DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

ಮಂಡ್ಯ: ತಮ್ಮನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಟೀಕೆ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ‌‌ ಎಂದು ಟಾಂಗ್ (DKS vs HDK) ನೀಡಿದರು.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಡಿಕೆಶಿಯ ಮುಂದಿನ ಸ್ಥಿತಿಗತಿಗಳ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಂತೆ ಇದ್ದ ಅವರ ಹೇಳಿಕೆ; ಯಾರು ಮೆಂಟಲ್ ಆಸ್ಪತ್ರೆಗೆ ಹೋಗುತ್ತಾರೆ ನೋಡೋಣ ಬನ್ನಿ. ನಾವು ಮೆಂಟಲ್ ಆಸ್ಪತ್ರೆಗೆ ಹೋಗಿ ಟ್ರೀಟ್ಮೆಂಟ್ ತಗೆದುಕೊಳ್ಳಬಹುದು‌, ಇರಲಿ.. ಆದರೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ತಾರೆ ನೋಡೋಣ ಬನ್ನಿ‌‌ ಎಂದು ಡಿಕೆ ಶಿವಕುಮಾರ್ ಗೆ ತಿರುಗೇಟು (DKS vs HDK) ಕೊಟ್ಟರು.

Join Our Telegram: https://t.me/dcgkannada

ಆ ವ್ಯಕ್ತಿಯ ಹೇಳಿಕೆಗೆ ಹೆಚ್ಚು ಮಹತ್ವ ಕೊಡುವ ಅಗತ್ಯ ಇಲ್ಲ. ಪಾದಯಾತ್ರೆ ಮುಕ್ತಾಯ ಮಾಡಿದ್ದೇವೆ. ಕಾಂಗ್ರೆಸ್ ವಿರುದ್ಧ ಹೋರಾಟ ನಿರಂತರವಾಗಿ ಇರುತ್ತದೆ. ಪಾದಯಾತ್ರೆ ಯಶಸ್ಸು ಸಹಿಸಲಾಗದೆ ಈ ರೀತಿ ಮಾತನಾಡುತ್ತಿದ್ದಾರೆ. ಲೂಟಿ ಮಾಡಿಕೊಂಡು ಸಾಗುತ್ತಿದೆ ಸರಕಾರ. ನಮ್ಮ ಬಗ್ಗೆ ಸಹಿಷ್ಣುತೆ ಇಲ್ಲದೆ ವ್ಯಕ್ತಿಗತ ಟೀಕೆ ಮಾಡುತ್ತಿದ್ದಾರೆ. ಜನರೇ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.

ನಾವು ಪಾದಯಾತ್ರೆ ಮಾಡಿದ್ದು ಜನಜಾಗೃತಿ ಮೂಡಿಸಲಿಕ್ಕೆ. ಈ ಸರ್ಕಾರದ ಭ್ರಷ್ಟಾಚಾರವನ್ನು ತಿಳಿಸಲು ಪಾದಯಾತ್ರೆ ಮಾಡಿದ್ದೇವೆ. ಮುಂದೆ ಕಾನೂನು ರೀತಿಯ ಹೋರಾಟವನ್ನೂ ನಡೆಸುತ್ತೇವೆ. ಕರ್ನಾಟಕದ ಖಜಾನೆ ಸದಾ ತುಂಬಿರುತ್ತದೆ. ಈ ಖಜಾನೆಯನ್ನು ಈ ಸರಕಾರ ಲೂಟಿ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಈ ಸರಕಾರ ಮಾಡುತ್ತಿಲ್ಲ. ಇಲ್ಲಿ ಸಿಎಂ ಕುರ್ಚಿ ಅಲ್ಲಾಡುತ್ತಿಲ್ಲ, ಕುರ್ಚಿಯಲ್ಲಿ ಕೂತವರು ಅಲ್ಲಾಡುತ್ತಿದ್ದಾರೆ ಅಷ್ಟೇ..ರಾಜ್ಯದ ಅಧಕಾರದ ಕುರ್ಚಿ ಭದ್ರವಾಗಿಯೇ ಇರುತ್ತದೆ. ಕೆಂಗಲ್ ಹನುಮಂತಯ್ಯ ಕಟ್ಟಿರುವ ವಿಧಾನಸೌಧ ಕುರ್ಚಿ ಗಟ್ಟಿಯಾಗಿದೆ. ಕುರ್ಚಿಯಲ್ಲಿ‌ ಕೂರೋರು ಭದ್ರವಾಗಿ ಇರೋಕೆ ಆಗಲ್ಲ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾದ ಘಟನೆ: ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ರಾಜ್ಯ ಸರಕಾರ ಎಲ್ಲಾ ಜಲಾಶಯಗಳ ಕ್ರಸ್ಟ್ ಗೇಟ್ ಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ.

ಇದನ್ನೂ ಓದಿ: TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಲಾಕ್ ಕಟ್ ವಿಚಾರ ಅತ್ಯಂತ ಕಳವಳಕಾರಿ. ಇದು ದೊಡ್ಡ ಅನಾಹುತ. 19ನೇ ಕ್ರಸ್ಟ್ ಗೇಟ್ ತೆರೆದುಕೊಂಡು ಭಾರೀ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಇದರಿಂದ ಜಲಾಶಯದ 60 ಟಿಎಂಸಿ ನೀರು ಖಾಲಿಯಾಗುತ್ತದೆ. ಒಳ್ಳೆಯ ಮಳೆಯಾಗಿ ಜಲಾಶಯ ತುಂಬಿತ್ತು. ಈ ನೀರನ್ನೇ ನಂಬಿಕೊಂಡಿದ್ದ ರೈತರಿಗೆ ತೊಂದರೆ ಆಗಿದೆ ಎಂದರು ಸಚಿವರು.

70 ವರ್ಷಗಳ‌ ಹಿಂದೆಯೇ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಹಿಂದೆಯೂ ಅಲ್ಲಿ ಅನೇಕ ಸಮಸ್ಯೆಗಳು ಬೆಳಕಿಗೆ ಬಂದಿದ್ದವು. ನಾರಾಯಣಪುರ, ಆಲಮಟ್ಟಿ ಅಣೆಕಟ್ಟುಗಳಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಸಲಾಗಿದೆ.

ತುಂಗಭದ್ರಾ ಅಣೆಕಟ್ಟೆಯಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಕೆ ಮಾಡಿಲ್ಲ. ಅದಕ್ಕಾಗಿ ನೀರು ನಿಲ್ಲಿಸಲು ಸಾಧ್ಯವಾಗಿಲ್ಲ. ಇದು ರೈತರ ವಿಚಾರದಲ್ಲಿ ಚೆಲ್ಲಾಟವಾಡಿದ ಹಾಗೆಯೇ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಟಿಬಿ ಡ್ಯಾಂ ಬೋರ್ಡ್ ಟೆಕ್ನಿಕಲ್ ವಿಚಾರದಲ್ಲಿ ಕಾಟಚಾರದ ವರದಿ ಕೊಟ್ಟಿವೆ. ಅದಕ್ಕಾಗಿ ಇಂತಹ ಪರಿಸ್ಥಿತಿ ಬಂದಿದೆ. ಇದನ್ನು ಕೂಡಲೇ ಸರಿ ಪಡಿಸಿಕೊಳ್ಳಬೇಕಾಗಿದೆ ಎಂದು ಸಚಿವರು ಸಲಹೆ ನೀಡಿದರು.

ಕೃಷ್ಣರಾಜ ಸಾಗರ (ಕೆಆರ್‌ಎಸ್) ವಿಚಾರದಲ್ಲಿ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳುವುದು ಒಳ್ಳೆಯದು. ಕೆಆರ್‌ಎಸ್ ಡ್ಯಾಂನಲ್ಲೂ ಸ್ಟಾಪ್ ಲಾಕ್ ಗೇಟ್ ಇಲ್ಲ. ಆ ಅಣೆಕಟ್ಟು ಕಟ್ಟುವಾಗ ಸ್ಟಾಪ್ ಲಾಕ್ ಇಲ್ಲದ ಕಾರಣ, ಹಾಕಿರಲಿಲ್ಲ.

ತುಂಗಭದ್ರಾ ಅಣೆಕಟ್ಟೆಯ ಪರಿಸ್ಥಿತಿ ಗಮನಿಸಿದರೆ ದೂರದೃಷ್ಟಿಯಿಂದ ಕೆಆರ್‌ಎಸ್‌ಗೆ ಸ್ಟಾಪ್ ಲಾಕ್ ಹಾಕಬೇಕು. ತುಂಗಭದ್ರಾ ಜಲಾಶಯದ ಸಮಸ್ಯೆ ಸರ್ಕಾರದ ನಿರ್ಲಕ್ಷ್ಯ ಎನ್ನಲು ಆಗುವುದಿಲ್ಲ ಎಂದು ಸಚಿವರು ಅಭಿಪ್ರಾಯಪಟ್ಟರು.

ಅಣೆಕಟ್ಟೆ ನಿರ್ವಹಣೆಗೆ ತಾಂತ್ರಿಕ ಸಮಿತಿ ಇರುತ್ತದೆ. ಆ ಸಮಿತಿ ವರ್ಷಕ್ಕೊಮ್ಮೆ ಜಲಾಶಯದ ಸಮಸ್ಯೆಗೆಳನ್ನು ಪರಿಶೀಲನೆ ಮಾಡುತ್ತಿರುತ್ತದೆ. ಆಗ ಕಾಟಚಾರಕ್ಕೆ ಪರಿಶೀಲನೆ ಮಾಡಿ ವರದಿ ನೀಡುತ್ತದೆ. ಅದರ ಪರಿಣಾಮವೇ ಈ ರೀತಿಯ ಅನಾಹುಗಳು. ಇದನ್ನು ದುರಸ್ಥಿತಿ ಮಾಡುವುದು ಸರ್ಕಾರಕ್ಕೆ ಇದು ಕ್ಲಿಷ್ಟಕರ ಮತ್ತು ಸವಾಲು. ತಾಂತ್ರಿಕ ಪರಿಣಿತರ ಜತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಕೇಂದ್ರ ಸಚಿವರು ಹೇಳಿದರು.

Latest News

Demzufolge fuhren die autoren euch musterhaft Diskret wegen der entsprechenden Ablaufe inoffizieller mitarbeiter Spinia

3 Beistand Availability An dieser stelle kriegt ihr unter anderem angewandten

Auf folgenden Wegen kannst respons angewandten Spielsalon Willkommensbonus bekommen

Vermittlungsgebuhr bestimmen � Du findest folgende Liste aktueller Angebote unter unserer

Hier sei eine Tabelle via den weitest verbreiteten Arten von With out Abschlagzahlung Boni:

Kasino Vermittlungsprovision blo? Einzahlung Uber und uber angesehen uff Gangbar Casinos

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and you can real cash harbors? | Galera Bet appSimple tips to Gamble Totally free Slot Games On the internetAs to why Play 100 percent free Ports?Kanga Bucks 100 percent free revolves may also have the form of no betting

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t Forget about Responsible Gambling Suggestions Victory Revolves ability an excellent 2x2 icon troll icon somewhere on the reels. You have the option of volatility that have a plus game to own per warrior. You can enjoy Troll Hunters 2