ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಜನ್ಮದಿನ,ಮದುವೆ ವಾರ್ಷಿಕೋತ್ಸವ ಹಾಗೂ ಇನ್ನೀತರ ವಯಕ್ತಿಕ ಶುಭ ಸಂದರ್ಭಗಳಲ್ಲಿ ದುಂದುವೆಚ್ಚ ಮಾಡದೇ ನಾಲ್ಕು ಜನ ಹಸಿದವರಿಗೆ ಅನ್ನದಾನ ಮಾಡಿದರೆ ಅವರಿಗೆ ಹೊಟ್ಟೆ ತುಂಬಿಸಿದ ಪುಣ್ಯ ನಮಗೆ ದೊರಕುತ್ತದೆ ಎಂದು ಬಿಜೆಪಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಕಾಶೀಬಾಯಿ ಎಸ್.ರಾಂಪೂರ ಹೇಳಿದರು.

ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಗುರುವಾರ ಲಯನ್ಸ್ ಕ್ಲಬ್ ಸಹಯೋಗದಲ್ಲಿ ತಮ್ಮ ಜನ್ಮದಿನದ ನಿಮಿತ್ಯ ಸರ್ಕಾರಿ ಆಸ್ಪತ್ರೆಗೆ ಬಂದ ರೋಗಿಗಳು, ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕೈಗೊಂಡು ಅವರು ಮಾತನಾಡಿರು.ಹಬ್ಬ ಹಾಗೂ ವಿಶೇಷ ದಿನಗಳಂದು ಕೇಕ್ ಕತ್ತರಿಸುವುದು,ಪಟಾಕಿ ಸಿಡಿಸುವುದು,ವ್ಯರ್ಥವಾಗಿ ಹಣವನ್ನು ದುಂದುವೆಚ್ಚ ಮಾಡದೇ ಇಂತಹ ನಾಲ್ಕಾರು ಕಡೆಗಳಲ್ಲಿ ಅಗತ್ಯವಿದ್ದವರಿಗೆ ದಾಸೋಹ,ಅನ್ನದಾನ ಮಾಡಿದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ನನ್ನದಾಗಿದೆ ಎಂದು ಹೇಳಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ವೆಂಕನಗೌಡ ಪಾಟೀಲ ಮಾತನಾಡಿ, ಪ್ರತಿ ಗುರುವಾರದ ದಿನ ಲಯನ್ಸ್ ಕ್ಲಬ್ ದಾನಿಗಳನ್ನು ಸಂಪರ್ಕಿಸಿ ಸಾರ್ವಜನಿಕರಿಗೆ,ರೋಗಿಗಳಿಗೆ,ಬಡವರಿಗೆ ಅನ್ನಸಂತರ್ಪನೆ ಸೇವೆ ಕೈಗೊಳ್ಳುತ್ತಿದೆ.ಸಾಮಾಜಿಕ ಸೇವೆಯಲ್ಲಿ ಸಕ್ರಿಯರಾಗಿರುವ ಕಾಶೀಬಾಯಿ ರಾಂಪೂರ ಅವರನ್ನು ಸಂಪರ್ಕ ಮಾಡಿದಾಗ ತಮ್ಮ ಜನ್ಮದಿನವನ್ನು ಆಸ್ಪತ್ರೆಯಲ್ಲಿಯೇ ಆಚರಿಸಿಕೊಳ್ಳುವುದಾಗಿ ತಿಳಿಸಿ ಅನ್ನದಾಸೋಹಕ್ಕೆ ಸಹಕಾರ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಎಂ.ಜಿ.ಎಫ್ ಲಯನ್ಸ್ ಸದಸ್ಯ ರಾವಸಾಹೇಬ ದೇಸಾಯಿ,ಶರಣಯ್ಯ ಹಿರೇಮಠ,ಸಂಜಯಕುಮಾರ ಓಸ್ವಾಲ್, ಮಹೇಂದ್ರ ಓಸ್ವಾಲ,ರಾಜು ಹುನಗುಂದ,ಸುವರ್ಣಾ ಕತ್ತಿ,ಶಿವಯೋಗೆಪ್ಪ ರಾಂಪೂರ,ರಾಜಶೇಖರ ಮ್ಯಾಗೇರಿ, ಅಶೋಕ ಚಿನಿವಾರ , ಶೇಖರಗೌಡ ಬಿರಾದಾರ ಮೊದಲಾದವರು ಇದ್ದರು.

Latest News

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ