ರೈತರ ಪಂಪಸೆಟ್‌ಗೆ ವಿದ್ಯುತ್ ಕಡಿತಗೊಳಿಸಬೇಡಿ

ರೈತರ ಪಂಪಸೆಟ್‌ಗೆ ವಿದ್ಯುತ್ ಕಡಿತಗೊಳಿಸಬೇಡಿ

ಮುದ್ದೇಬಿಹಾಳ : ಪಂಪಸೆಟ್ ಹೊಂದಿರುವ ರೈತರು 2018ರಲ್ಲಿ 50 ರೂ.ತುಂಬಿಸಿಕೊoಡು ಆರ್.ಆರ್ ನಂಬರ್ ಸಹಿತ ವಿದ್ಯುತ್‌ನ್ನು ಪಂಪಸೆಟ್‌ಗಳಿಗೆ ಒದಗಿಸಲಾಗಿತ್ತು.ಈಗ ಏಕಾಏಕಿ ಡೆಪಾಸಿಟ್ ಹಣ ತುಂಬದಿದ್ದರೆ ಪಂಪಸೆಟ್‌ಗಳಿಗೆ ವಿದ್ಯುತ್ ಕಡಿತಗೊಳಿಸುವ ಕಾರ್ಯತಂತ್ರ ಹೆಸ್ಕಾಂನಿoದ ನಡೆದಿದ್ದು ಇದು ಮುಂದುವರೆದರೆ ರೈತ ಸಂಘಟನೆಗಳಿoದ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ರೈತ ಮುಖಂಡರು ನೀಡಿದ್ದಾರೆ.

ಪಟ್ಟಣದ ಹೆಸ್ಕಾಂ ಕಚೇರಿಗೆ ಆಗಮಿಸಿದ್ದ ಹಂಡರಗಲ್,ಯರಝರಿ,ಹಿರೇಮುರಾಳ ಮೊದಲಾದ ಗ್ರಾಮಗಳ ರೈತರು ಹೆಸ್ಕಾಂ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು. ಪಂಪಸೆಟ್‌ಗೆ 18,000 ರೂ. ಡಿಪಾಸೆಟ್ ತುಂಬಲು ಹಾಗೂ ಆರ್.ಆರ್.ನಂಬರ್ ಇಲ್ಲದವರಿಗೆ ಪ್ರತಿ ಪಂಪಸೆಟ್‌ಗೆ 36,000 ರೂ.ಡಿಪಾಸಿಟ್ ತುಂಬಲು ರೈತರಿಗೆ ಆದೇಶ ಮಾಡಿದ್ದಾರೆ.ಅಲ್ಲದೇ ಅವಧಿ ಎರಡು ದಿನಗಳ ಕಾಲಾವಕಾಶ ನೀಡಿದ್ದಾರೆ.ಒಂದು ಕಡೆ ಜನರು ಕೇಳದೇ ಇದ್ದರೂ ವಿದ್ಯುತ್ ಉಚಿತವಾಗಿ ಕೊಡುತ್ತಿರುವ ಸರ್ಕಾರ ಇನ್ನೊಂದೆಡೆ ರೈತರು ಬೆಳೆಯುತ್ತಿರುವ ಬೆಳೆಗಳಿಗೆ ವಿದ್ಯುತ್ ಸ್ಥಗಿತಗೊಳಿಸುವ ಕಾರ್ಯಕ್ಕೆ ಮುಂದಾಗುತ್ತಿದೆ ಎಂದು ರೈತ ಮುಖಂಡ ಸಂಗಣ್ಣ ಬಾಗೇವಾಡಿ ಹೇಳಿದರು.

2018ರಲ್ಲಿ 50 ರೂ.ಗಳಲ್ಲಿ ಆರ್.ಆರ್ ನಂಬರ್ ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿತ್ತು.ಆದರೆ ಈಗ ಆದೇಶ ಮಾರ್ಪಡಿಸಿ ಡಿಪಾಸಿಟ್ ಹಣವನ್ನು ತುಂಬುವoತೆ ಅಧಿಕಾರಿಗಳ ಮೂಲಕ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಆರೋಪಿಸಿದರು.
ಈಗ ಹೊಲದಲ್ಲಿ ಬೆಳೆಗಳ ಕಟಾವಿನ ಸಮಯವಾಗಿದ್ದು ವಿದ್ಯುತ್ ಕಡಿತಗೊಳಿಸಿದರೆ ರೈತರಿಗೆ ತೊಂದರೆಯಾಗುತ್ತದೆ.ಮೊದಲಿನ 2018ರಲ್ಲಿ ಮಾಡಿರುವ ಆದೇಶವನ್ನೆ ಮುಂದುವರೆಸಬೇಕು.ಇಲ್ಲದಿದ್ದರೆ ರೈತರು ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಹೆಸ್ಕಾಂ ಎಇಇ ಆರ್.ಎನ್.ಹಾದಿಮನಿ ಮಾತನಾಡಿ, ಸದ್ಯಕ್ಕೆ ಯಾವುದೇ ರೈತರ ಟಿಸಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಆದೇಶ ಮಾಡಿಲ್ಲ.ಒಂದು ವಾರ ಕಾಲಾವಕಾಶ ಇದ್ದು ಪಂಪಸೆಟ್ ಸಾಮರ್ಥ್ಯದ ಆಧಾರದ ಮೇಲೆ ಡೆಪಾಸಿಟ್ ಕಟ್ಟಬೇಕಿರುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರು.
ಮನವಿ ಸಲ್ಲಿಸುವ ಸಮಯದಲ್ಲಿ ರೈತ ಮುಖಂಡರಾದ ವಾಯ್.ಎಲ್.ಬಿರಾದಾರ, ಸಂಗಪ್ಪ ಹಂಡರಗಲ್, ಅಯ್ಯಪ್ಪ ಬಿದರಕುಂದಿ, ಬಸನಗೌಡ ಪಾಟೀಲ ಮೊದಲಾದವರು ಇದ್ದರು.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ