ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ ಬೆಳವಣಿಗೆಯನ್ನು ನೋಡಿ ಹೊಟ್ಟೆ ಉರಿದುಕೊಳ್ಳಬೇಡಿ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು.

ತಾಲ್ಲೂಕಿನ ಖಿಲಾರಹಟ್ಟಿ ಗ್ರಾಮದಲ್ಲಿ ಸಮಾಜ ಸೇವಕ ಎಂ.ಎನ್.ಮದರಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಬೈದವರು,ಹೊಗಳಿದವರನ್ನು ಅಪ್ಪಿಕೊಳ್ಳುವ ಸಮಾಜ ಕುರುಬ ಸಮಾಜವಾಗಿದೆ.ಅತೀ ಹೆಚ್ಚು ಭಕ್ತಿಯಿಂದ ನಡೆದುಕೊಳ್ಳುವ ಸಮಾಜವೂ ಕುರುಬ ಸಮಾಜವಾಗಿದೆ.ನಿಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ.ಸಮಾಜದ ಹೆಸರು ತರುತ್ತವೆ. ನಿಜವಾದ ಸಿರಿವಂತ ವ್ಯಕ್ತಿ ಎಂದರೆ ಒಂದಿಷ್ಟು ಬಡಮಕ್ಕಳ ಕಲ್ಯಾಣ ಮಾಡಿ ಆ ಕಲ್ಯಾಣಕ್ಕೆ ಒಳಗಾದವರ ಮುಖದಲ್ಲಿ ನಗುವನ್ನು ಕಾಣುವವನೇ ನಿಜವಾದ ಸಿರಿವಂತ.ಕುರುಬ ಸಮಾಜ ಶ್ರಮ,ಕಾಯಕ ಸಿದ್ಧಾಂತದ ಮೇಲೆ ಜೀವನ ಮಾಡುತ್ತಿರುವ ಸಮಾಜವಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ,ನಿಮ್ಮ ಮನೆತನಕ್ಕೆ ಹೆಸರಿರುತ್ತದೆ.ಅದು ಒಂದು ದಿನಕ್ಕೆ ಬಂದ ಹೆಸರು ಅಲ್ಲ.ಅದರ ಹಿಂದೆ ನೂರಾರು,ಸಾವಿರಾರು ವರ್ಷಗಳ ಇತಿಹಾಸ ಇರುತ್ತದೆ.ಅದನ್ನು ಉಳಿಸಿಕೊಂಡು ಹೋಗುವ ಕೆಲಸ ಮಾಡಬೇಕು.ಸಣ್ಣ ಗುತ್ತಿಗೆದಾರರಾಗಿ ವೃತ್ತಿ ಆರಂಭಿಸಿದ ಎನ್.ಎಸ್.ಪೂಜಾರಿ ಅವರು ಇಂದು ಕೆಟಗರಿ ಗುತ್ತಿಗೆದಾರರಾಗಿ ಬೆಳೆದಿದ್ದಾರೆ.ಸಾಮೂಹಿಕ ವಿವಾಹದಂತಹ ಕೆಲಸಗಳ ಮುಖಾಂತರ ತಾಲ್ಲೂಕಿನಾದ್ಯಂತ ಮದರಿ ಅವರ ಮನೆತನದ ಹೆಸರು ಮೆರಗನ್ನು ತರುವಂತಹ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.

ಸಮಾಜ ಸೇವಕ ಎಂಎನ್.ಮದರಿ ಮಾತನಾಡಿ, ನನ್ನ ತಂದೆಯ ಆಸೆಯಂತೆ ಖಿಲಾರಹಟ್ಟಿಯಲ್ಲಿಯೇ ಬೀರಲಿಂಗೇಶ್ವರ ದೇವಸ್ಥಾನ ಕಟ್ಟಿ 2005ರಲ್ಲಿ ಸಾಮೂಹಿಕ ವಿವಾಹ ಆರಂಭಗೊಳಿಸಿದೆವು.ಅದು 2026ರವರೆಗೆ ಮುಂದುವರೆದುಕೊOಡು ಬಂದಿದೆ.ನಮ್ಮಲ್ಲಿರು ಕಾರ್ಮಿಕರು,ಬಡವರ ಕುಟುಂಬದವರಿಗೆ ಅನುಕೂಲ ಒದಗಿಸಲು ಸಾಮೂಹಿಕ ವಿವಾಹಗಳನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು..

ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ತಮ್ಮ ಮಗನ ಮದುವೆಯಲ್ಲಿ ಬಡವರ ಮಕ್ಕಳಿಗೂ ಮದುವೆ ಮಾಡಿಕೊಟ್ಟಿರುವ ಮದರಿ ಅವರದ್ದು ಒಳ್ಳೆಯ ವ್ಯಕ್ತಿಯಾಗಿದ್ದಾರೆ.ಸಮಾಜದವರು ಇಂತವರನ್ನು ಬೆಳೆಸಬೇಕು.ಮಲ್ಲಿಕಾರ್ಜುನ ಮದರಿ, ಯರಝರಿ ಭಾಗದಲ್ಲಿ ಮಲ್ಲು ಅಪರಾಧಿ ಒಳ್ಳೆಯ ವ್ಯಕ್ತಿಗಳು.ನಿಮ್ಮನ್ನು ಯಾವ ರಾಜಕಾರಣಿಯೂ ಬೆಳೆಸುವುದಿಲ್ಲ.ಎಲ್ಲರೂ ಅವರವರ ಮಕ್ಕಳು,ಹೆಂಡoದಿರನ್ನೇ ಬೆಳೆಸುತ್ತಾರೆ.ಆದರೆ ನಿಮ್ಮ ಸಮಾಜದಲ್ಲಿ ನೀವೇ ಬೆಳೆಯಬೇಕು.ಈ ಕ್ಷೇತ್ರದಲ್ಲಿ ಕುರುಬ ಸಮಾಜದವರು ಶಾಸಕರಾಗಬೇಕು.ಈ ಭಾಗದಲ್ಲಿ ನೀರಾವರಿಗಾಗಿ ಹೋರಾಟ ನಡೆಯಬೇಕು.ಜನಪ್ರತಿನಿಧಿಗಳು ಇದಕ್ಕೆ ಇಚ್ಛಾಶಕ್ತಿ ತೋರಬೇಕು ಎಂದು ಹೇಳಿದರು.

ದಿವ್ಯ ಸಾನಿಧ್ಯ ವಹಿಸಿದ್ದ ಸರೂರು ಹಾಲುಮತ ಗುರುಪೀಠದ ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ, ಕುರುಬ ಜನಾಂಗದವರು ಮೂಢನಂಬಿಕೆಗಳನ್ನು ಬಿಡಬೇಕು.ಪ್ರಾಣಿಬಲಿ ಕೊಡಬಾರದು.ಬೇಟೆ ಮಾಡುವುದನ್ನು ಬಿಟ್ಟರೆ ನೀವು ಅಧಿಕಾರದಲ್ಲಿ ಆಳ್ವಿಕೆ ನಡೆಸಬಹುದಾಗಿದೆ ಎಂದು ಕಿವಿಮಾತು ಹೇಳಿದರು.ಸಿದ್ಧನಕೊಳ್ಳದ ಕಲಾಪೋಷಕ ಮಠದ ಶಿವಕುಮಾರ ಸ್ವಾಮೀಜಿ,ಕಾಂಗ್ರೆಸ್ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿದರು.ಅಂಕಲಿಮಠದ ನಿರುಪಾದೀಶ್ವರ ಸ್ವಾಮೀಜಿ,ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ,ಸರೂರಿನ ಶಿವಯ್ಯ ಗುರುವಿನ,ಕಾಡಸಿದ್ದೇಶ್ವರ ಮಠದ ರಮಾನಂದ ಸ್ವಾಮೀಜಿ,ಅರವಿಂದ ಒಡೆಯರ್, ಲಿಂಗಬೀರದೇವರು, ಕೆಂಚರಾಯ ಮುತ್ಯಾ,ವಕೀಲರಾದ ಬಿ.ಜೆ.ಜಗ್ಗಲ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ ,ಅಧ್ಯಕ್ಷತೆ ವಹಿಸಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ನೀಲಕಂಠಪ್ಪ ಪೂಜಾರಿ, ಮುಖಂಡರಾದ ಮಲಕೇಂದ್ರಾಯಗೌಡ ಪಾಟೀಲ,ಗಂಗಾಧರರಾವ ನಾಡಗೌಡ ,ಬಿ.ಎಸ್.ಶಿರೋಳ,ಕೆಂಚಪ್ಪ ಬಿರಾದಾರ ಪುರಸಭೆ ಮಾಜಿ ಸದಸ್ಯೆ ಸಂಗಮ್ಮ ದೇವರಳ್ಳಿ,ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಮಾಜಿ ನಿರ್ದೇಶಕಿ ಶ್ರೀದೇವಿ ಮದರಿ,ಯಲ್ಲಪ್ಪ ನಾಯಕಮಕ್ಕಳ, ಗುತ್ತಿಗೆದಾರರಾದ ಎಚ್.ಎಮ್.ನಾಯಕ,ಎಂ.ಎಚ್.ಬೊಮ್ಮನಹಳ್ಳಿ ಇದ್ದರು.V.S. ಮಳಗಾವಿ ಹಾಗೂ ನೀಲಮ್ಮ MAGI ಪ್ರಾರ್ಥಿಸಿದರು.ವೀರೇಶ ಗೂಡಲಮನಿ ಸ್ವಾಗತಿಸಿದರು.ಬಾಲು ಕರೇಕಲ್ಲ ನಿರೂಪಿಸಿದರು. ಪುಸ್ತಕ ಬಿಡುಗಡೆ: ಬ.ಬಾಗೇವಾಡಿ ಸಮಾಜ ಕಲ್ಯಾಣ ಇಲಾಖೆಯ ನೌಕರ,ಸಾಹಿತಿ ವೀರೇಶ ಗೂಡಲಮನಿ ಅವರು ಬರೆದ ಮನ್ನಿರೇಶ್ವರ ಮಹಾತ್ಮೆ ಪುಸ್ತಕವನ್ನು ಸಿದ್ಧನಕೊಳ್ಳದ ಶಿವಕುಮಾರ ಸ್ವಾಮೀಜಿ,ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು,ಶಾಸಕ ಸಿ.ಎಸ್.ನಾಡಗೌಡ,ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ ಬಿಡುಗಡೆ ಮಾಡಿದರು.

22 ಜೋಡಿ ನವಜೀವನಕ್ಕೆ ಪದಾರ್ಪಣೆ:
ಸಮಾಜ ಸೇವಕ ಎಂ.ಎನ್.ಮದರಿ ಅವರ ನೇತೃತ್ವದಲ್ಲಿ ಜರುಗಿದ ಸಾಮೂಹಿಕ ವಿವಾಹದಲ್ಲಿ ಒಟ್ಟು 22 ಜೋಡಿಗಳು ನವಜೀವನಕ್ಕೆ ಕಾಲಿರಿಸಿದರು.ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಬಾಲ್ಯವಿವಾಹ ನಡೆಯದಂತೆ ನೋಡಿಕೊಂಡರು.ಪೊಲೀಸ್ ಇಲಾಖೆಯಿಂದ ಭದ್ರತೆ ಒದಗಿಸಲಾಗಿತ್ತು.

Latest News

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ ಸ್ಥಾನಕ್ಕೆ ಅಂತಿಮಗೊoಡಿತ್ತು.ಆದರೆ ಕೊನೆ ಗಳಿಗೆಯಲ್ಲಿ ಎಸ್.ಆರ್.ಪಾಟೀಲರ ಹೆಸರು ಘೋಷಣೆಯಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರ ಬೆಂಬಲಿಗರು ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಕಚೇರಿಗೆ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು,ಬೆಂಬಲಿಗರನ್ನುದ್ದೇಶಿಸಿ ಸಿಎಂ ಡಿಕೆಶಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.ನಿಮ್ಮ ಆಸೆ,ವಿಚಾರ ನಾನು ಅರಿತಿದ್ದೇನೆ.ನಾಡಗೌಡರ ಬಗ್ಗೆ ಯಾರು