ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ದಾವಣಗೆರೆ: ಕಳವು ಪ್ರಕರಣವೊಂದರಲ್ಲಿ ಜಪ್ತಿ ಮಾಡಿದ ಚಿನ್ನಾಭರಣ ನ್ಯಾಯಾಲಯದ ಅನುಮತಿ ಪಡೆದು ಮಧ್ಯಪ್ರದೇಶದಿಂದ ತಂದಿದ್ದ ನಗರದ ಬಡಾವಣೆ ಠಾಣೆಯ ಎಸ್‌ಐ ಬಿ.ಆರ್‌. ನಾಗರಾಜಪ್ಪ (PSI B.R. Nagarajappa) ಮರುದಿನವೇ ಕೌಟುಂಬಿಕ ಕಲದಿಂದ ಮನನೊಂದು ನಾಪತ್ತೆಯಾಗಿದ್ದರು ಎಂದು ವರದಿಯಾಗಿತ್ತು. (Suicide)

ಕಳವು ಪ್ರಕರಣವೊಂದರಲ್ಲಿ ಮಧ್ಯಪ್ರದೇಶದಲ್ಲಿ ಸಿಕ್ಕಿಬಿದ್ದ ಆರೋಪಿಗಳು ದಾವಣಗೆರೆಯಲ್ಲಿ ಕೃತ್ಯ ಎಸಗಿದ್ದ ಬಗ್ಗೆ ಮಾಹಿತಿಯನ್ನೂ ನೀಡಿದ್ದರು.

ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು, ಸ್ವತ್ತು ವಶಕ್ಕೆ ಎಸ್‌ಐ ನಾಗರಾಜಪ್ಪ ನೇತೃತ್ವದಲ್ಲಿ ತೆರಳಿದ್ದರು. ವಿಶೇಷ ಕರ್ತವ್ಯ ಮುಗಿಸಿ ಜೂ. 30ರಂದು ಬೆಳಗ್ಗೆ 11ಕ್ಕೆ ಮನೆಗೆ ಮರಳಿದ್ದ ಅವರು, ಜುಲೈ 1ರ ನಸುಕಿನಲ್ಲಿ ಮನೆಯನ್ನು ತೊರೆದಿದ್ದರು ಎನ್ನಲಾಗಿದೆ.

ಜೂ. 30ರ ರಾತ್ರಿ 9 ಗಂಟೆಯ ಹೊತ್ತಿಗೆ ಕೌಟುಂಬಿಕ ವಿಚಾರವಾಗಿ ಪತ್ನಿಯೊಂದಿಗೆ ಗಲಾಟೆ ನಡೆಯಿತು. ಇದರಿಂದ ಬೇಸರ ಮಾಡಿಕೊಂಡ ಅವರು ನಸುಕಿನ 2 ಗಂಟೆಯ ಹೊತ್ತಿಗೆ ಮನೆಯಿಂದ ಹೊರಹೋಗಿದ್ದರು. ಮನೆಗೂ ಮರಳದೇ ಕರ್ತವ್ಯಕ್ಕೂ ಹಾಜರಾಗದ ಇರುವುದು ಆತಂಕ ಮೂಡಿಸಿದೆ. ಕಾಣೆಯಾಗಿರುವ ಪತಿಯನ್ನು ಹುಡುಕಿಕೊಡಿ ಎಂದು ಪತ್ನಿ ಕೆ.ಇ. ಲಲಿತಾ ಅವರು ಕೆಟಿಜೆ ನಗರ ಠಾಣೆಗೆ ಜುಲೈ 2ರಂದು ದೂರು ದಾಖಲಿಸಿದ್ದರು.

ದಾವಣಗೆರೆ ತಾಲ್ಲೂಕಿನ ಜವಳಘಟ್ಟ ಗ್ರಾಮದ ನಾಗರಾಜಪ್ಪ, 1993ರಲ್ಲಿ ಪೊಲೀಸ್‌ ಇಲಾಖೆ ಸೇರಿದ್ದರು. ಕಾನ್‌ಸ್ಟೆಬಲ್‌ ಆಗಿ ಚಿತ್ರದುರ್ಗದಿಂದ ಕರ್ತವ್ಯ ಆರಂಭಿಸಿದ ಅವರು ಹಲವು ಠಾಣೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ದಾವಣಗೆರೆಯ ಸಂಚಾರ ಪೊಲೀಸ್‌ ಠಾಣೆ, ಬಸವನಗರ ಠಾಣೆಯಲ್ಲಿ ಕೆಲಸ ಮಾಡಿ ಎಎಸ್‌ಐ ಆಗಿ ಬಡ್ತಿ ಪಡೆದಿದ್ದರು. ಇತ್ತೀಚೆಗೆ ಬಡಾವಣೆ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ನಿವೃತ್ತಿಯ ಅಂಚಿನಲ್ಲಿದ್ದರು.

ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಲಲಿತಾ ಅವರನ್ನು ನಾಗರಾಜಪ್ಪ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ನಿಟುವಳ್ಳಿಯ ಪೊಲೀಸ್‌ ವಸತಿ ಗೃಹದಲ್ಲಿ ನೆಲೆಸಿದ್ದರು. ಇಬ್ಬರು ಮಕ್ಕಳ ಪೈಕಿ ಪುತ್ರಿಯ ವಿವಾಹವಾಗಿದೆ. 8 ತಿಂಗಳ ತುಂಬು ಗರ್ಭಿಣಿಯಾಗಿರುವ ಪುತ್ರಿ ಹೆರಿಗೆಗೆ ಇತ್ತೀಚೆಗೆ ತವರು ಮನೆಗೆ ಬಂದಿದ್ದಾರೆ. ಪುತ್ರಿಯ ಮೇಲೆ ಅಪಾರ ಪ್ರೀತಿ ಇಟ್ಟುಕೊಂಡಿದ್ದ ನಾಗರಾಜಪ್ಪ, ಜೀವನ ಅಂತ್ಯಗೊಳಿಸಿಕೊಂಡಿದ್ದು ಕುಟುಂಬವನ್ನು ದುಃಖದ ಮಡುವಿಗೆ ತಳ್ಳಿದೆ.

ಮಗ, ಅಳಿಯ, ಅಕ್ಕನ ಮಕ್ಕಳೊಂದಿಗೆ ಸೇರಿ ಎಲ್ಲೆಡೆ ಹುಡಕಾಟ ನಡೆಸಿದೆವು. ಪೊಲೀಸರ ಬಳಿಯೂ ವಿಚಾರಿಸಿದೆವು. ಒಂದು ದಿನ ಕಳೆದರೂ ಪತಿ ಮನೆಗೆ ಮರಳಲಿಲ್ಲ. ಆತಂಕಗೊಂಡು ಜುಲೈ 2ರಂದು ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದೆವು. ಭಾನುವಾರ ಬೆಳಗ್ಗೆ 8ಕ್ಕೆ ದೂರವಾಣಿ ಕರೆ ಮಾಡಿದ ಪೊಲೀಸರು ತುಮಕೂರಿನಲ್ಲಿ ಮೃತಪಟ್ಟಿರುವ ಮಾಹಿತಿ ನೀಡಿದರು ಎಂದು ಕಣ್ಣೀರು ಸುರಿಸಿದರು.

ಎಸ್‌ಐ ಅಂತ್ಯಕ್ರಿಯೆ:

ತುಮಕೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಬಡಾವಣೆಯ ಠಾಣೆಯ ಎಸ್‌ಐ ಬಿ.ಆರ್‌. ನಾಗರಾಜಪ್ಪ (59) ಅವರ ಮೃತದೇಹವನ್ನು ಭಾನುವಾರ ಸಂಜೆ ದಾವಣಗೆರೆಗೆ ತರಲಾಯಿತು. ಮನೆಯ ಮುಂದೆ ಕೆಲ ಹೊತ್ತು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಕುಟುಂಬದ ಆಕ್ರಂದನ ಮನಕಲಕುವಂತಿತ್ತು. ಬಳಿಕ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಹಿಂಭಾಗದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ