Education: Mathematics identifies children's creativity : Mallikarjuna Kammara

Education: ಗಣಿತವು ಮಕ್ಕಳ ಸೃಜನಾತ್ಮಕತೆ ಗುರುತಿಸುತ್ತದೆ : ಮಲ್ಲಿಕಾರ್ಜುನ ಕಮ್ಮಾರ

Education: ಗಣಿತವು ಮಕ್ಕಳ ಸೃಜನಾತ್ಮಕತೆ ಗುರುತಿಸುತ್ತದೆ : ಮಲ್ಲಿಕಾರ್ಜುನ ಕಮ್ಮಾರ

ನಂದವಾಡಗಿ: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮುದಾಯ ಹಾಗೂ ಅಕ್ಷರ ಫೌಂಡೇಶನ್, ಗ್ರಾಮ ಪಂಚಾಯತ ನಂದವಾಡಗಿ ಸಂಯುಕ್ತಾಶ್ರಯದಲ್ಲಿ ಗ್ರಾಮ ಪಂಚಾಯತ ನಂದವಾಡಗಿ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. (Education)

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಂದವಾಡಗಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ಕಮ್ಮಾರ, ಮಕ್ಕಳ ಸಂತಸ ಕಲಿಕೆಯಲ್ಲಿ ಹಾಗೂ ಸೃಜನಾತ್ಮಕತೆಗಾಗಿ ಗಣಿತ ವಿಷಯವು ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಗಣಿತ ವಿಷಯವು ಸುಲಭ, ಆಸಕ್ತಿದಾಯಕ ವಿಷಯ, ಮಕ್ಕಳ ಗಣಿತ ಕಲಿಕಾ ಮಟ್ಟ ಗುರುತಿಸಲು ಇಂತಹ ಸ್ಪರ್ಧಾ ಕಾರ್ಯಕ್ರಮವು ಸಹಕಾರಿಯಾಗುತ್ತದೆ ಎಂದು ಶಾಲಾ ಪ್ರಭಾರಿ ಮುಖ್ಯ ಗುರುಮಾತೆ ವಿ ಬಿ ಕುಂಬಾರ ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಸದಸ್ಯರಾದ ಮೈಬುಸಾಬ ಗುಡಿಹಾಳ, ರಮೇಶ ಭಜಂತ್ರಿ, ಎಸ್ ಡಿ ಎಂ ಸಿ ಸದಸ್ಯರು, ಮುದಕಪ್ಪ ಪಾಲ್ತಿ, ಚೌಡಪ್ಪ ಲೆಕ್ಕಿಹಾಳ ಅತಿಥಿಗಳಾಗಿ ಭಾಗವಹಿಸಿದ್ದರು.

ಮಕ್ಕಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಪಾಲ್ಗೊಂಡರು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಿಜಯಲಕ್ಷ್ಮೀ ನಾಗಲೋಟಿ ಸ್ಪರ್ಧೆಯ ಕುರಿತು ಮಾತನಾಡಿ, ವಿಜೇತರಾದ ಮಕ್ಕಳಿಗೆ ಶುಭ ಕೋರಿ ಪುರಸ್ಕಾರ ನೀಡಿದರು.

ಇದೇ ಸಂದರ್ಭದಲ್ಲಿ ಶಿಕ್ಷಕರಾದ ಜ್ಯೋತಿ, ಶ್ರೀಮತಿ ಜಿ ಆರ್ ನದಾಫ್, ಗಂಗಾ, ಶ್ರೀಕಾಂತ ಮಂಗಳೂರು, ಡಿ ಜಿ ಸಜ್ಜನ, ಎನ್ ಎಂ ಪಾಟೀಲ, ಬಸವರಾಜ ಬಲಕುಂದಿ, ಡಾ ವಿಶ್ವನಾಥ ತೋಟಿ, ಎಂ ಸಿ ನದಾಫ್, ಸಿ ಎಸ್ ಖೈರವಾಡಗಿ, ಚಂದ್ರಶೇಖರ ಹುತಗಣ್ಣ, ಕುಮಾರಿ ಅಶ್ವಿನಿ ಕಪ್ಪರದ, ಶ್ರವಣಕುಮಾರ ಧೋತ್ರೆ, ಅತಿಥಿ ಶಿಕ್ಷಕ ರಾಜಶೇಖರ ಮೆದಿಕಿನಾಳ, ಉರ್ದು ಶಾಲೆಯ ಅತಿಥಿ ಶಿಕ್ಷಕಿಯರು, ಶಾಲಾ ಮಂತ್ರಿ ಮಂಡಲ ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.

ವಿಜೇತರಾದ ಮಕ್ಕಳಿಗೆ ನಂದವಾಡಗಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶಾಂತಕುಮಾರ ಎಸ್ ಕೆ ಅಭಿನಂದನೆ ಸಲ್ಲಿಸಿ, ಶುಭಾಶಯ ಕೋರಿದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಬಸವರಾಜ ಬಲಕುಂದಿ ನಿರೂಪಿಸಿದರು. ವಿಶ್ವನಾಥ ತೋಟಿ ಸ್ವಾಗತಿಸಿದರು. ಚಂದ್ರಶೇಖರ ಹುತಗಣ್ಣ ವಂದಿಸಿದರು.





Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ