ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕಾಲುವೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಕೆಲವು ಮುಖಂಡರು ಮುಗ್ಧ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ.ಅದಕ್ಕೆ ರೈತರು ಕಿವಿಗೊಡಬಾರದು.ವಾರದಲ್ಲಿ ಕಾಲುವೆ ಮೂಲP ಕೆರೆಗಳನ್ನು ತುಂಬಿಸಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕೆರೆಗಳನ್ನು ತುಂಬಿಸಲು ವಿಳಂಬವಾಗಿದೆ.ನೀರು ಕೊಡಬಾರದು ಎಂಬ ಉದ್ದೇಶ ಸರ್ಕಾರಕ್ಕಾಗಲೀ,ಅಧಿಕಾರಿಗಳಿಗಾಗಲೀ ಇಲ್ಲ.ಬೇಸಿಗೆಯ ಸಮಯದಲ್ಲಿ ಕುಡಿವ ನೀರು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ.ನಾನು ಕೆಬಿಜೆಎನ್‌ಎಲ್ ಮುಖ್ಯ ಅಭಿಯಂತರರ ಜೊತೆಗೆ ಮಾತನಾಡಿದ್ದೇನೆ.ವಿದ್ಯುತ್ ಗೋಪುರವೊಂದರ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಒಂದು ವಾರಗಳ ಕಾಲ ನೀರು ಹರಿಸುವ ಕಾರ್ಯ ವಿಳಂಬವಾಗಿದೆ.ಅದನ್ನು ತಿಳಿದುಕೊಳ್ಳದೇ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಆಗಬಾರದು ಎಂದು ನಾಡಗೌಡರು ಹೇಳಿದರು.

ಹಿಂದೆ ಬಿಜೆಪಿ ಸರ್ಕಾರ ಇದ್ದಾಗ 2013 ರಿಂದ ಹಿಡಿದು ಈವರೆಗೂ ಕೇಂದ್ರ ಸರಕಾರ ಕೃಷ್ಣಾ ನದಿ ನೀರಿನ ಹಂಚಿಕೆಗೆ ನೋಟಿಫಿಕೇಶನ ಮಾಡುತ್ತಿಲ್ಲ.ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲು ಆಗುತ್ತಿಲ್ಲ.ರೈತರ ಜಮೀನಿಗೆ ನೀರು ಹರಿಸಲು ಸಾಕಷ್ಟು ಸಿದ್ದತೆ ಮಾಡಿಕೊಂಡರೂ ರೈತರಿಗೆ ನೀರು ಕೊಡಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುತ್ತಿಲ್ಲ.ಪ್ರಧಾನಿಯವರನ್ನು ನೀರಾವರಿ ಮಂತ್ರಿ,ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ ಭೇಟಿಯಾಗಿದ್ದಾರೆ.ಅವರು ನೋಟಿಫೀಕೇಶನ್ ಮಾಡುತ್ತಿಲ್ಲ ಎಂದು ದೂರಿದರು.

ಯಾವುದೇ ಕೆಲಸವಾಗಲೀ ನಾವು ಸಾಮೂಹಿಕವಾಗಿ ನಿರ್ಧಾರ ತಗೆದುಕೊಳ್ಳುತ್ತೇವೆ.ಪ್ರತಿಯೊಂದು ಕೆಲಸನ್ನು ಪ್ರಚಾರ ಮಾಡಿ ನಾವು ಮಾಡುವುದಿಲ್ಲ.ರೈತರು ಸಮಾಧಾನದಿಂದ ಇರಬೇಕು.ಕುಡಿಯುವುದಕ್ಕೆಂದು ನೀರು ಬಿಟ್ಟರೆ 5-10 ಎಚ್.ಪಿ ಮೋಟರ್ ಹಚ್ಚಿ ನೀರು ಜಮೀನಿಗೆ ಹೊಡೆದರೆ ಅಂತಹ ಮೋಟರ್‌ಗಳನ್ನು ಜಿಲ್ಲಾಧಿಕಾರಿಗಳು ವಶಪಡಿಸಿಕೊಳ್ಳುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,