Education: Mathematics identifies children's creativity : Mallikarjuna Kammara

Education: ಗಣಿತವು ಮಕ್ಕಳ ಸೃಜನಾತ್ಮಕತೆ ಗುರುತಿಸುತ್ತದೆ : ಮಲ್ಲಿಕಾರ್ಜುನ ಕಮ್ಮಾರ

Education: ಗಣಿತವು ಮಕ್ಕಳ ಸೃಜನಾತ್ಮಕತೆ ಗುರುತಿಸುತ್ತದೆ : ಮಲ್ಲಿಕಾರ್ಜುನ ಕಮ್ಮಾರ

ನಂದವಾಡಗಿ: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮುದಾಯ ಹಾಗೂ ಅಕ್ಷರ ಫೌಂಡೇಶನ್, ಗ್ರಾಮ ಪಂಚಾಯತ ನಂದವಾಡಗಿ ಸಂಯುಕ್ತಾಶ್ರಯದಲ್ಲಿ ಗ್ರಾಮ ಪಂಚಾಯತ ನಂದವಾಡಗಿ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. (Education)

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಂದವಾಡಗಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ಕಮ್ಮಾರ, ಮಕ್ಕಳ ಸಂತಸ ಕಲಿಕೆಯಲ್ಲಿ ಹಾಗೂ ಸೃಜನಾತ್ಮಕತೆಗಾಗಿ ಗಣಿತ ವಿಷಯವು ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಗಣಿತ ವಿಷಯವು ಸುಲಭ, ಆಸಕ್ತಿದಾಯಕ ವಿಷಯ, ಮಕ್ಕಳ ಗಣಿತ ಕಲಿಕಾ ಮಟ್ಟ ಗುರುತಿಸಲು ಇಂತಹ ಸ್ಪರ್ಧಾ ಕಾರ್ಯಕ್ರಮವು ಸಹಕಾರಿಯಾಗುತ್ತದೆ ಎಂದು ಶಾಲಾ ಪ್ರಭಾರಿ ಮುಖ್ಯ ಗುರುಮಾತೆ ವಿ ಬಿ ಕುಂಬಾರ ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಸದಸ್ಯರಾದ ಮೈಬುಸಾಬ ಗುಡಿಹಾಳ, ರಮೇಶ ಭಜಂತ್ರಿ, ಎಸ್ ಡಿ ಎಂ ಸಿ ಸದಸ್ಯರು, ಮುದಕಪ್ಪ ಪಾಲ್ತಿ, ಚೌಡಪ್ಪ ಲೆಕ್ಕಿಹಾಳ ಅತಿಥಿಗಳಾಗಿ ಭಾಗವಹಿಸಿದ್ದರು.

ಮಕ್ಕಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಪಾಲ್ಗೊಂಡರು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಿಜಯಲಕ್ಷ್ಮೀ ನಾಗಲೋಟಿ ಸ್ಪರ್ಧೆಯ ಕುರಿತು ಮಾತನಾಡಿ, ವಿಜೇತರಾದ ಮಕ್ಕಳಿಗೆ ಶುಭ ಕೋರಿ ಪುರಸ್ಕಾರ ನೀಡಿದರು.

ಇದೇ ಸಂದರ್ಭದಲ್ಲಿ ಶಿಕ್ಷಕರಾದ ಜ್ಯೋತಿ, ಶ್ರೀಮತಿ ಜಿ ಆರ್ ನದಾಫ್, ಗಂಗಾ, ಶ್ರೀಕಾಂತ ಮಂಗಳೂರು, ಡಿ ಜಿ ಸಜ್ಜನ, ಎನ್ ಎಂ ಪಾಟೀಲ, ಬಸವರಾಜ ಬಲಕುಂದಿ, ಡಾ ವಿಶ್ವನಾಥ ತೋಟಿ, ಎಂ ಸಿ ನದಾಫ್, ಸಿ ಎಸ್ ಖೈರವಾಡಗಿ, ಚಂದ್ರಶೇಖರ ಹುತಗಣ್ಣ, ಕುಮಾರಿ ಅಶ್ವಿನಿ ಕಪ್ಪರದ, ಶ್ರವಣಕುಮಾರ ಧೋತ್ರೆ, ಅತಿಥಿ ಶಿಕ್ಷಕ ರಾಜಶೇಖರ ಮೆದಿಕಿನಾಳ, ಉರ್ದು ಶಾಲೆಯ ಅತಿಥಿ ಶಿಕ್ಷಕಿಯರು, ಶಾಲಾ ಮಂತ್ರಿ ಮಂಡಲ ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.

ವಿಜೇತರಾದ ಮಕ್ಕಳಿಗೆ ನಂದವಾಡಗಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶಾಂತಕುಮಾರ ಎಸ್ ಕೆ ಅಭಿನಂದನೆ ಸಲ್ಲಿಸಿ, ಶುಭಾಶಯ ಕೋರಿದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಬಸವರಾಜ ಬಲಕುಂದಿ ನಿರೂಪಿಸಿದರು. ವಿಶ್ವನಾಥ ತೋಟಿ ಸ್ವಾಗತಿಸಿದರು. ಚಂದ್ರಶೇಖರ ಹುತಗಣ್ಣ ವಂದಿಸಿದರು.





Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ