ಸಗಣಿ ಎರಚಿಕೊಂಡು ಓಕುಳಿ ಆಟ! ಗದಗನಲ್ಲೊಂದು ವಿಶಿಷ್ಟ ಆಚರಣೆ (ವಿಡಿಯೋ ನೋಡಿ)

ಸಗಣಿ ಎರಚಿಕೊಂಡು ಓಕುಳಿ ಆಟ! ಗದಗನಲ್ಲೊಂದು ವಿಶಿಷ್ಟ ಆಚರಣೆ (ವಿಡಿಯೋ ನೋಡಿ)

ಗದಗ : ಓಕುಳಿ ಆಟ ಅಂದ್ರೆ ತಲೆಯಲ್ಲಿ ಬರೋದು ಬಣ್ಣದೋಕುಳಿ. ರಾಜ ಮಹರಾಜರ ಕಾಲದಲ್ಲಿ ಹಾಲಿನ ಓಕುಳಿಯೂ ನಡೆಯುತ್ತಿತ್ತು ಅನ್ನೋದನ್ನ ಕೇಳಿರ್ತೇವೆ. ಆದ್ರೆ, ಗದಗನಲ್ಲಿ ಸಗಣಿಯ ಓಕುಳಿ (Dung spitting game) ನಡೆಯುತ್ತೆ ಅನ್ನೋದು ವಿಶೇಷವಾಗಿದೆ.

Join Our Telegram: https://t.me/dcgkannada

ಗದಗ ನಗರದ ಗಂಗಾಪುರ ಪೇಟೆಯಲ್ಲಿ ಶತಮಾನದಿಂದ ಸಗಣಿ ಆಟದ ವಿಶಿಷ್ಟ ಆಚರಣೆ ನಡೆದುಕೊಂಡು ಬಂದಿದೆ. ನಾಗರ ಪಂಚಮಿ ಹಬ್ಬದಂದು ಹುತ್ತಕ್ಕೆ ಹಾಲೆರುದು ನಾಗದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಜನರು. ಮಾರನೇ ದಿನ ಸಗಣಿ ಎರಚಾಟದ ವಿಶಿಷ್ಠ ಆಚರಣೆ ನಡೆಸ್ತಾರೆ. ವಿಶೇಷ ಓಕುಳಿ ಆಟಕ್ಕೆ ತಿಂಗಳಿಂದ ಪೂರ್ವಭಾವಿಯಾಗಿ ಸಗಣಿ ಸಂಗ್ರಹಣೆ ಕೆಲಸ ನಡೆಯುತ್ತೆ. ದನ ಕರುಗಳಿರುವ ಮನೆಗಳಿಗೆ ತೆರಳುವ ಯುವಕರು ಸಗಣಿ ಸಂಗ್ರಹಿಸುತ್ತಾರೆ.

ಇದನ್ನೂ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ಪಂಚಮಿ ಮಾರನೇ ದಿನ ನಡೆಯೋ ಓಕುಳಿಯಲ್ಲಿ ಬಡಾವಣೆ ಜನ ಉತ್ಸಾಹದಿಂದ ಆಚರಿಸ್ತಾರೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಸಗಣಿಯ 20 ಗುಂಪುಗಳನ್ನು ಹಾಕಿ ಅವುಗಳ ಮೇಲೆ ವಿವಿಧ ಬಣ್ಣಗಳನ್ನು ಹಾಕಲಾಗುತ್ತೆ. 12 ರಿಂದ 16 ಜನ ಯುವಕರು ಎರಡು ತಂಡ ರಚಿಸಿ ಹತ್ತಿರದ ದೈವದವರ ತೋಟದಲ್ಲಿ ಸಗಣೆ ಆಟಕ್ಕೆ ಸಿದ್ಧತೆ ನಡೆಸ್ತಾರೆ. ಚಿತ್ರ ವಿಚಿತ್ರ ಬಟ್ಟೆ ಹಾಕಿಕೊಂಡು ಬದನೆಕಾಯಿ, ಈರುಳ್ಳಿ, ಹಿರೇಕಾಯಿ, ಟೊಮೆಟೊ, ಸೇರಿದಂತೆ ವಿವಿಧ ತರಕಾರಿಗಳಿಂದ ಸಿದ್ಧವಾದ ಹಾರ ಹಾಕಿಕೊಳ್ಳುವ ಯುವಕರು, ತಂಡ ರಚಿಸಿಕೊಂಡು ಪರಸ್ಪರ ಸಗಣಿ ಎರಚಿ ಖುಷಿ ಪಡ್ತಾರೆ.

ರೈತ ಸಮುದಾಯ ಸಗಣಿಗೆ (Dung spitting game) ಬಂಗಾರದ ಸ್ಥಾನಮಾನ ನೀಡುತ್ತೆ. ಪವಿತ್ರತೆಯ ಸಂಕೇತವಾದ ಸಗಣಿಯನ್ನ ಕೀಳರಮೆಯಿಂದ ಕಾಣದೆ ಬಣ್ಣದ ರೀತಿ ಬಳಸುವುದೇ ಈ ಓಕುಳಿ ವಿಶೇಷತೆಯಾಗಿದೆ. ಸಗಣಿ ಮೈಮೇಲೆ ಹಾಕಿಕೊಳ್ಳುವುದರಿಂದ ಚರ್ಮರೋಗ ವಾಸಿಯಾಗುತ್ತದೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.

ನೂರಾರು ವರ್ಷದಿಂದ ನಡೆದುಕೊಂಡು ಬಂದಿರೋ ವಿಶೇಷ ಆಚರಣೆ ಇಂದಿಗೂ ಮುಂದುವರೆದಿದೆ. ಸಾಂಸ್ಕೃತಿಕ ಸಂಕೇತದಿಂತಿರುವ ಸಗಣಿ ಓಕುಳಿ ವರ್ಷದಿಂದ ವರ್ಷಕ್ಕೆ ತನ್ನ ಆಕರ್ಷಣೆ ಹೆಚ್ಚಿಸಿಕೊಳ್ಳುತ್ತಿದೆ. ಗೋ ಮಾತೆಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಹಾಗೂ ಪೂರ್ವಿಕರ ಸಂಸ್ಕೃತಿ ಮುಂದುವರೆಸಿಕೊಂಡು ಹೋಗ್ತಿರೋದು ನಿಜಕ್ಕೂ ವಿಶೇಷವಾಗಿದೆ.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ