ಸಗಣಿ ಎರಚಿಕೊಂಡು ಓಕುಳಿ ಆಟ! ಗದಗನಲ್ಲೊಂದು ವಿಶಿಷ್ಟ ಆಚರಣೆ (ವಿಡಿಯೋ ನೋಡಿ)

ಸಗಣಿ ಎರಚಿಕೊಂಡು ಓಕುಳಿ ಆಟ! ಗದಗನಲ್ಲೊಂದು ವಿಶಿಷ್ಟ ಆಚರಣೆ (ವಿಡಿಯೋ ನೋಡಿ)

ಗದಗ : ಓಕುಳಿ ಆಟ ಅಂದ್ರೆ ತಲೆಯಲ್ಲಿ ಬರೋದು ಬಣ್ಣದೋಕುಳಿ. ರಾಜ ಮಹರಾಜರ ಕಾಲದಲ್ಲಿ ಹಾಲಿನ ಓಕುಳಿಯೂ ನಡೆಯುತ್ತಿತ್ತು ಅನ್ನೋದನ್ನ ಕೇಳಿರ್ತೇವೆ. ಆದ್ರೆ, ಗದಗನಲ್ಲಿ ಸಗಣಿಯ ಓಕುಳಿ (Dung spitting game) ನಡೆಯುತ್ತೆ ಅನ್ನೋದು ವಿಶೇಷವಾಗಿದೆ.

Join Our Telegram: https://t.me/dcgkannada

ಗದಗ ನಗರದ ಗಂಗಾಪುರ ಪೇಟೆಯಲ್ಲಿ ಶತಮಾನದಿಂದ ಸಗಣಿ ಆಟದ ವಿಶಿಷ್ಟ ಆಚರಣೆ ನಡೆದುಕೊಂಡು ಬಂದಿದೆ. ನಾಗರ ಪಂಚಮಿ ಹಬ್ಬದಂದು ಹುತ್ತಕ್ಕೆ ಹಾಲೆರುದು ನಾಗದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಜನರು. ಮಾರನೇ ದಿನ ಸಗಣಿ ಎರಚಾಟದ ವಿಶಿಷ್ಠ ಆಚರಣೆ ನಡೆಸ್ತಾರೆ. ವಿಶೇಷ ಓಕುಳಿ ಆಟಕ್ಕೆ ತಿಂಗಳಿಂದ ಪೂರ್ವಭಾವಿಯಾಗಿ ಸಗಣಿ ಸಂಗ್ರಹಣೆ ಕೆಲಸ ನಡೆಯುತ್ತೆ. ದನ ಕರುಗಳಿರುವ ಮನೆಗಳಿಗೆ ತೆರಳುವ ಯುವಕರು ಸಗಣಿ ಸಂಗ್ರಹಿಸುತ್ತಾರೆ.

ಇದನ್ನೂ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ಪಂಚಮಿ ಮಾರನೇ ದಿನ ನಡೆಯೋ ಓಕುಳಿಯಲ್ಲಿ ಬಡಾವಣೆ ಜನ ಉತ್ಸಾಹದಿಂದ ಆಚರಿಸ್ತಾರೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಸಗಣಿಯ 20 ಗುಂಪುಗಳನ್ನು ಹಾಕಿ ಅವುಗಳ ಮೇಲೆ ವಿವಿಧ ಬಣ್ಣಗಳನ್ನು ಹಾಕಲಾಗುತ್ತೆ. 12 ರಿಂದ 16 ಜನ ಯುವಕರು ಎರಡು ತಂಡ ರಚಿಸಿ ಹತ್ತಿರದ ದೈವದವರ ತೋಟದಲ್ಲಿ ಸಗಣೆ ಆಟಕ್ಕೆ ಸಿದ್ಧತೆ ನಡೆಸ್ತಾರೆ. ಚಿತ್ರ ವಿಚಿತ್ರ ಬಟ್ಟೆ ಹಾಕಿಕೊಂಡು ಬದನೆಕಾಯಿ, ಈರುಳ್ಳಿ, ಹಿರೇಕಾಯಿ, ಟೊಮೆಟೊ, ಸೇರಿದಂತೆ ವಿವಿಧ ತರಕಾರಿಗಳಿಂದ ಸಿದ್ಧವಾದ ಹಾರ ಹಾಕಿಕೊಳ್ಳುವ ಯುವಕರು, ತಂಡ ರಚಿಸಿಕೊಂಡು ಪರಸ್ಪರ ಸಗಣಿ ಎರಚಿ ಖುಷಿ ಪಡ್ತಾರೆ.

ರೈತ ಸಮುದಾಯ ಸಗಣಿಗೆ (Dung spitting game) ಬಂಗಾರದ ಸ್ಥಾನಮಾನ ನೀಡುತ್ತೆ. ಪವಿತ್ರತೆಯ ಸಂಕೇತವಾದ ಸಗಣಿಯನ್ನ ಕೀಳರಮೆಯಿಂದ ಕಾಣದೆ ಬಣ್ಣದ ರೀತಿ ಬಳಸುವುದೇ ಈ ಓಕುಳಿ ವಿಶೇಷತೆಯಾಗಿದೆ. ಸಗಣಿ ಮೈಮೇಲೆ ಹಾಕಿಕೊಳ್ಳುವುದರಿಂದ ಚರ್ಮರೋಗ ವಾಸಿಯಾಗುತ್ತದೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.

ನೂರಾರು ವರ್ಷದಿಂದ ನಡೆದುಕೊಂಡು ಬಂದಿರೋ ವಿಶೇಷ ಆಚರಣೆ ಇಂದಿಗೂ ಮುಂದುವರೆದಿದೆ. ಸಾಂಸ್ಕೃತಿಕ ಸಂಕೇತದಿಂತಿರುವ ಸಗಣಿ ಓಕುಳಿ ವರ್ಷದಿಂದ ವರ್ಷಕ್ಕೆ ತನ್ನ ಆಕರ್ಷಣೆ ಹೆಚ್ಚಿಸಿಕೊಳ್ಳುತ್ತಿದೆ. ಗೋ ಮಾತೆಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಹಾಗೂ ಪೂರ್ವಿಕರ ಸಂಸ್ಕೃತಿ ಮುಂದುವರೆಸಿಕೊಂಡು ಹೋಗ್ತಿರೋದು ನಿಜಕ್ಕೂ ವಿಶೇಷವಾಗಿದೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ