ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಜನ್ಮದಿನ,ಮದುವೆ ವಾರ್ಷಿಕೋತ್ಸವ ಹಾಗೂ ಇನ್ನೀತರ ವಯಕ್ತಿಕ ಶುಭ ಸಂದರ್ಭಗಳಲ್ಲಿ ದುಂದುವೆಚ್ಚ ಮಾಡದೇ ನಾಲ್ಕು ಜನ ಹಸಿದವರಿಗೆ ಅನ್ನದಾನ ಮಾಡಿದರೆ ಅವರಿಗೆ ಹೊಟ್ಟೆ ತುಂಬಿಸಿದ ಪುಣ್ಯ ನಮಗೆ ದೊರಕುತ್ತದೆ ಎಂದು ಬಿಜೆಪಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಕಾಶೀಬಾಯಿ ಎಸ್.ರಾಂಪೂರ ಹೇಳಿದರು.

ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಗುರುವಾರ ಲಯನ್ಸ್ ಕ್ಲಬ್ ಸಹಯೋಗದಲ್ಲಿ ತಮ್ಮ ಜನ್ಮದಿನದ ನಿಮಿತ್ಯ ಸರ್ಕಾರಿ ಆಸ್ಪತ್ರೆಗೆ ಬಂದ ರೋಗಿಗಳು, ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕೈಗೊಂಡು ಅವರು ಮಾತನಾಡಿರು.ಹಬ್ಬ ಹಾಗೂ ವಿಶೇಷ ದಿನಗಳಂದು ಕೇಕ್ ಕತ್ತರಿಸುವುದು,ಪಟಾಕಿ ಸಿಡಿಸುವುದು,ವ್ಯರ್ಥವಾಗಿ ಹಣವನ್ನು ದುಂದುವೆಚ್ಚ ಮಾಡದೇ ಇಂತಹ ನಾಲ್ಕಾರು ಕಡೆಗಳಲ್ಲಿ ಅಗತ್ಯವಿದ್ದವರಿಗೆ ದಾಸೋಹ,ಅನ್ನದಾನ ಮಾಡಿದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ನನ್ನದಾಗಿದೆ ಎಂದು ಹೇಳಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ವೆಂಕನಗೌಡ ಪಾಟೀಲ ಮಾತನಾಡಿ, ಪ್ರತಿ ಗುರುವಾರದ ದಿನ ಲಯನ್ಸ್ ಕ್ಲಬ್ ದಾನಿಗಳನ್ನು ಸಂಪರ್ಕಿಸಿ ಸಾರ್ವಜನಿಕರಿಗೆ,ರೋಗಿಗಳಿಗೆ,ಬಡವರಿಗೆ ಅನ್ನಸಂತರ್ಪನೆ ಸೇವೆ ಕೈಗೊಳ್ಳುತ್ತಿದೆ.ಸಾಮಾಜಿಕ ಸೇವೆಯಲ್ಲಿ ಸಕ್ರಿಯರಾಗಿರುವ ಕಾಶೀಬಾಯಿ ರಾಂಪೂರ ಅವರನ್ನು ಸಂಪರ್ಕ ಮಾಡಿದಾಗ ತಮ್ಮ ಜನ್ಮದಿನವನ್ನು ಆಸ್ಪತ್ರೆಯಲ್ಲಿಯೇ ಆಚರಿಸಿಕೊಳ್ಳುವುದಾಗಿ ತಿಳಿಸಿ ಅನ್ನದಾಸೋಹಕ್ಕೆ ಸಹಕಾರ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಎಂ.ಜಿ.ಎಫ್ ಲಯನ್ಸ್ ಸದಸ್ಯ ರಾವಸಾಹೇಬ ದೇಸಾಯಿ,ಶರಣಯ್ಯ ಹಿರೇಮಠ,ಸಂಜಯಕುಮಾರ ಓಸ್ವಾಲ್, ಮಹೇಂದ್ರ ಓಸ್ವಾಲ,ರಾಜು ಹುನಗುಂದ,ಸುವರ್ಣಾ ಕತ್ತಿ,ಶಿವಯೋಗೆಪ್ಪ ರಾಂಪೂರ,ರಾಜಶೇಖರ ಮ್ಯಾಗೇರಿ, ಅಶೋಕ ಚಿನಿವಾರ , ಶೇಖರಗೌಡ ಬಿರಾದಾರ ಮೊದಲಾದವರು ಇದ್ದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ