Ekadanta, come home to spend the Vighna of the devotees

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ವಿಷೇಶ ಲೇಖನ: ರೇವಣಸಿದ್ದ ಬಗಲಿ

ಭಾರತೀಯರು ಹಬ್ಬ ಪ್ರೀಯರು. ಗಣೇಶ ಚತುರ್ಥಿ ಅನ್ನುವದು ರಾಷ್ಟ್ರೀಯ ಹಬ್ಬ. ಬ್ರೀಟಿಷರಿಗೆ ಭಾರತವನ್ನು ಬಿಟ್ಟು ತೊಲಗಿಸಲು ಅಂದು ನಮ್ಮ ನೆಚ್ಚಿನ ರಾಷ್ಟ್ರಾಭಿಮಾನಿಯಾದ ಬಾಲಗಂಗಾಧರ ತಿಲಕ ರವರು ಭಾರತೀಯರನ್ನು ಒಂದುಗೂಡಿಸುವ ಸಲ್ಲುವಾಗಿ ಈ ಗಣೇಶನನ್ನು ಸಾರ್ವಜನಿಕವಾಗಿ ಕೂರಿಸುವ ಉತ್ಸವವನ್ನು ಪ್ರಾರಂಭಿಸಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಅಂದಿನಿಂದ ರಾಷ್ಟ್ರ ವ್ಯಾಪಿಯಾಗಿ ಪ್ರತಿವರ್ಷವೂ ಭಾದ್ರಪದ ಮಾಸದ ಚತುರ್ಥಿಯಂದು ಶಿವ-ಗೌರಿಸುತ್ತನಾದ ಗಣಪತಿಯನ್ನು ನಗರ-ಗ್ರಾಮೀಣ ಪ್ರದೇಶವೆನ್ನದೇ ಎಲ್ಲಡೇಯೂ ಭಕ್ತಿ ಪೂರ್ವಕವಾಗಿ ಆರಾಧನೆ ಮಾಡುವುದು ಜೋರಾಗಿರುತ್ತದೆ.

ಗಣೇಶ ಚತುರ್ಥಿ ಬಂದರೆ ಸಾಕು ಪಟ್ಟಣವೇಲ್ಲ ವಿಘ್ನೇಶನ ಆರಾಧನೆಯಲ್ಲಿ ಮಗ್ನಗೊಳುವದು. ಅದರಲ್ಲೂ ಚಿಕ್ಕ ಪುಟ್ಟ ಮಕ್ಕಳಿಗಂತು ಗಣೇಶ ಕೂರಿಸುವದು ಒಂದು ಸಡಗರ ಹಾಗೂ ಸಂಭ್ರಮದ ಹಬ್ಬವಾಗಿದೆ. ಪ್ರತಿ ವರ್ಷವೂ ಪಟ್ಟಣದಲ್ಲಿ ನೂರಾರೂ ಕಡೆಗಳಲ್ಲಿ ವಿಘ್ನ ನಿವಾರಕನನ್ನು ಕೂಡಿಸುವದು ಸರ್ವೆ ಸಾಮಾನ್ಯ.

ಈ ಬಾರಿಯೂ ವ್ಯಾಪಾರಿ ನಗರಿ ಚಡಚಣ ಪಟ್ಟಣದಲ್ಲಿ ಗಣೇಶ ಚತುರ್ಥಿ ನಿಮಿತ್ಯವಾಗಿ ಗಣೇಶನ ಮೂರ್ತಿಯನ್ನು ಮನೆ, ಗಲ್ಲಿ, ಸರ್ಕಾರಿ ಕಛೇರಿ, ಸಂಘ-ಸಂಸ್ಥೆ, ಪ್ರಮುಖ ಬಿದಿಗಳಲ್ಲಿ ಐದು ದಿನ, ಏಳು ದಿನ, ಒಂಬತ್ತು ದಿನ ಹೀಗೆ ಆಯಾ ಮಂಡಳಿಗಳು ಪ್ರತಿಷ್ಠಾಪಿಸಿ ಮೋದಕ ಪ್ರೀಯ ಗಣೇಶನಿಗೆ ವಿಶೇಷ ತಿಂಡಿ ಕಡಬು, ಲಾಡು, ಗರಿಕೆ, ಹಣ್ಣು ಹಂಪಲ್‌ಗಳು ಅರ್ಪಿಸುವ ಮೂಲಕ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪೂಜೆ ಸಲ್ಲಿಸಲಾಗುವುದು.

ಭಾದ್ರಪದ ಶುಕ್ಲದ ಚೌತಿಯಂದು ಹಸ್ತಾ ನಕ್ಷತ್ರವಿರುವ ದಿನವೇ ಗಣೇಶ ಚತುರ್ಥಿ ದಿವಸ. ಈ ದಿವಸ ಶಿವ-ಗೌರಿ ದಂಪತಿಗಳಿಗೆ ವಿನಾಯಕನಾಗಿ ಜನಿಸಿದ ಗಣೇಶನ ಹುಟ್ಟಿದ ದಿನ. ಈ ದಿನವನ್ನು ಕರ್ನಾಟಕ, ಮಹಾರಾಷ್ಟ್ರ ಎನ್ನದೇ ಭಾರತದ ಅರ್ಧಕ್ಕೂ ಹೆಚ್ಚು ರಾಜ್ಯಗಳಲ್ಲಿ ಗಣೇಶನನ್ನು ಕೂರಿಸಿ, ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದೆ.

ನಮ್ಮ ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಂತು ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಗಣೇಶನನ್ನು ಕೂರಿಸಿ, ನಿತ್ಯವೂ ರಾತ್ರಿ ಒಂದೊಂದು ತರಹದ ಮನರಂಜನೆ, ನಾಟಕ, ಡ್ಯಾನ್ಸ್, ಹಾಡು, ಮಿಮಿಕ್ರೀಗಳು ಗಣೇಶ ಮಂಡಳಿಯವರು ಆಯೋಜಿಸುತ್ತಾ ಜನರನ್ನು ಭೇದ-ಭಾವವಿಲ್ಲದೇ ಒಂದೂಗೂಡಿಸುವ ಮೂಲಕ ಹಬ್ಬವನ್ನು ವಿಶಿಷ್ಟವಾಗಿ ಸಂಭ್ರಮಿಸುವ ಜತೆಯಲ್ಲಿ ಕೊನೆಯ ದಿನದಂದು ಭಕ್ತರಿಗಾಗಿ ಮಹಾಪ್ರಸಾದ ವ್ಯವಸ್ಯೆಯೂ ಮಾಡುವವರು.

ಹಳ್ಳಿಗಳಲ್ಲಿ ದೊಡ್ಡ ದೊಡ್ಡ ಗಣಪತಿ ಊರೋಳಗಡೆ ಕುಳಿತರೆ, ಜನರು ತಮ್ಮ ಮನೆಗಳಲ್ಲಿ ಪುಟ್ಟ ಪುಟ್ಟ ವಿನಾಯಕನ್ನು ಕೂರಿಸಿ ಹಬ್ಬವನ್ನು ಎಲ್ಲ ಹಬ್ಬಕ್ಕಿಂತ ವಿಜೃಂಭಣೆಯಿಂದ ಆಚರಿಸುವರು.

ಈ ಬಾರಿ ಪ್ರತಿಯೊಬ್ಬರೂ ಪರಿಸರಸ್ನೇಹಿ ಗಣಪನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗಣಪನ ಮೂರ್ತಿ ವಿಸರ್ಜನೆ ಸಮಯದಲ್ಲಿ ಮುನ್ನೆಚ್ಚರಿಕೆ ವಹಿಸಿ, ಶಾಂತಿಯುತ ಹಬ್ಬವನ್ನು ಆಚರಣೆ ಮಾಡುವಂತಾಗಲಿ ಎನ್ನುವದು ನನ್ನ ಆಶಯ.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ