ಸಗಣಿ ಎರಚಿಕೊಂಡು ಓಕುಳಿ ಆಟ! ಗದಗನಲ್ಲೊಂದು ವಿಶಿಷ್ಟ ಆಚರಣೆ (ವಿಡಿಯೋ ನೋಡಿ)

ಸಗಣಿ ಎರಚಿಕೊಂಡು ಓಕುಳಿ ಆಟ! ಗದಗನಲ್ಲೊಂದು ವಿಶಿಷ್ಟ ಆಚರಣೆ (ವಿಡಿಯೋ ನೋಡಿ)

ಗದಗ : ಓಕುಳಿ ಆಟ ಅಂದ್ರೆ ತಲೆಯಲ್ಲಿ ಬರೋದು ಬಣ್ಣದೋಕುಳಿ. ರಾಜ ಮಹರಾಜರ ಕಾಲದಲ್ಲಿ ಹಾಲಿನ ಓಕುಳಿಯೂ ನಡೆಯುತ್ತಿತ್ತು ಅನ್ನೋದನ್ನ ಕೇಳಿರ್ತೇವೆ. ಆದ್ರೆ, ಗದಗನಲ್ಲಿ ಸಗಣಿಯ ಓಕುಳಿ (Dung spitting game) ನಡೆಯುತ್ತೆ ಅನ್ನೋದು ವಿಶೇಷವಾಗಿದೆ.

Join Our Telegram: https://t.me/dcgkannada

ಗದಗ ನಗರದ ಗಂಗಾಪುರ ಪೇಟೆಯಲ್ಲಿ ಶತಮಾನದಿಂದ ಸಗಣಿ ಆಟದ ವಿಶಿಷ್ಟ ಆಚರಣೆ ನಡೆದುಕೊಂಡು ಬಂದಿದೆ. ನಾಗರ ಪಂಚಮಿ ಹಬ್ಬದಂದು ಹುತ್ತಕ್ಕೆ ಹಾಲೆರುದು ನಾಗದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಜನರು. ಮಾರನೇ ದಿನ ಸಗಣಿ ಎರಚಾಟದ ವಿಶಿಷ್ಠ ಆಚರಣೆ ನಡೆಸ್ತಾರೆ. ವಿಶೇಷ ಓಕುಳಿ ಆಟಕ್ಕೆ ತಿಂಗಳಿಂದ ಪೂರ್ವಭಾವಿಯಾಗಿ ಸಗಣಿ ಸಂಗ್ರಹಣೆ ಕೆಲಸ ನಡೆಯುತ್ತೆ. ದನ ಕರುಗಳಿರುವ ಮನೆಗಳಿಗೆ ತೆರಳುವ ಯುವಕರು ಸಗಣಿ ಸಂಗ್ರಹಿಸುತ್ತಾರೆ.

ಇದನ್ನೂ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ಪಂಚಮಿ ಮಾರನೇ ದಿನ ನಡೆಯೋ ಓಕುಳಿಯಲ್ಲಿ ಬಡಾವಣೆ ಜನ ಉತ್ಸಾಹದಿಂದ ಆಚರಿಸ್ತಾರೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಸಗಣಿಯ 20 ಗುಂಪುಗಳನ್ನು ಹಾಕಿ ಅವುಗಳ ಮೇಲೆ ವಿವಿಧ ಬಣ್ಣಗಳನ್ನು ಹಾಕಲಾಗುತ್ತೆ. 12 ರಿಂದ 16 ಜನ ಯುವಕರು ಎರಡು ತಂಡ ರಚಿಸಿ ಹತ್ತಿರದ ದೈವದವರ ತೋಟದಲ್ಲಿ ಸಗಣೆ ಆಟಕ್ಕೆ ಸಿದ್ಧತೆ ನಡೆಸ್ತಾರೆ. ಚಿತ್ರ ವಿಚಿತ್ರ ಬಟ್ಟೆ ಹಾಕಿಕೊಂಡು ಬದನೆಕಾಯಿ, ಈರುಳ್ಳಿ, ಹಿರೇಕಾಯಿ, ಟೊಮೆಟೊ, ಸೇರಿದಂತೆ ವಿವಿಧ ತರಕಾರಿಗಳಿಂದ ಸಿದ್ಧವಾದ ಹಾರ ಹಾಕಿಕೊಳ್ಳುವ ಯುವಕರು, ತಂಡ ರಚಿಸಿಕೊಂಡು ಪರಸ್ಪರ ಸಗಣಿ ಎರಚಿ ಖುಷಿ ಪಡ್ತಾರೆ.

ರೈತ ಸಮುದಾಯ ಸಗಣಿಗೆ (Dung spitting game) ಬಂಗಾರದ ಸ್ಥಾನಮಾನ ನೀಡುತ್ತೆ. ಪವಿತ್ರತೆಯ ಸಂಕೇತವಾದ ಸಗಣಿಯನ್ನ ಕೀಳರಮೆಯಿಂದ ಕಾಣದೆ ಬಣ್ಣದ ರೀತಿ ಬಳಸುವುದೇ ಈ ಓಕುಳಿ ವಿಶೇಷತೆಯಾಗಿದೆ. ಸಗಣಿ ಮೈಮೇಲೆ ಹಾಕಿಕೊಳ್ಳುವುದರಿಂದ ಚರ್ಮರೋಗ ವಾಸಿಯಾಗುತ್ತದೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.

ನೂರಾರು ವರ್ಷದಿಂದ ನಡೆದುಕೊಂಡು ಬಂದಿರೋ ವಿಶೇಷ ಆಚರಣೆ ಇಂದಿಗೂ ಮುಂದುವರೆದಿದೆ. ಸಾಂಸ್ಕೃತಿಕ ಸಂಕೇತದಿಂತಿರುವ ಸಗಣಿ ಓಕುಳಿ ವರ್ಷದಿಂದ ವರ್ಷಕ್ಕೆ ತನ್ನ ಆಕರ್ಷಣೆ ಹೆಚ್ಚಿಸಿಕೊಳ್ಳುತ್ತಿದೆ. ಗೋ ಮಾತೆಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಹಾಗೂ ಪೂರ್ವಿಕರ ಸಂಸ್ಕೃತಿ ಮುಂದುವರೆಸಿಕೊಂಡು ಹೋಗ್ತಿರೋದು ನಿಜಕ್ಕೂ ವಿಶೇಷವಾಗಿದೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು