Education: Mathematics identifies children's creativity : Mallikarjuna Kammara

Education: ಗಣಿತವು ಮಕ್ಕಳ ಸೃಜನಾತ್ಮಕತೆ ಗುರುತಿಸುತ್ತದೆ : ಮಲ್ಲಿಕಾರ್ಜುನ ಕಮ್ಮಾರ

Education: ಗಣಿತವು ಮಕ್ಕಳ ಸೃಜನಾತ್ಮಕತೆ ಗುರುತಿಸುತ್ತದೆ : ಮಲ್ಲಿಕಾರ್ಜುನ ಕಮ್ಮಾರ

ನಂದವಾಡಗಿ: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮುದಾಯ ಹಾಗೂ ಅಕ್ಷರ ಫೌಂಡೇಶನ್, ಗ್ರಾಮ ಪಂಚಾಯತ ನಂದವಾಡಗಿ ಸಂಯುಕ್ತಾಶ್ರಯದಲ್ಲಿ ಗ್ರಾಮ ಪಂಚಾಯತ ನಂದವಾಡಗಿ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. (Education)

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಂದವಾಡಗಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ಕಮ್ಮಾರ, ಮಕ್ಕಳ ಸಂತಸ ಕಲಿಕೆಯಲ್ಲಿ ಹಾಗೂ ಸೃಜನಾತ್ಮಕತೆಗಾಗಿ ಗಣಿತ ವಿಷಯವು ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಗಣಿತ ವಿಷಯವು ಸುಲಭ, ಆಸಕ್ತಿದಾಯಕ ವಿಷಯ, ಮಕ್ಕಳ ಗಣಿತ ಕಲಿಕಾ ಮಟ್ಟ ಗುರುತಿಸಲು ಇಂತಹ ಸ್ಪರ್ಧಾ ಕಾರ್ಯಕ್ರಮವು ಸಹಕಾರಿಯಾಗುತ್ತದೆ ಎಂದು ಶಾಲಾ ಪ್ರಭಾರಿ ಮುಖ್ಯ ಗುರುಮಾತೆ ವಿ ಬಿ ಕುಂಬಾರ ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಸದಸ್ಯರಾದ ಮೈಬುಸಾಬ ಗುಡಿಹಾಳ, ರಮೇಶ ಭಜಂತ್ರಿ, ಎಸ್ ಡಿ ಎಂ ಸಿ ಸದಸ್ಯರು, ಮುದಕಪ್ಪ ಪಾಲ್ತಿ, ಚೌಡಪ್ಪ ಲೆಕ್ಕಿಹಾಳ ಅತಿಥಿಗಳಾಗಿ ಭಾಗವಹಿಸಿದ್ದರು.

ಮಕ್ಕಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಪಾಲ್ಗೊಂಡರು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಿಜಯಲಕ್ಷ್ಮೀ ನಾಗಲೋಟಿ ಸ್ಪರ್ಧೆಯ ಕುರಿತು ಮಾತನಾಡಿ, ವಿಜೇತರಾದ ಮಕ್ಕಳಿಗೆ ಶುಭ ಕೋರಿ ಪುರಸ್ಕಾರ ನೀಡಿದರು.

ಇದೇ ಸಂದರ್ಭದಲ್ಲಿ ಶಿಕ್ಷಕರಾದ ಜ್ಯೋತಿ, ಶ್ರೀಮತಿ ಜಿ ಆರ್ ನದಾಫ್, ಗಂಗಾ, ಶ್ರೀಕಾಂತ ಮಂಗಳೂರು, ಡಿ ಜಿ ಸಜ್ಜನ, ಎನ್ ಎಂ ಪಾಟೀಲ, ಬಸವರಾಜ ಬಲಕುಂದಿ, ಡಾ ವಿಶ್ವನಾಥ ತೋಟಿ, ಎಂ ಸಿ ನದಾಫ್, ಸಿ ಎಸ್ ಖೈರವಾಡಗಿ, ಚಂದ್ರಶೇಖರ ಹುತಗಣ್ಣ, ಕುಮಾರಿ ಅಶ್ವಿನಿ ಕಪ್ಪರದ, ಶ್ರವಣಕುಮಾರ ಧೋತ್ರೆ, ಅತಿಥಿ ಶಿಕ್ಷಕ ರಾಜಶೇಖರ ಮೆದಿಕಿನಾಳ, ಉರ್ದು ಶಾಲೆಯ ಅತಿಥಿ ಶಿಕ್ಷಕಿಯರು, ಶಾಲಾ ಮಂತ್ರಿ ಮಂಡಲ ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.

ವಿಜೇತರಾದ ಮಕ್ಕಳಿಗೆ ನಂದವಾಡಗಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶಾಂತಕುಮಾರ ಎಸ್ ಕೆ ಅಭಿನಂದನೆ ಸಲ್ಲಿಸಿ, ಶುಭಾಶಯ ಕೋರಿದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಬಸವರಾಜ ಬಲಕುಂದಿ ನಿರೂಪಿಸಿದರು. ವಿಶ್ವನಾಥ ತೋಟಿ ಸ್ವಾಗತಿಸಿದರು. ಚಂದ್ರಶೇಖರ ಹುತಗಣ್ಣ ವಂದಿಸಿದರು.





Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.