ಸಗಣಿ ಎರಚಿಕೊಂಡು ಓಕುಳಿ ಆಟ! ಗದಗನಲ್ಲೊಂದು ವಿಶಿಷ್ಟ ಆಚರಣೆ (ವಿಡಿಯೋ ನೋಡಿ)

ಸಗಣಿ ಎರಚಿಕೊಂಡು ಓಕುಳಿ ಆಟ! ಗದಗನಲ್ಲೊಂದು ವಿಶಿಷ್ಟ ಆಚರಣೆ (ವಿಡಿಯೋ ನೋಡಿ)

ಗದಗ : ಓಕುಳಿ ಆಟ ಅಂದ್ರೆ ತಲೆಯಲ್ಲಿ ಬರೋದು ಬಣ್ಣದೋಕುಳಿ. ರಾಜ ಮಹರಾಜರ ಕಾಲದಲ್ಲಿ ಹಾಲಿನ ಓಕುಳಿಯೂ ನಡೆಯುತ್ತಿತ್ತು ಅನ್ನೋದನ್ನ ಕೇಳಿರ್ತೇವೆ. ಆದ್ರೆ, ಗದಗನಲ್ಲಿ ಸಗಣಿಯ ಓಕುಳಿ (Dung spitting game) ನಡೆಯುತ್ತೆ ಅನ್ನೋದು ವಿಶೇಷವಾಗಿದೆ.

Join Our Telegram: https://t.me/dcgkannada

ಗದಗ ನಗರದ ಗಂಗಾಪುರ ಪೇಟೆಯಲ್ಲಿ ಶತಮಾನದಿಂದ ಸಗಣಿ ಆಟದ ವಿಶಿಷ್ಟ ಆಚರಣೆ ನಡೆದುಕೊಂಡು ಬಂದಿದೆ. ನಾಗರ ಪಂಚಮಿ ಹಬ್ಬದಂದು ಹುತ್ತಕ್ಕೆ ಹಾಲೆರುದು ನಾಗದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಜನರು. ಮಾರನೇ ದಿನ ಸಗಣಿ ಎರಚಾಟದ ವಿಶಿಷ್ಠ ಆಚರಣೆ ನಡೆಸ್ತಾರೆ. ವಿಶೇಷ ಓಕುಳಿ ಆಟಕ್ಕೆ ತಿಂಗಳಿಂದ ಪೂರ್ವಭಾವಿಯಾಗಿ ಸಗಣಿ ಸಂಗ್ರಹಣೆ ಕೆಲಸ ನಡೆಯುತ್ತೆ. ದನ ಕರುಗಳಿರುವ ಮನೆಗಳಿಗೆ ತೆರಳುವ ಯುವಕರು ಸಗಣಿ ಸಂಗ್ರಹಿಸುತ್ತಾರೆ.

ಇದನ್ನೂ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ಪಂಚಮಿ ಮಾರನೇ ದಿನ ನಡೆಯೋ ಓಕುಳಿಯಲ್ಲಿ ಬಡಾವಣೆ ಜನ ಉತ್ಸಾಹದಿಂದ ಆಚರಿಸ್ತಾರೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಸಗಣಿಯ 20 ಗುಂಪುಗಳನ್ನು ಹಾಕಿ ಅವುಗಳ ಮೇಲೆ ವಿವಿಧ ಬಣ್ಣಗಳನ್ನು ಹಾಕಲಾಗುತ್ತೆ. 12 ರಿಂದ 16 ಜನ ಯುವಕರು ಎರಡು ತಂಡ ರಚಿಸಿ ಹತ್ತಿರದ ದೈವದವರ ತೋಟದಲ್ಲಿ ಸಗಣೆ ಆಟಕ್ಕೆ ಸಿದ್ಧತೆ ನಡೆಸ್ತಾರೆ. ಚಿತ್ರ ವಿಚಿತ್ರ ಬಟ್ಟೆ ಹಾಕಿಕೊಂಡು ಬದನೆಕಾಯಿ, ಈರುಳ್ಳಿ, ಹಿರೇಕಾಯಿ, ಟೊಮೆಟೊ, ಸೇರಿದಂತೆ ವಿವಿಧ ತರಕಾರಿಗಳಿಂದ ಸಿದ್ಧವಾದ ಹಾರ ಹಾಕಿಕೊಳ್ಳುವ ಯುವಕರು, ತಂಡ ರಚಿಸಿಕೊಂಡು ಪರಸ್ಪರ ಸಗಣಿ ಎರಚಿ ಖುಷಿ ಪಡ್ತಾರೆ.

ರೈತ ಸಮುದಾಯ ಸಗಣಿಗೆ (Dung spitting game) ಬಂಗಾರದ ಸ್ಥಾನಮಾನ ನೀಡುತ್ತೆ. ಪವಿತ್ರತೆಯ ಸಂಕೇತವಾದ ಸಗಣಿಯನ್ನ ಕೀಳರಮೆಯಿಂದ ಕಾಣದೆ ಬಣ್ಣದ ರೀತಿ ಬಳಸುವುದೇ ಈ ಓಕುಳಿ ವಿಶೇಷತೆಯಾಗಿದೆ. ಸಗಣಿ ಮೈಮೇಲೆ ಹಾಕಿಕೊಳ್ಳುವುದರಿಂದ ಚರ್ಮರೋಗ ವಾಸಿಯಾಗುತ್ತದೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.

ನೂರಾರು ವರ್ಷದಿಂದ ನಡೆದುಕೊಂಡು ಬಂದಿರೋ ವಿಶೇಷ ಆಚರಣೆ ಇಂದಿಗೂ ಮುಂದುವರೆದಿದೆ. ಸಾಂಸ್ಕೃತಿಕ ಸಂಕೇತದಿಂತಿರುವ ಸಗಣಿ ಓಕುಳಿ ವರ್ಷದಿಂದ ವರ್ಷಕ್ಕೆ ತನ್ನ ಆಕರ್ಷಣೆ ಹೆಚ್ಚಿಸಿಕೊಳ್ಳುತ್ತಿದೆ. ಗೋ ಮಾತೆಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಹಾಗೂ ಪೂರ್ವಿಕರ ಸಂಸ್ಕೃತಿ ಮುಂದುವರೆಸಿಕೊಂಡು ಹೋಗ್ತಿರೋದು ನಿಜಕ್ಕೂ ವಿಶೇಷವಾಗಿದೆ.

Latest News

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ಮುದ್ದೇಬಿಹಾಳ : ತಮ್ಮೂರಿಗೆ ಹೋಗುವ ಬಸ್ ತಪ್ಪಿಸಿಕೊಂಡಿದ್ದ ಕನ್ನಡ ಅಸ್ಪಷ್ಟವಾಗಿ ಮಾತನಾಡುವ ತಾಯಿ ಹಾಗೂ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ನಾಲತವಾಡ : ನವೆಂಬರ್ 1ರಂದು ಎ.ಎಸ್.ಎನ್. ಕಾನೂನು ಮಾಹಾವಿದ್ಯಾಲಯ ನಾಲತವಾಡದಲ್ಲಿ 70ನೇ ಕನ್ನಡ ರಾಜ್ಯೋತ್ಸವ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ,

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮ ಪಂಚಾಯಿತಿ ಚುನಾವಣೆಗಳು ಸ್ಥಳೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದು ಇದರಲ್ಲಿಪಕ್ಷದ ಪಾತ್ರ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ. ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ ಎಸ್.ಮೇಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ.ಸೀತಿಮನಿ ಎರಡೂ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಆರ್.ಎನ್.ಆಳೂರ ಅವಿರೋಧ