ಸಗಣಿ ಎರಚಿಕೊಂಡು ಓಕುಳಿ ಆಟ! ಗದಗನಲ್ಲೊಂದು ವಿಶಿಷ್ಟ ಆಚರಣೆ (ವಿಡಿಯೋ ನೋಡಿ)

ಸಗಣಿ ಎರಚಿಕೊಂಡು ಓಕುಳಿ ಆಟ! ಗದಗನಲ್ಲೊಂದು ವಿಶಿಷ್ಟ ಆಚರಣೆ (ವಿಡಿಯೋ ನೋಡಿ)

ಗದಗ : ಓಕುಳಿ ಆಟ ಅಂದ್ರೆ ತಲೆಯಲ್ಲಿ ಬರೋದು ಬಣ್ಣದೋಕುಳಿ. ರಾಜ ಮಹರಾಜರ ಕಾಲದಲ್ಲಿ ಹಾಲಿನ ಓಕುಳಿಯೂ ನಡೆಯುತ್ತಿತ್ತು ಅನ್ನೋದನ್ನ ಕೇಳಿರ್ತೇವೆ. ಆದ್ರೆ, ಗದಗನಲ್ಲಿ ಸಗಣಿಯ ಓಕುಳಿ (Dung spitting game) ನಡೆಯುತ್ತೆ ಅನ್ನೋದು ವಿಶೇಷವಾಗಿದೆ.

Join Our Telegram: https://t.me/dcgkannada

ಗದಗ ನಗರದ ಗಂಗಾಪುರ ಪೇಟೆಯಲ್ಲಿ ಶತಮಾನದಿಂದ ಸಗಣಿ ಆಟದ ವಿಶಿಷ್ಟ ಆಚರಣೆ ನಡೆದುಕೊಂಡು ಬಂದಿದೆ. ನಾಗರ ಪಂಚಮಿ ಹಬ್ಬದಂದು ಹುತ್ತಕ್ಕೆ ಹಾಲೆರುದು ನಾಗದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಜನರು. ಮಾರನೇ ದಿನ ಸಗಣಿ ಎರಚಾಟದ ವಿಶಿಷ್ಠ ಆಚರಣೆ ನಡೆಸ್ತಾರೆ. ವಿಶೇಷ ಓಕುಳಿ ಆಟಕ್ಕೆ ತಿಂಗಳಿಂದ ಪೂರ್ವಭಾವಿಯಾಗಿ ಸಗಣಿ ಸಂಗ್ರಹಣೆ ಕೆಲಸ ನಡೆಯುತ್ತೆ. ದನ ಕರುಗಳಿರುವ ಮನೆಗಳಿಗೆ ತೆರಳುವ ಯುವಕರು ಸಗಣಿ ಸಂಗ್ರಹಿಸುತ್ತಾರೆ.

ಇದನ್ನೂ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ಪಂಚಮಿ ಮಾರನೇ ದಿನ ನಡೆಯೋ ಓಕುಳಿಯಲ್ಲಿ ಬಡಾವಣೆ ಜನ ಉತ್ಸಾಹದಿಂದ ಆಚರಿಸ್ತಾರೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಸಗಣಿಯ 20 ಗುಂಪುಗಳನ್ನು ಹಾಕಿ ಅವುಗಳ ಮೇಲೆ ವಿವಿಧ ಬಣ್ಣಗಳನ್ನು ಹಾಕಲಾಗುತ್ತೆ. 12 ರಿಂದ 16 ಜನ ಯುವಕರು ಎರಡು ತಂಡ ರಚಿಸಿ ಹತ್ತಿರದ ದೈವದವರ ತೋಟದಲ್ಲಿ ಸಗಣೆ ಆಟಕ್ಕೆ ಸಿದ್ಧತೆ ನಡೆಸ್ತಾರೆ. ಚಿತ್ರ ವಿಚಿತ್ರ ಬಟ್ಟೆ ಹಾಕಿಕೊಂಡು ಬದನೆಕಾಯಿ, ಈರುಳ್ಳಿ, ಹಿರೇಕಾಯಿ, ಟೊಮೆಟೊ, ಸೇರಿದಂತೆ ವಿವಿಧ ತರಕಾರಿಗಳಿಂದ ಸಿದ್ಧವಾದ ಹಾರ ಹಾಕಿಕೊಳ್ಳುವ ಯುವಕರು, ತಂಡ ರಚಿಸಿಕೊಂಡು ಪರಸ್ಪರ ಸಗಣಿ ಎರಚಿ ಖುಷಿ ಪಡ್ತಾರೆ.

ರೈತ ಸಮುದಾಯ ಸಗಣಿಗೆ (Dung spitting game) ಬಂಗಾರದ ಸ್ಥಾನಮಾನ ನೀಡುತ್ತೆ. ಪವಿತ್ರತೆಯ ಸಂಕೇತವಾದ ಸಗಣಿಯನ್ನ ಕೀಳರಮೆಯಿಂದ ಕಾಣದೆ ಬಣ್ಣದ ರೀತಿ ಬಳಸುವುದೇ ಈ ಓಕುಳಿ ವಿಶೇಷತೆಯಾಗಿದೆ. ಸಗಣಿ ಮೈಮೇಲೆ ಹಾಕಿಕೊಳ್ಳುವುದರಿಂದ ಚರ್ಮರೋಗ ವಾಸಿಯಾಗುತ್ತದೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.

ನೂರಾರು ವರ್ಷದಿಂದ ನಡೆದುಕೊಂಡು ಬಂದಿರೋ ವಿಶೇಷ ಆಚರಣೆ ಇಂದಿಗೂ ಮುಂದುವರೆದಿದೆ. ಸಾಂಸ್ಕೃತಿಕ ಸಂಕೇತದಿಂತಿರುವ ಸಗಣಿ ಓಕುಳಿ ವರ್ಷದಿಂದ ವರ್ಷಕ್ಕೆ ತನ್ನ ಆಕರ್ಷಣೆ ಹೆಚ್ಚಿಸಿಕೊಳ್ಳುತ್ತಿದೆ. ಗೋ ಮಾತೆಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಹಾಗೂ ಪೂರ್ವಿಕರ ಸಂಸ್ಕೃತಿ ಮುಂದುವರೆಸಿಕೊಂಡು ಹೋಗ್ತಿರೋದು ನಿಜಕ್ಕೂ ವಿಶೇಷವಾಗಿದೆ.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್