Donate what you earn for the betterment of the poor - Darshanapura

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಗಳಿಸಿದ್ದರಲ್ಲಿ ಬಡವರ ಏಳ್ಗೆಗೆ ದಾನ ಮಾಡಿ- ದರ್ಶನಾಪೂರ

ಮುದ್ದೇಬಿಹಾಳ : ತಾವು ಗಳಿಸಿದ್ದರಲ್ಲಿ ಸಮಾಜದ ಸೇವೆಯ ಮೂಲಕ ತಮ್ಮ ತಂದೆ ತಾಯಿಯನ್ನು ಬಡವರ ಮುಖದಲ್ಲಿ ನೋಡುವ ಪರೋಪಕಾರದ ಗುಣ ಸಮಾಜ ಸೇವಕ ಅಯೂಬ್ ಮನಿಯಾರ ಅವರಲ್ಲಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.

ಪಟ್ಟಣದ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಸೋಮವಾರ ಹಮ್ಮಿಕೊಂಡಿದ್ದ ನೇತ್ರ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಫಲಾನುಭವಿಗಳಿಗೆ ಕನ್ನಡಕ ಹಾಗೂ ಔಷಧ ಉಚಿತ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನೇತ್ರಗಳು ಮಾನವನಿಗೆ ಬಹುಮುಖ್ಯವಾದ ಅಂಗವಾಗಿದ್ದು ಅದಿಲ್ಲದಿದ್ದರೆ ಈ ಜಗತ್ತನ್ನು ಕಾಣುವುದಕ್ಕೆ ಸಾಧ್ಯವಿಲ್ಲ. ಕಣ್ಣು ಕಾಣದವರಿಗೆ ದೃಷ್ಟಿ ದೊರಕಿಸಿಕೊಡುವ ಕೆಲಸ ಮಾಡುತ್ತಿರುವ ಅಯ್ಯೂಬ ಮನಿಯಾರ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಸಿರಿವಂತಿಕೆ ಬಂದಾಗ ದಾನ ಮಾಡಬೇಕು. ಕಣ್ಣುಗಳು ಇಲ್ಲದಿದ್ದರೆ ಮನುಷ್ಯ ಪರಾವಲಂಬಿ ಜೀವಿಯಾಗಬೇಕು. ನೇತ್ರದಾನ ಪವಿತ್ರ ದಾನವಾಗಿದೆ. ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅವುಗಳ ಪ್ರಯೋಜನ ಸಾರ್ವಜನಿಕರು ಪಡೆದುಕೊಳ್ಳಬೇಕು. ಈಗಿನ ಜನಾಂಗದವರ ಕಣ್ಣುಗಳು ಬೇಗನೇ ಹಾಳಾಗಲು ಮೊಬೈಲ್, ಟಿವಿ ಕಾರಣವಾಗಿದೆ ಎಂದರು.

ಇಳಕಲ್ ಪ್ರವಚನಕಾರ ಲಾಲಹುಸೇನ್ ಕಂದಗಲ್ ಮಾತನಾಡಿ, ಯಾರಿಗೆ ದುಡ್ಡಿನ ಮೇಲೆ ಪ್ರೀತಿ ಇದೆ ಸ್ವಾರ್ಥ ರಹಿತ ಸೇವೆಗಳನ್ನು ಮಾಡುವುದಿಲ್ಲ. ಬಡವರ ಏಳ್ಗೆಗೆ ಕಾರಣವಾದ ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ. ಆದರೆ, ಸಮಾಜದಲ್ಲಿ ಪರಸ್ಪರಲ್ಲಿ ಪ್ರೀತಿ ವಿಶ್ವಾಸ ಕಡಿಮೆ ಆಗುತ್ತಿದೆ. ಸರ್ವಜನಾಂಗದ ಶಾಂತಿಯ ತೋಟವಾದ ರಾಜ್ಯದಲ್ಲಿ ಬೆಳಗಾವಿ, ಶಿವಮೊಗ್ಗದ ಶಾಲೆಯಲ್ಲಿ ನಮ್ಮ ಜಾತಿಯವನಲ್ಲ ಎಂಬ ಕಾರಣಕ್ಕೆ ಶಾಲೆಯ ಕುಡಿವ ನೀರಿನಲ್ಲಿ ವಿಷ ಬೆರೆಸುವ ಮಟ್ಟಿಗೆ ಧಾರ್ಮಿಕ ಅಸಹಿಷ್ಣುತೆ ಬೆಳೆದಿರುವುದು ಅಮಾಯಕ ಮಕ್ಕಳ ಜೀವಕ್ಕೆ ಆಪತ್ತು ತರುತ್ತದೆ. ಕ್ರೌರ್ಯತೆಯಿಂದ ಕರುಣೆ ಕಡೆಗೆ ಮನುಷ್ಯ ತೆರಳಬೇಕಿದೆ. ಕರುಣೆಯನ್ನು ತೋರಬೇಕು ಎಂಬುದನ್ನು ಮನಿಯಾರವರು ಕೈಗೊಳ್ಳುತ್ತಿರುವ ಕಾರ್ಯಗಳು ತೋರಿಸಿಕೊಡುತ್ತಿವೆ ಎಂದರು.

ಕಾರ್ಯಕ್ರಮದ ರೂವಾರಿ, ಮನಿಯಾರ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಅಯ್ಯೂಬ ಮನಿಯಾರ ಮಾತನಾಡಿ, ನಮ್ಮ ತಂದೆ ತಾಯಿ ಜೀವಂತ ಇಲ್ಲ. ಆದರೆ, ಬಡವರಿಗೆ ಇಂತಹ ಸೇವೆಗಳನ್ನು ಕೈಗೊಂಡಾಗ ಅವರು ಹರಸುವ ಆಶೀರ್ವಾದದಲ್ಲಿ ನನ್ನ ತಂದೆ ತಾಯಿಯನ್ನು ಕಾಣುತ್ತೇನೆ. ಅಕ್ಕತಂಗಿ, ಅಣ್ಣ ತಮ್ಮಂದಿರ ಜೊತೆಗಿನ ಸಂಬಂಧಗಳನ್ನು ಕಡಿದುಕೊಳ್ಳದೇ ಉಳಿಸಿಕೊಂಡು ನಗು ನಗುತ್ತ ಜೀವನ ನಡೆಸಿ ಎಂದು ಹೇಳಿದರು.

ಅನುಗ್ರಹ ಕಣ್ಣಿನ ಆಸ್ಪತ್ರೆ ವೈದ್ಯ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ, ಆಲಮೇಲದ ಜಗದೇವ ಮಲ್ಲಿಬೊಮ್ಮ ಸ್ವಾಮೀಜಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಂಕರಗೌಡ ಹೊಸಮನಿ, ಬನಶ್ರೀ ಸೌಹಾರ್ದ ಬ್ಯಾಂಕ್ ಅಧ್ಯಕ್ಷ ರೂಪಸಿಂಗ ಲೋಣಾರಿ, ಉದ್ಯಮಿ ಮದನಸಾಬ ಸಾಲವಾಡಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಡಾ.ಎ.ಎ.ನಾಲಬಂದ, ಅಫ್ತಾಬ ಮನಿಯಾರ, ಎ.ಎಂ.ಎತ್ತಿನಮನಿ, ಮೈಬೂಬ ನಾಲತವಾಡ, ಆಯ್.ಎಲ್.ಮಮದಾಪೂರ, ಹಾಜಿಮಲಂಗ ಎಕಿನ್ ಇದ್ದರು. 500 ಜನರ ಕಣ್ಣಿನ ತಪಾಸಣೆ ನಡೆಸಿದ್ದರಲ್ಲಿ 200 ಜನಕ್ಕೆ ಉಚಿತವಾಗಿ ಕನ್ನಡ, ಔಷಧಿ ವಿತರಿಸಲಾಯಿತು. ನಿರ್ಗತಿಕರಿಗೆ ಮಾಸಿಕ ಪಿಂಚಣಿಯನ್ನು ನೀಡಲಾಯಿತು.

ವೀರೇಶ ವಾಲಿ ತಂಡದವರು ನಾಡಗೀತೆ ಹಾಡಿದರು. ಮುಜಾಹಿದ್ದ ನಮಾಜಕಟ್ಟಿ ಸ್ವಾಗತಿಸಿದರು. ಶೃತಿ ಜಾಧವ ನಿರೂಪಿಸಿದರು.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ