Doubts surround death: Hescom section officer Areshankar's dead body found hanging

ಸಾವಿನ ಸುತ್ತ ಅನುಮಾನದ ಹುತ್ತ: ಹೆಸ್ಕಾಂ ಸೆಕ್ಷನ್ ಅಧಿಕಾರಿ ಆರೇಶಂಕರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸಾವಿನ ಸುತ್ತ ಅನುಮಾನದ ಹುತ್ತ: ಹೆಸ್ಕಾಂ ಸೆಕ್ಷನ್ ಅಧಿಕಾರಿ ಆರೇಶಂಕರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಮುದ್ದೇಬಿಹಾಳ : ಹೆಸ್ಕಾಂನ ಗ್ರಾಮೀಣ ವಲಯದ ಸೆಕ್ಷನ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ತಾಲ್ಲೂಕಿನ ಕುಂಟೋಜಿ ಗ್ರಾಮದ ಶಿವಪ್ಪ ಎಂ. ಆರೇಶಂಕರ ಅವರ ಶವ ಬುಧವಾರ ಕುಂಟೋಜಿ ಸೀಮೆಯಲ್ಲಿ ಬರುವ ಬಸವ ಇಂಟರ್‌ನ್ಯಾಶನಲ್ ಸ್ಕೂಲ್ ಹಿಂಭಾಗದ ಜಮೀನೊಂದರ ಗಿಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಕಳೆದ ನಾಲ್ಕು ವರ್ಷಗಳಿಂದ ಹೆಸ್ಕಾಂನಲ್ಲಿ ಗ್ರಾಮೀಣ ಭಾಗದ ಸೆಕ್ಷನ್ ಅಧಿಕಾರಿಯಾಗಿ ಒಳ್ಳೆಯ ಹೆಸರು ಮಾಡಿದ್ದ ಆರೇಶಂಕರ ಸಾವನ್ನಪ್ಪಿದ್ದ ಸುದ್ದಿ ತಿಳಿದ ಅವರ ಸ್ನೇಹಿತರು, ಬಂಧುಗಳು ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿದ್ದು ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಏತನ್ಮಧ್ಯೆ ಶಿವಪ್ಪ ಸಾವನ್ನಪ್ಪುವ ಮುನ್ನ ತನ್ನ ಸ್ನೇಹಿತರಿಗೆ, ಸಹೋದರರಿಗೆ ವಾಟ್ಸಾಪ್‌ನಲ್ಲಿ ಕೆಲವು ಸಂದೇಶ ಹಾಕಿದ್ದ ಎನ್ನಲಾಗಿದ್ದು ಪೊಲೀಸ್ ತನಿಖೆಯಿಂದಲೇ ಸಾವಿಗೆ ನೈಜ ಕಾರಣ ತಿಳಿದು ಬರಬೇಕಿದೆ.

ಶಿವಪ್ಪ ಆರೇಶಂಕರ ಸಾಮಾಜಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದರು. ಗ್ರಾಮದ ಯಾವುದೇ ಜಾತ್ರೆ, ಉತ್ಸವಗಳು ಬಂದರೆ ಅಲ್ಲಿ ತಮ್ಮ ಕೈಲಾದಷ್ಟು ಮಟ್ಟಿಗೆ ದೇಣಿಗೆಯನ್ನು ಕೊಟ್ಟು ಜನರ ಪ್ರೀತಿ ಸಂಪಾದಿಸಿದ್ದರು. ಇದೀಗ ಅವರ ಸಾವು ಅವರ ಸ್ನೇಹಿತರು, ಆಪ್ತರಿಗೆ ದಿಗ್ಭ್ರಮೆ ಮೂಡಿಸಿದೆ.ಆರೇಶಂಕರ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.

Latest News

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ

ಪರಿಸರ ದಿನಾಚರಣೆ ಅಂಗವಾಗಿ ಮಗುವಿಗೊಂದು ಮರ ಕಾರ್ಯಕ್ರಮ

ಪರಿಸರ ದಿನಾಚರಣೆ ಅಂಗವಾಗಿ ಮಗುವಿಗೊಂದು ಮರ ಕಾರ್ಯಕ್ರಮ

ಕುಳಗೇರಿ ಕ್ರಾಸ್: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೋಮನಕೊಪ್ಪದಲ್ಲಿ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಸಂಭ್ರಮಾಚರಣೆ ವೇಳೆ ಪೊಲೀಸರಿಂದ ಲಾಠಿ ಪ್ರಹಾರ ಮುದ್ದೇಬಿಹಾಳ : ಬೆಂಗಳೂರಿನ ರಾಯಲ್ ಚಾಲೆಂರ‍್ಸ್ ತಂಡ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಪಂಚಾಯತಿ ಕ್ವಾರ್ಟರ್ಸ್ನಲ್ಲಿರುವ ಗ್ರಾಮದೇವತೆ ವೇದಿಕೆಯಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತು. ಸಂಘಟಕರ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆಂದು ಹಾಕಿದ್ದ ಎಲ್‌ಇಡಿ ಪರದೆಗಳ ಸಂಪರ್ಕ ಕಡಿತಗೊಂಡಿತು. ಅಲ್ಲದೇ ಕೆಲವರು ಜನರೇಟರ್ ಮೇಲೆ ಹತ್ತಿ ಕೂತಿದ್ದರಿಂದ ಕಾರ್ಯಕ್ರಮವನ್ನು ಎರಡು ಬಾರಿ ಮುಂದೂಡಿ ಮತ್ತೆ ಆರಂಭಿಸಲಾಯಿತು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಸಮೀತಿಯ ಪ್ರಮುಖರಾದ ನೇತಾಜಿ ನಲವಡೆ, ಸಂಗಮೇಶ ನಾಲತವಾಡ,

ಪ್ರತಿಭಾನ್ವೇಷಣೆ, ಸಾಧಕರ ಸನ್ಮಾನ: ಮಕ್ಕಳ ಕೈಯ್ಯಲ್ಲಿ ಮೊಬೈಲ್ ಬದಲು ಪುಸ್ತಕ ಕೊಡಿ

ಪ್ರತಿಭಾನ್ವೇಷಣೆ, ಸಾಧಕರ ಸನ್ಮಾನ: ಮಕ್ಕಳ ಕೈಯ್ಯಲ್ಲಿ ಮೊಬೈಲ್ ಬದಲು ಪುಸ್ತಕ ಕೊಡಿ

ಮುದ್ದೇಬಿಹಾಳ : ಮಕ್ಕಳ ಕೈಯ್ಯಲ್ಲಿ ಮೊಬೈಲ್ ಕೊಡದೇ ಪುಸ್ತಕ ಕೊಟ್ಟರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಲೊಟಗೇರಿಯ ಗುರುಮೂರ್ತಿ ಕಣಕಾಲಮಠ ಸ್ವಾಮೀಜಿ ಹೇಳಿದರು. ಪಟ್ಟಣದ ಎಸ್.ಎಸ್.ಶಿವಾಚಾರ್ಯ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಚಾಲೆಂಜ್ ನವೋದಯ ಕೋಚಿಂಗ ಕ್ಲಾಸಿಸ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ಪರೀಕ್ಷೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳಿಗೆ ಶಾಲೆಗೆ ಹೆಸರು ನೋಂದಣಿ ಮಾಡಿಬಿಟ್ಟರೆ ಆಯಿತು ಎಂಬ ಸ್ವಭಾವದಲ್ಲಿ