DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

ಮಂಡ್ಯ: ತಮ್ಮನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಟೀಕೆ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ‌‌ ಎಂದು ಟಾಂಗ್ (DKS vs HDK) ನೀಡಿದರು.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಡಿಕೆಶಿಯ ಮುಂದಿನ ಸ್ಥಿತಿಗತಿಗಳ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಂತೆ ಇದ್ದ ಅವರ ಹೇಳಿಕೆ; ಯಾರು ಮೆಂಟಲ್ ಆಸ್ಪತ್ರೆಗೆ ಹೋಗುತ್ತಾರೆ ನೋಡೋಣ ಬನ್ನಿ. ನಾವು ಮೆಂಟಲ್ ಆಸ್ಪತ್ರೆಗೆ ಹೋಗಿ ಟ್ರೀಟ್ಮೆಂಟ್ ತಗೆದುಕೊಳ್ಳಬಹುದು‌, ಇರಲಿ.. ಆದರೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ತಾರೆ ನೋಡೋಣ ಬನ್ನಿ‌‌ ಎಂದು ಡಿಕೆ ಶಿವಕುಮಾರ್ ಗೆ ತಿರುಗೇಟು (DKS vs HDK) ಕೊಟ್ಟರು.

Join Our Telegram: https://t.me/dcgkannada

ಆ ವ್ಯಕ್ತಿಯ ಹೇಳಿಕೆಗೆ ಹೆಚ್ಚು ಮಹತ್ವ ಕೊಡುವ ಅಗತ್ಯ ಇಲ್ಲ. ಪಾದಯಾತ್ರೆ ಮುಕ್ತಾಯ ಮಾಡಿದ್ದೇವೆ. ಕಾಂಗ್ರೆಸ್ ವಿರುದ್ಧ ಹೋರಾಟ ನಿರಂತರವಾಗಿ ಇರುತ್ತದೆ. ಪಾದಯಾತ್ರೆ ಯಶಸ್ಸು ಸಹಿಸಲಾಗದೆ ಈ ರೀತಿ ಮಾತನಾಡುತ್ತಿದ್ದಾರೆ. ಲೂಟಿ ಮಾಡಿಕೊಂಡು ಸಾಗುತ್ತಿದೆ ಸರಕಾರ. ನಮ್ಮ ಬಗ್ಗೆ ಸಹಿಷ್ಣುತೆ ಇಲ್ಲದೆ ವ್ಯಕ್ತಿಗತ ಟೀಕೆ ಮಾಡುತ್ತಿದ್ದಾರೆ. ಜನರೇ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.

ನಾವು ಪಾದಯಾತ್ರೆ ಮಾಡಿದ್ದು ಜನಜಾಗೃತಿ ಮೂಡಿಸಲಿಕ್ಕೆ. ಈ ಸರ್ಕಾರದ ಭ್ರಷ್ಟಾಚಾರವನ್ನು ತಿಳಿಸಲು ಪಾದಯಾತ್ರೆ ಮಾಡಿದ್ದೇವೆ. ಮುಂದೆ ಕಾನೂನು ರೀತಿಯ ಹೋರಾಟವನ್ನೂ ನಡೆಸುತ್ತೇವೆ. ಕರ್ನಾಟಕದ ಖಜಾನೆ ಸದಾ ತುಂಬಿರುತ್ತದೆ. ಈ ಖಜಾನೆಯನ್ನು ಈ ಸರಕಾರ ಲೂಟಿ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಈ ಸರಕಾರ ಮಾಡುತ್ತಿಲ್ಲ. ಇಲ್ಲಿ ಸಿಎಂ ಕುರ್ಚಿ ಅಲ್ಲಾಡುತ್ತಿಲ್ಲ, ಕುರ್ಚಿಯಲ್ಲಿ ಕೂತವರು ಅಲ್ಲಾಡುತ್ತಿದ್ದಾರೆ ಅಷ್ಟೇ..ರಾಜ್ಯದ ಅಧಕಾರದ ಕುರ್ಚಿ ಭದ್ರವಾಗಿಯೇ ಇರುತ್ತದೆ. ಕೆಂಗಲ್ ಹನುಮಂತಯ್ಯ ಕಟ್ಟಿರುವ ವಿಧಾನಸೌಧ ಕುರ್ಚಿ ಗಟ್ಟಿಯಾಗಿದೆ. ಕುರ್ಚಿಯಲ್ಲಿ‌ ಕೂರೋರು ಭದ್ರವಾಗಿ ಇರೋಕೆ ಆಗಲ್ಲ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾದ ಘಟನೆ: ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ರಾಜ್ಯ ಸರಕಾರ ಎಲ್ಲಾ ಜಲಾಶಯಗಳ ಕ್ರಸ್ಟ್ ಗೇಟ್ ಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ.

ಇದನ್ನೂ ಓದಿ: TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಲಾಕ್ ಕಟ್ ವಿಚಾರ ಅತ್ಯಂತ ಕಳವಳಕಾರಿ. ಇದು ದೊಡ್ಡ ಅನಾಹುತ. 19ನೇ ಕ್ರಸ್ಟ್ ಗೇಟ್ ತೆರೆದುಕೊಂಡು ಭಾರೀ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಇದರಿಂದ ಜಲಾಶಯದ 60 ಟಿಎಂಸಿ ನೀರು ಖಾಲಿಯಾಗುತ್ತದೆ. ಒಳ್ಳೆಯ ಮಳೆಯಾಗಿ ಜಲಾಶಯ ತುಂಬಿತ್ತು. ಈ ನೀರನ್ನೇ ನಂಬಿಕೊಂಡಿದ್ದ ರೈತರಿಗೆ ತೊಂದರೆ ಆಗಿದೆ ಎಂದರು ಸಚಿವರು.

70 ವರ್ಷಗಳ‌ ಹಿಂದೆಯೇ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಹಿಂದೆಯೂ ಅಲ್ಲಿ ಅನೇಕ ಸಮಸ್ಯೆಗಳು ಬೆಳಕಿಗೆ ಬಂದಿದ್ದವು. ನಾರಾಯಣಪುರ, ಆಲಮಟ್ಟಿ ಅಣೆಕಟ್ಟುಗಳಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಸಲಾಗಿದೆ.

ತುಂಗಭದ್ರಾ ಅಣೆಕಟ್ಟೆಯಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಕೆ ಮಾಡಿಲ್ಲ. ಅದಕ್ಕಾಗಿ ನೀರು ನಿಲ್ಲಿಸಲು ಸಾಧ್ಯವಾಗಿಲ್ಲ. ಇದು ರೈತರ ವಿಚಾರದಲ್ಲಿ ಚೆಲ್ಲಾಟವಾಡಿದ ಹಾಗೆಯೇ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಟಿಬಿ ಡ್ಯಾಂ ಬೋರ್ಡ್ ಟೆಕ್ನಿಕಲ್ ವಿಚಾರದಲ್ಲಿ ಕಾಟಚಾರದ ವರದಿ ಕೊಟ್ಟಿವೆ. ಅದಕ್ಕಾಗಿ ಇಂತಹ ಪರಿಸ್ಥಿತಿ ಬಂದಿದೆ. ಇದನ್ನು ಕೂಡಲೇ ಸರಿ ಪಡಿಸಿಕೊಳ್ಳಬೇಕಾಗಿದೆ ಎಂದು ಸಚಿವರು ಸಲಹೆ ನೀಡಿದರು.

ಕೃಷ್ಣರಾಜ ಸಾಗರ (ಕೆಆರ್‌ಎಸ್) ವಿಚಾರದಲ್ಲಿ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳುವುದು ಒಳ್ಳೆಯದು. ಕೆಆರ್‌ಎಸ್ ಡ್ಯಾಂನಲ್ಲೂ ಸ್ಟಾಪ್ ಲಾಕ್ ಗೇಟ್ ಇಲ್ಲ. ಆ ಅಣೆಕಟ್ಟು ಕಟ್ಟುವಾಗ ಸ್ಟಾಪ್ ಲಾಕ್ ಇಲ್ಲದ ಕಾರಣ, ಹಾಕಿರಲಿಲ್ಲ.

ತುಂಗಭದ್ರಾ ಅಣೆಕಟ್ಟೆಯ ಪರಿಸ್ಥಿತಿ ಗಮನಿಸಿದರೆ ದೂರದೃಷ್ಟಿಯಿಂದ ಕೆಆರ್‌ಎಸ್‌ಗೆ ಸ್ಟಾಪ್ ಲಾಕ್ ಹಾಕಬೇಕು. ತುಂಗಭದ್ರಾ ಜಲಾಶಯದ ಸಮಸ್ಯೆ ಸರ್ಕಾರದ ನಿರ್ಲಕ್ಷ್ಯ ಎನ್ನಲು ಆಗುವುದಿಲ್ಲ ಎಂದು ಸಚಿವರು ಅಭಿಪ್ರಾಯಪಟ್ಟರು.

ಅಣೆಕಟ್ಟೆ ನಿರ್ವಹಣೆಗೆ ತಾಂತ್ರಿಕ ಸಮಿತಿ ಇರುತ್ತದೆ. ಆ ಸಮಿತಿ ವರ್ಷಕ್ಕೊಮ್ಮೆ ಜಲಾಶಯದ ಸಮಸ್ಯೆಗೆಳನ್ನು ಪರಿಶೀಲನೆ ಮಾಡುತ್ತಿರುತ್ತದೆ. ಆಗ ಕಾಟಚಾರಕ್ಕೆ ಪರಿಶೀಲನೆ ಮಾಡಿ ವರದಿ ನೀಡುತ್ತದೆ. ಅದರ ಪರಿಣಾಮವೇ ಈ ರೀತಿಯ ಅನಾಹುಗಳು. ಇದನ್ನು ದುರಸ್ಥಿತಿ ಮಾಡುವುದು ಸರ್ಕಾರಕ್ಕೆ ಇದು ಕ್ಲಿಷ್ಟಕರ ಮತ್ತು ಸವಾಲು. ತಾಂತ್ರಿಕ ಪರಿಣಿತರ ಜತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಕೇಂದ್ರ ಸಚಿವರು ಹೇಳಿದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ