ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ ಬೆಳವಣಿಗೆಯನ್ನು ನೋಡಿ ಹೊಟ್ಟೆ ಉರಿದುಕೊಳ್ಳಬೇಡಿ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು.

ತಾಲ್ಲೂಕಿನ ಖಿಲಾರಹಟ್ಟಿ ಗ್ರಾಮದಲ್ಲಿ ಸಮಾಜ ಸೇವಕ ಎಂ.ಎನ್.ಮದರಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಬೈದವರು,ಹೊಗಳಿದವರನ್ನು ಅಪ್ಪಿಕೊಳ್ಳುವ ಸಮಾಜ ಕುರುಬ ಸಮಾಜವಾಗಿದೆ.ಅತೀ ಹೆಚ್ಚು ಭಕ್ತಿಯಿಂದ ನಡೆದುಕೊಳ್ಳುವ ಸಮಾಜವೂ ಕುರುಬ ಸಮಾಜವಾಗಿದೆ.ನಿಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ.ಸಮಾಜದ ಹೆಸರು ತರುತ್ತವೆ. ನಿಜವಾದ ಸಿರಿವಂತ ವ್ಯಕ್ತಿ ಎಂದರೆ ಒಂದಿಷ್ಟು ಬಡಮಕ್ಕಳ ಕಲ್ಯಾಣ ಮಾಡಿ ಆ ಕಲ್ಯಾಣಕ್ಕೆ ಒಳಗಾದವರ ಮುಖದಲ್ಲಿ ನಗುವನ್ನು ಕಾಣುವವನೇ ನಿಜವಾದ ಸಿರಿವಂತ.ಕುರುಬ ಸಮಾಜ ಶ್ರಮ,ಕಾಯಕ ಸಿದ್ಧಾಂತದ ಮೇಲೆ ಜೀವನ ಮಾಡುತ್ತಿರುವ ಸಮಾಜವಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ,ನಿಮ್ಮ ಮನೆತನಕ್ಕೆ ಹೆಸರಿರುತ್ತದೆ.ಅದು ಒಂದು ದಿನಕ್ಕೆ ಬಂದ ಹೆಸರು ಅಲ್ಲ.ಅದರ ಹಿಂದೆ ನೂರಾರು,ಸಾವಿರಾರು ವರ್ಷಗಳ ಇತಿಹಾಸ ಇರುತ್ತದೆ.ಅದನ್ನು ಉಳಿಸಿಕೊಂಡು ಹೋಗುವ ಕೆಲಸ ಮಾಡಬೇಕು.ಸಣ್ಣ ಗುತ್ತಿಗೆದಾರರಾಗಿ ವೃತ್ತಿ ಆರಂಭಿಸಿದ ಎನ್.ಎಸ್.ಪೂಜಾರಿ ಅವರು ಇಂದು ಕೆಟಗರಿ ಗುತ್ತಿಗೆದಾರರಾಗಿ ಬೆಳೆದಿದ್ದಾರೆ.ಸಾಮೂಹಿಕ ವಿವಾಹದಂತಹ ಕೆಲಸಗಳ ಮುಖಾಂತರ ತಾಲ್ಲೂಕಿನಾದ್ಯಂತ ಮದರಿ ಅವರ ಮನೆತನದ ಹೆಸರು ಮೆರಗನ್ನು ತರುವಂತಹ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.

ಸಮಾಜ ಸೇವಕ ಎಂಎನ್.ಮದರಿ ಮಾತನಾಡಿ, ನನ್ನ ತಂದೆಯ ಆಸೆಯಂತೆ ಖಿಲಾರಹಟ್ಟಿಯಲ್ಲಿಯೇ ಬೀರಲಿಂಗೇಶ್ವರ ದೇವಸ್ಥಾನ ಕಟ್ಟಿ 2005ರಲ್ಲಿ ಸಾಮೂಹಿಕ ವಿವಾಹ ಆರಂಭಗೊಳಿಸಿದೆವು.ಅದು 2026ರವರೆಗೆ ಮುಂದುವರೆದುಕೊOಡು ಬಂದಿದೆ.ನಮ್ಮಲ್ಲಿರು ಕಾರ್ಮಿಕರು,ಬಡವರ ಕುಟುಂಬದವರಿಗೆ ಅನುಕೂಲ ಒದಗಿಸಲು ಸಾಮೂಹಿಕ ವಿವಾಹಗಳನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು..

ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ತಮ್ಮ ಮಗನ ಮದುವೆಯಲ್ಲಿ ಬಡವರ ಮಕ್ಕಳಿಗೂ ಮದುವೆ ಮಾಡಿಕೊಟ್ಟಿರುವ ಮದರಿ ಅವರದ್ದು ಒಳ್ಳೆಯ ವ್ಯಕ್ತಿಯಾಗಿದ್ದಾರೆ.ಸಮಾಜದವರು ಇಂತವರನ್ನು ಬೆಳೆಸಬೇಕು.ಮಲ್ಲಿಕಾರ್ಜುನ ಮದರಿ, ಯರಝರಿ ಭಾಗದಲ್ಲಿ ಮಲ್ಲು ಅಪರಾಧಿ ಒಳ್ಳೆಯ ವ್ಯಕ್ತಿಗಳು.ನಿಮ್ಮನ್ನು ಯಾವ ರಾಜಕಾರಣಿಯೂ ಬೆಳೆಸುವುದಿಲ್ಲ.ಎಲ್ಲರೂ ಅವರವರ ಮಕ್ಕಳು,ಹೆಂಡoದಿರನ್ನೇ ಬೆಳೆಸುತ್ತಾರೆ.ಆದರೆ ನಿಮ್ಮ ಸಮಾಜದಲ್ಲಿ ನೀವೇ ಬೆಳೆಯಬೇಕು.ಈ ಕ್ಷೇತ್ರದಲ್ಲಿ ಕುರುಬ ಸಮಾಜದವರು ಶಾಸಕರಾಗಬೇಕು.ಈ ಭಾಗದಲ್ಲಿ ನೀರಾವರಿಗಾಗಿ ಹೋರಾಟ ನಡೆಯಬೇಕು.ಜನಪ್ರತಿನಿಧಿಗಳು ಇದಕ್ಕೆ ಇಚ್ಛಾಶಕ್ತಿ ತೋರಬೇಕು ಎಂದು ಹೇಳಿದರು.

ದಿವ್ಯ ಸಾನಿಧ್ಯ ವಹಿಸಿದ್ದ ಸರೂರು ಹಾಲುಮತ ಗುರುಪೀಠದ ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ, ಕುರುಬ ಜನಾಂಗದವರು ಮೂಢನಂಬಿಕೆಗಳನ್ನು ಬಿಡಬೇಕು.ಪ್ರಾಣಿಬಲಿ ಕೊಡಬಾರದು.ಬೇಟೆ ಮಾಡುವುದನ್ನು ಬಿಟ್ಟರೆ ನೀವು ಅಧಿಕಾರದಲ್ಲಿ ಆಳ್ವಿಕೆ ನಡೆಸಬಹುದಾಗಿದೆ ಎಂದು ಕಿವಿಮಾತು ಹೇಳಿದರು.ಸಿದ್ಧನಕೊಳ್ಳದ ಕಲಾಪೋಷಕ ಮಠದ ಶಿವಕುಮಾರ ಸ್ವಾಮೀಜಿ,ಕಾಂಗ್ರೆಸ್ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿದರು.ಅಂಕಲಿಮಠದ ನಿರುಪಾದೀಶ್ವರ ಸ್ವಾಮೀಜಿ,ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ,ಸರೂರಿನ ಶಿವಯ್ಯ ಗುರುವಿನ,ಕಾಡಸಿದ್ದೇಶ್ವರ ಮಠದ ರಮಾನಂದ ಸ್ವಾಮೀಜಿ,ಅರವಿಂದ ಒಡೆಯರ್, ಲಿಂಗಬೀರದೇವರು, ಕೆಂಚರಾಯ ಮುತ್ಯಾ,ವಕೀಲರಾದ ಬಿ.ಜೆ.ಜಗ್ಗಲ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ ,ಅಧ್ಯಕ್ಷತೆ ವಹಿಸಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ನೀಲಕಂಠಪ್ಪ ಪೂಜಾರಿ, ಮುಖಂಡರಾದ ಮಲಕೇಂದ್ರಾಯಗೌಡ ಪಾಟೀಲ,ಗಂಗಾಧರರಾವ ನಾಡಗೌಡ ,ಬಿ.ಎಸ್.ಶಿರೋಳ,ಕೆಂಚಪ್ಪ ಬಿರಾದಾರ ಪುರಸಭೆ ಮಾಜಿ ಸದಸ್ಯೆ ಸಂಗಮ್ಮ ದೇವರಳ್ಳಿ,ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಮಾಜಿ ನಿರ್ದೇಶಕಿ ಶ್ರೀದೇವಿ ಮದರಿ,ಯಲ್ಲಪ್ಪ ನಾಯಕಮಕ್ಕಳ, ಗುತ್ತಿಗೆದಾರರಾದ ಎಚ್.ಎಮ್.ನಾಯಕ,ಎಂ.ಎಚ್.ಬೊಮ್ಮನಹಳ್ಳಿ ಇದ್ದರು.V.S. ಮಳಗಾವಿ ಹಾಗೂ ನೀಲಮ್ಮ MAGI ಪ್ರಾರ್ಥಿಸಿದರು.ವೀರೇಶ ಗೂಡಲಮನಿ ಸ್ವಾಗತಿಸಿದರು.ಬಾಲು ಕರೇಕಲ್ಲ ನಿರೂಪಿಸಿದರು. ಪುಸ್ತಕ ಬಿಡುಗಡೆ: ಬ.ಬಾಗೇವಾಡಿ ಸಮಾಜ ಕಲ್ಯಾಣ ಇಲಾಖೆಯ ನೌಕರ,ಸಾಹಿತಿ ವೀರೇಶ ಗೂಡಲಮನಿ ಅವರು ಬರೆದ ಮನ್ನಿರೇಶ್ವರ ಮಹಾತ್ಮೆ ಪುಸ್ತಕವನ್ನು ಸಿದ್ಧನಕೊಳ್ಳದ ಶಿವಕುಮಾರ ಸ್ವಾಮೀಜಿ,ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು,ಶಾಸಕ ಸಿ.ಎಸ್.ನಾಡಗೌಡ,ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ ಬಿಡುಗಡೆ ಮಾಡಿದರು.

22 ಜೋಡಿ ನವಜೀವನಕ್ಕೆ ಪದಾರ್ಪಣೆ:
ಸಮಾಜ ಸೇವಕ ಎಂ.ಎನ್.ಮದರಿ ಅವರ ನೇತೃತ್ವದಲ್ಲಿ ಜರುಗಿದ ಸಾಮೂಹಿಕ ವಿವಾಹದಲ್ಲಿ ಒಟ್ಟು 22 ಜೋಡಿಗಳು ನವಜೀವನಕ್ಕೆ ಕಾಲಿರಿಸಿದರು.ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಬಾಲ್ಯವಿವಾಹ ನಡೆಯದಂತೆ ನೋಡಿಕೊಂಡರು.ಪೊಲೀಸ್ ಇಲಾಖೆಯಿಂದ ಭದ್ರತೆ ಒದಗಿಸಲಾಗಿತ್ತು.

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ