ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ದಾವಣಗೆರೆ: ಕಳವು ಪ್ರಕರಣವೊಂದರಲ್ಲಿ ಜಪ್ತಿ ಮಾಡಿದ ಚಿನ್ನಾಭರಣ ನ್ಯಾಯಾಲಯದ ಅನುಮತಿ ಪಡೆದು ಮಧ್ಯಪ್ರದೇಶದಿಂದ ತಂದಿದ್ದ ನಗರದ ಬಡಾವಣೆ ಠಾಣೆಯ ಎಸ್‌ಐ ಬಿ.ಆರ್‌. ನಾಗರಾಜಪ್ಪ (PSI B.R. Nagarajappa) ಮರುದಿನವೇ ಕೌಟುಂಬಿಕ ಕಲದಿಂದ ಮನನೊಂದು ನಾಪತ್ತೆಯಾಗಿದ್ದರು ಎಂದು ವರದಿಯಾಗಿತ್ತು. (Suicide)

ಕಳವು ಪ್ರಕರಣವೊಂದರಲ್ಲಿ ಮಧ್ಯಪ್ರದೇಶದಲ್ಲಿ ಸಿಕ್ಕಿಬಿದ್ದ ಆರೋಪಿಗಳು ದಾವಣಗೆರೆಯಲ್ಲಿ ಕೃತ್ಯ ಎಸಗಿದ್ದ ಬಗ್ಗೆ ಮಾಹಿತಿಯನ್ನೂ ನೀಡಿದ್ದರು.

ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು, ಸ್ವತ್ತು ವಶಕ್ಕೆ ಎಸ್‌ಐ ನಾಗರಾಜಪ್ಪ ನೇತೃತ್ವದಲ್ಲಿ ತೆರಳಿದ್ದರು. ವಿಶೇಷ ಕರ್ತವ್ಯ ಮುಗಿಸಿ ಜೂ. 30ರಂದು ಬೆಳಗ್ಗೆ 11ಕ್ಕೆ ಮನೆಗೆ ಮರಳಿದ್ದ ಅವರು, ಜುಲೈ 1ರ ನಸುಕಿನಲ್ಲಿ ಮನೆಯನ್ನು ತೊರೆದಿದ್ದರು ಎನ್ನಲಾಗಿದೆ.

ಜೂ. 30ರ ರಾತ್ರಿ 9 ಗಂಟೆಯ ಹೊತ್ತಿಗೆ ಕೌಟುಂಬಿಕ ವಿಚಾರವಾಗಿ ಪತ್ನಿಯೊಂದಿಗೆ ಗಲಾಟೆ ನಡೆಯಿತು. ಇದರಿಂದ ಬೇಸರ ಮಾಡಿಕೊಂಡ ಅವರು ನಸುಕಿನ 2 ಗಂಟೆಯ ಹೊತ್ತಿಗೆ ಮನೆಯಿಂದ ಹೊರಹೋಗಿದ್ದರು. ಮನೆಗೂ ಮರಳದೇ ಕರ್ತವ್ಯಕ್ಕೂ ಹಾಜರಾಗದ ಇರುವುದು ಆತಂಕ ಮೂಡಿಸಿದೆ. ಕಾಣೆಯಾಗಿರುವ ಪತಿಯನ್ನು ಹುಡುಕಿಕೊಡಿ ಎಂದು ಪತ್ನಿ ಕೆ.ಇ. ಲಲಿತಾ ಅವರು ಕೆಟಿಜೆ ನಗರ ಠಾಣೆಗೆ ಜುಲೈ 2ರಂದು ದೂರು ದಾಖಲಿಸಿದ್ದರು.

ದಾವಣಗೆರೆ ತಾಲ್ಲೂಕಿನ ಜವಳಘಟ್ಟ ಗ್ರಾಮದ ನಾಗರಾಜಪ್ಪ, 1993ರಲ್ಲಿ ಪೊಲೀಸ್‌ ಇಲಾಖೆ ಸೇರಿದ್ದರು. ಕಾನ್‌ಸ್ಟೆಬಲ್‌ ಆಗಿ ಚಿತ್ರದುರ್ಗದಿಂದ ಕರ್ತವ್ಯ ಆರಂಭಿಸಿದ ಅವರು ಹಲವು ಠಾಣೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ದಾವಣಗೆರೆಯ ಸಂಚಾರ ಪೊಲೀಸ್‌ ಠಾಣೆ, ಬಸವನಗರ ಠಾಣೆಯಲ್ಲಿ ಕೆಲಸ ಮಾಡಿ ಎಎಸ್‌ಐ ಆಗಿ ಬಡ್ತಿ ಪಡೆದಿದ್ದರು. ಇತ್ತೀಚೆಗೆ ಬಡಾವಣೆ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ನಿವೃತ್ತಿಯ ಅಂಚಿನಲ್ಲಿದ್ದರು.

ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಲಲಿತಾ ಅವರನ್ನು ನಾಗರಾಜಪ್ಪ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ನಿಟುವಳ್ಳಿಯ ಪೊಲೀಸ್‌ ವಸತಿ ಗೃಹದಲ್ಲಿ ನೆಲೆಸಿದ್ದರು. ಇಬ್ಬರು ಮಕ್ಕಳ ಪೈಕಿ ಪುತ್ರಿಯ ವಿವಾಹವಾಗಿದೆ. 8 ತಿಂಗಳ ತುಂಬು ಗರ್ಭಿಣಿಯಾಗಿರುವ ಪುತ್ರಿ ಹೆರಿಗೆಗೆ ಇತ್ತೀಚೆಗೆ ತವರು ಮನೆಗೆ ಬಂದಿದ್ದಾರೆ. ಪುತ್ರಿಯ ಮೇಲೆ ಅಪಾರ ಪ್ರೀತಿ ಇಟ್ಟುಕೊಂಡಿದ್ದ ನಾಗರಾಜಪ್ಪ, ಜೀವನ ಅಂತ್ಯಗೊಳಿಸಿಕೊಂಡಿದ್ದು ಕುಟುಂಬವನ್ನು ದುಃಖದ ಮಡುವಿಗೆ ತಳ್ಳಿದೆ.

ಮಗ, ಅಳಿಯ, ಅಕ್ಕನ ಮಕ್ಕಳೊಂದಿಗೆ ಸೇರಿ ಎಲ್ಲೆಡೆ ಹುಡಕಾಟ ನಡೆಸಿದೆವು. ಪೊಲೀಸರ ಬಳಿಯೂ ವಿಚಾರಿಸಿದೆವು. ಒಂದು ದಿನ ಕಳೆದರೂ ಪತಿ ಮನೆಗೆ ಮರಳಲಿಲ್ಲ. ಆತಂಕಗೊಂಡು ಜುಲೈ 2ರಂದು ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದೆವು. ಭಾನುವಾರ ಬೆಳಗ್ಗೆ 8ಕ್ಕೆ ದೂರವಾಣಿ ಕರೆ ಮಾಡಿದ ಪೊಲೀಸರು ತುಮಕೂರಿನಲ್ಲಿ ಮೃತಪಟ್ಟಿರುವ ಮಾಹಿತಿ ನೀಡಿದರು ಎಂದು ಕಣ್ಣೀರು ಸುರಿಸಿದರು.

ಎಸ್‌ಐ ಅಂತ್ಯಕ್ರಿಯೆ:

ತುಮಕೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಬಡಾವಣೆಯ ಠಾಣೆಯ ಎಸ್‌ಐ ಬಿ.ಆರ್‌. ನಾಗರಾಜಪ್ಪ (59) ಅವರ ಮೃತದೇಹವನ್ನು ಭಾನುವಾರ ಸಂಜೆ ದಾವಣಗೆರೆಗೆ ತರಲಾಯಿತು. ಮನೆಯ ಮುಂದೆ ಕೆಲ ಹೊತ್ತು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಕುಟುಂಬದ ಆಕ್ರಂದನ ಮನಕಲಕುವಂತಿತ್ತು. ಬಳಿಕ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಹಿಂಭಾಗದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ