ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ ಸಾಲಿನ ಸ್ನೇಹಸಿರಿ ಗೆಳೆಯರ ಬಳಗವು ರವಿವಾರ ಏರ್ಪಡಿಸಿದ್ದ ಪರಿವಾರದ ಸಮಾಗಮ, ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಈ ಕಾರ್ಯಕ್ರಮವು ವೈಚಾರಿಕತೆಯಿಂದ ಕೂಡಿರುವ ವಿಶೇಷ ಕಾರ್ಯಕ್ರಮವಾಗಿದೆ.. ಸ್ನೇಹರಿಸಿ ಗೆಳೆಯರ ಬಳಗವು ನಗುವಿನ ಭಂಡಾರವಾಗಿರಲಿ.ಸಹಕಾರ, ಸಹನೆ ಕಡಿಮೆಯಾಗುತ್ತಿರುವ ಈ ದಿನಗಳಲ್ಲಿ ಗೆಳೆತನದ ಮಹತ್ವ ಸಾರುವ ಪರಿವಾರ ಸಮಾಗಮದಂಥ ಕಾರ್ಯಕ್ರಮಗಳು ಹೆಚ್ಚು ಅಗತ್ಯವಾಗಿವೆ. ಗೆಳೆತನದಲ್ಲಿ ಮನಸ್ಸು ದೊಡ್ಡದಾಗಿರಬೇಕು, ವಿಶಾಲವಾಗಿರಬೇಕು. ದೂರಾಲೋಚನೆ, ದೂರದೃಷ್ಟಿ ಇರಬೇಕು ಎಂದು ಹೇಳಿದರು.

ಹಿರಿಯ ಸಾಹಿತಿ ಅಶೋಕ ಮಣಿ ಮಾತನಾಡಿ, ದೇಶದ ಸಂಸ್ಕೃತಿಯು ಒಂದಾಗಿ, ಚನ್ನಾಗಿ ಬದುಕುವುದರಲ್ಲಿದೆ. ಗೆಳೆತನದ ಮಹತ್ವ, ಪ್ರೀತಿಯನ್ನು ಮಕ್ಕಳಿಗೂ ಹಂಚಿಕೊಳ್ಳಬೇಕು ಎಂದು ಹೇಳಿದರು.

ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಶಿವಾನಂದ ಬಿರಾದಾರ, ಮೋಹನ್ ಬಿಗ್ ಸೇಲನ ಮುಖ್ಯಸ್ಥೆ ಪ್ರೇಮಲಾಬಾಯಿ ಹಂಚಾಟೆ, ವಿಜಯಪುರದ ಗುತ್ತಿಗೆದಾರ ಸೋಮನಾಥ ಸೂಳಿಭಾವಿ, ಗೆಳೆಯರ ಬಳಗದ ರಾಜೇಂದ್ರಕುಮಾರ ದಂಡಾವತಿ, ಉಮೇಶ ಕಂಠಿ, ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ವೆಂಕನಗೌಡ ಪಾಟೀಲ ಇದ್ದರು.

ವಿವಿಧ ಪರೀಕ್ಷೆಗಳಲ್ಲಿ ಹೆಚ್ಚು ಅಂಕದೊAದಿಗೆ ಸಾಧನೆ ತೋರಿದ ವಿದ್ಯಾರ್ಥಿಗಳಾದ ಸಿಂಚನಾ ಸಿದ್ರಾಮೇಶ ಉಪನಾಳ, ಬೀಬಿಆಯಿಷಾ ಬುರಾನಸಾಬ ರುದ್ರವಾಡಿ, ಪವಿತ್ರಾ ದೌಲತರಾಯ ವಡವಡಗಿ, ದಿಶಾ ಮಂಗಸೂಳಿ, ಗಿರೀಶ ಶ್ರೀಶೈಲ ಸಿದ್ದಾಪುರ ಸೇರಿದಂತೆ ಗೆಳೆಯರ ಬಳಗದ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಸ್ನೇಹಿತರ ಬಳಗದ ಸದಸ್ಯರನ್ನು ಸನ್ಮಾನಿಸಲಾಯಿತು. ಮಾಣಿಕಚಂದ ದಂಡಾವತಿ,ಮಲ್ಲಪ್ಪ ಕಲ್ಲಪ್ಪಗೋಳ,ಶಿವಾನಂದ ಮಂಗಸೂಳಿ, ಸಿದ್ರಾಮೇಶ ಉಪನಾಳ, ಶ್ರೀಶೈಲ ಸಿದ್ದಾಪುರ, ಮೋಹನ್ ಹಂಚಾಟೆ, ರವಿ ಝಿಂಗಾಡೆ, ಬಸವರಾಜ ಗುರವ, ಎಂ.ಬಿ.ಪಾಟೀಲ, ರಾಘವೇಂದ್ರ ಬಡಿಗೇರ, ಪ್ರಭು ಮಂಗಸೂಳಿ, ಶ್ರೀಶೈಲ ಬಿಜ್ಜರಗಿ, ಅರುಣಕುಮಾರ ಹುನಗುಂದ, ಮಹಾಂತೇಶ ಕುಂಟೋಜಿ, ಎಸ್.ಐ.ಪಲ್ಲೇದ, ಬಸವರಾಜ ಬಡಿಗೇರ, ನಿಂಗಪ್ಪ ಚಟ್ಟೇರ, ಅಬ್ದುಲರಹೆಮಾನ ನದಾಫ, ಶಿವಪುತ್ರ ಅಜಮನಿ, ಈರಯ್ಯ ಹಿರೇಮಠ, ಶ್ರೀಕಾಂತ ಹಡಲಗೇರಿ ಸೇರಿದಂತೆ 100ಕ್ಕೂ ಹೆಚ್ಚು ಬಳಗದ ಸದಸ್ಯರು ಪಾಲ್ಗೊಂಡಿದ್ದರು.ದಾನಮ್ಮ ಪ್ರಾರ್ಥಿಸಿದರು. ಸಾಹಿತಿ ಬುರಾನ್ ರುದ್ರವಾಡಿ ಸ್ವಾಗತಿಸಿದರು. ವೆಂಕನಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿ.ಬಿ.ವಡವಡಗಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ನಶೆಮುಕ್ತ ಮಹಾಅಭಿಯಾನ:
ಇದೇ ಕಾರ್ಯಕ್ರಮದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಓಂಶಾoತಿ ಭವನದ ವತಿಯಿಂದ ನಶೆಮುಕ್ತರಾಗುವ ಪ್ರತಿಜ್ಞಾ ಅಭಿಯಾನ ಏರ್ಪಡಿಸಲಾಗಿತ್ತು. ಬಿಕೆ ಶೋಭಾ ಅಕ್ಕನವರು ಮಾತನಾಡಿ ದಾದಿ ಪ್ರಕಾಶಮಣೀಜಿಯವರ ಸ್ಮರಣಾರ್ಥ ನಶೆಮುಕ್ತ ಭಾರತ ಅಭಿಯಾನ ಮತ್ತು ಮಿಷನ್ ಸ್ಪಂಧನ ಅಡಿಯಲ್ಲಿ ವಿಕಸಿತ ಭಾರತದತ್ತ ಒಂದು ಸಬಲವಾದ ಹೆಜ್ಜೆ ಇಡಲು 10 ಕೋಟಿ ನಶೆಮುಕ್ತರಾಗುವ ಪ್ರತಿಜ್ಞಎಗಳ ಮಹಾಅಭಿಯಾನ ದೇಶದ ಎಲ್ಲೆಡೆ ನಡೆಯುತ್ತಿದೆ. ಯಾವ್ಯಾವುದೋ ಕಾರಣಗಳಿಂದಾಗಿ ನಸೆಗೆ ದಾಸರಾಗಿರುವವರು ಈ ಕೂಡಲೇ ಅದನ್ನು ತ್ಯಜಿಸುವ ದೃಢಸಂಕಲ್ಪ ಮಾಡಬೇಕು. ಒಂದೂವರೆ ಇಂಚಿನ ಸಿಗರೇಟು ಐದೂವರೆ ಆರು ಅಡಿಯ ದೇಹವನ್ನು ನಾಶಮಾಡುತ್ತದೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,