ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ ಎಂದು ಕೃಷಿ ಇಲಾಖೆಯ ಅಂಕಿಸoಖ್ಯೆಗಳು ಹೇಳುತ್ತಿದ್ದರೂ ಈ ಭಾಗದಿಂದ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸುವ ಕೆಲಸ ಆಗಿಲ್ಲ ಎಂದು ಆರೋಪಿಸಿದರು.
ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರು ಬರೀ ನಾಟಕೀಯತೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ.ಎಂದಿಗೂ 10 ಗಂಟೆ ನಂತರ ಎದ್ದೆಳದ ಮನುಷ್ಯ ಇಂದು 9 ಗಂಟೆಗೆ ಟಾಸ್ಕ್ಫರ್ಸ್ ಸಭೆ ಎಂಬ ಮತ್ತೊಂದು ನಾಟಕ ಮಾಡುತ್ತಿದ್ದಾರೆ.ಜನರ ಕಣ್ಣಿಗೆ ಮಂಕುಬೂದಿ ಎರಚುವುದನ್ನು ಕೈ ಬಿಡಿ ಎಂದು ಹೇಳಿದರು.ಕಳೆದ ಮೂರು ತಿಂಗಳಿನಿoದ ಬರಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸರ್ವೆ ನಡೆಸಿ ವರದಿ ತಯಾರಿಸುವ ಕೆಲಸ ಮಾಡಿಲ್ಲ.ಮಾಡಿದ್ದರೆ ಅದನ್ನು ಜನರ ಹಾಗೂ ಮಾಧ್ಯಮದವರ ಮುಂದೆ ಬಹಿರಂಗಪಡಿಸಿ ಎಂದು ನಡಹಳ್ಳಿ ಹೇಳಿದರು. ಯುವ ಉದ್ಯಮಿ ಭರತಗೌಡ ಪಾಟೀಲ ನಡಹಳ್ಳಿ, ವಕೀಲ ಎಂ.ಆರ್.ಪಾಟೀಲ ಸೇರಿದಂತೆ ಹಲವು ಮುಖಂಡರು ಬರ ಪರಿಸ್ಥಿತಿ ಕುರಿತು ಮಾತನಾಡಿದರು.ಯರಝರಿ ಭಾಗದ ರೈತರು,ಬಿಜೆಪಿ ಕಾರ್ಯಕರ್ತರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.
ಯುವ ವಕೀಲರ ಬೆಂಬಲ: ತಾಲ್ಲೂಕು ಬರಪೀಡಿತ ಪ್ರದೇಶ ಎಂದು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ನಡೆದಿರುವ ಮೂರನೇ ದಿನದ ಹೋರಾಟದಲ್ಲಿ ತಾಲ್ಲೂಕಿನ ಕೆಲವು ಯುವ ವಕೀಲರು ಧರಣಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.







