು. ಈ ನೀರನ್ನೇ ನಂಬಿಕೊಂಡಿದ್ದ ರೈತರಿಗೆ ತೊಂದರೆ ಆಗಿದೆ ಎಂದರು ಸಚಿವರು.

70 ವರ್ಷಗಳ‌ ಹಿಂದೆಯೇ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಹಿಂದೆಯೂ ಅಲ್ಲಿ ಅನೇಕ ಸಮಸ್ಯೆಗಳು ಬೆಳಕಿಗೆ ಬಂದಿದ್ದವು. ನಾರಾಯಣಪುರ, ಆಲಮಟ್ಟಿ ಅಣೆಕಟ್ಟುಗಳಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಸಲಾಗಿದೆ.

ತುಂಗಭದ್ರಾ ಅಣೆಕಟ್ಟೆಯಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಕೆ ಮಾಡಿಲ್ಲ. ಅದಕ್ಕಾಗಿ ನೀರು ನಿಲ್ಲಿಸಲು ಸಾಧ್ಯವಾಗಿಲ್ಲ. ಇದು ರೈತರ ವಿಚಾರದಲ್ಲಿ ಚೆಲ್ಲಾಟವಾಡಿದ ಹಾಗೆಯೇ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಟಿಬಿ ಡ್ಯಾಂ ಬೋರ್ಡ್ ಟೆಕ್ನಿಕಲ್ ವಿಚಾರದಲ್ಲಿ ಕಾಟಚಾರದ ವರದಿ ಕೊಟ್ಟಿವೆ. ಅದಕ್ಕಾಗಿ ಇಂತಹ ಪರಿಸ್ಥಿತಿ ಬಂದಿದೆ. ಇದನ್ನು ಕೂಡಲೇ ಸರಿ ಪಡಿಸಿಕೊಳ್ಳಬೇಕಾಗಿದೆ ಎಂದು ಸಚಿವರು ಸಲಹೆ ನೀಡಿದರು.

ಕೃಷ್ಣರಾಜ ಸಾಗರ (ಕೆಆರ್‌ಎಸ್) ವಿಚಾರದಲ್ಲಿ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳುವುದು ಒಳ್ಳೆಯದು. ಕೆಆರ್‌ಎಸ್ ಡ್ಯಾಂನಲ್ಲೂ ಸ್ಟಾಪ್ ಲಾಕ್ ಗೇಟ್ ಇಲ್ಲ. ಆ ಅಣೆಕಟ್ಟು ಕಟ್ಟುವಾಗ ಸ್ಟಾಪ್ ಲಾಕ್ ಇಲ್ಲದ ಕಾರಣ, ಹಾಕಿರಲಿಲ್ಲ.

ತುಂಗಭದ್ರಾ ಅಣೆಕಟ್ಟೆಯ ಪರಿಸ್ಥಿತಿ ಗಮನಿಸಿದರೆ ದೂರದೃಷ್ಟಿಯಿಂದ ಕೆಆರ್‌ಎಸ್‌ಗೆ ಸ್ಟಾಪ್ ಲಾಕ್ ಹಾಕಬೇಕು. ತುಂಗಭದ್ರಾ ಜಲಾಶಯದ ಸಮಸ್ಯೆ ಸರ್ಕಾರದ ನಿರ್ಲಕ್ಷ್ಯ ಎನ್ನಲು ಆಗುವುದಿಲ್ಲ ಎಂದು ಸಚಿವರು ಅಭಿಪ್ರಾಯಪಟ್ಟರು.

ಅಣೆಕಟ್ಟೆ ನಿರ್ವಹಣೆಗೆ ತಾಂತ್ರಿಕ ಸಮಿತಿ ಇರುತ್ತದೆ. ಆ ಸಮಿತಿ ವರ್ಷಕ್ಕೊಮ್ಮೆ ಜಲಾಶಯದ ಸಮಸ್ಯೆಗೆಳನ್ನು ಪರಿಶೀಲನೆ ಮಾಡುತ್ತಿರುತ್ತದೆ. ಆಗ ಕಾಟಚಾರಕ್ಕೆ ಪರಿಶೀಲನೆ ಮಾಡಿ ವರದಿ ನೀಡುತ್ತದೆ. ಅದರ ಪರಿಣಾಮವೇ ಈ ರೀತಿಯ ಅನಾಹುಗಳು. ಇದನ್ನು ದುರಸ್ಥಿತಿ ಮಾಡುವುದು ಸರ್ಕಾರಕ್ಕೆ ಇದು ಕ್ಲಿಷ್ಟಕರ ಮತ್ತು ಸವಾಲು. ತಾಂತ್ರಿಕ ಪರಿಣಿತರ ಜತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಕೇಂದ್ರ ಸಚಿವರು ಹೇಳಿದರು.

Latest News

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ :            ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ : ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ಮುದ್ದೇಬಿಹಾಳ : ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ‌ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು ಹೊಸದಾಗಿ ಸಿನೇಮಾ ಕಾರ್ಮಿಕರ ಸುಂಕ ಅಧಿನಿಯಮ ಜಾರಿಯಂತಹ ವಿನೂತನ ಯೋಜನೆಗಳನ್ನು ರಾಜ್ಯ ಕಾರ್ಮಿಕ ಇಲಾಖೆಯು ರೂಪಿಸಿ ಇಡೀ ದೇಶವೇ ಕರ್ನಾಟಕ

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಯಾದಗಿರಿ, ಅಕ್ಟೋಬರ್.15: ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಹೇಳಿದರು. ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ, ಪಾಟೀಲ್ ಕನ್ವೆನ್ಷನ್