Ekadanta, come home to spend the Vighna of the devotees

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ವಿಷೇಶ ಲೇಖನ: ರೇವಣಸಿದ್ದ ಬಗಲಿ

ಭಾರತೀಯರು ಹಬ್ಬ ಪ್ರೀಯರು. ಗಣೇಶ ಚತುರ್ಥಿ ಅನ್ನುವದು ರಾಷ್ಟ್ರೀಯ ಹಬ್ಬ. ಬ್ರೀಟಿಷರಿಗೆ ಭಾರತವನ್ನು ಬಿಟ್ಟು ತೊಲಗಿಸಲು ಅಂದು ನಮ್ಮ ನೆಚ್ಚಿನ ರಾಷ್ಟ್ರಾಭಿಮಾನಿಯಾದ ಬಾಲಗಂಗಾಧರ ತಿಲಕ ರವರು ಭಾರತೀಯರನ್ನು ಒಂದುಗೂಡಿಸುವ ಸಲ್ಲುವಾಗಿ ಈ ಗಣೇಶನನ್ನು ಸಾರ್ವಜನಿಕವಾಗಿ ಕೂರಿಸುವ ಉತ್ಸವವನ್ನು ಪ್ರಾರಂಭಿಸಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಅಂದಿನಿಂದ ರಾಷ್ಟ್ರ ವ್ಯಾಪಿಯಾಗಿ ಪ್ರತಿವರ್ಷವೂ ಭಾದ್ರಪದ ಮಾಸದ ಚತುರ್ಥಿಯಂದು ಶಿವ-ಗೌರಿಸುತ್ತನಾದ ಗಣಪತಿಯನ್ನು ನಗರ-ಗ್ರಾಮೀಣ ಪ್ರದೇಶವೆನ್ನದೇ ಎಲ್ಲಡೇಯೂ ಭಕ್ತಿ ಪೂರ್ವಕವಾಗಿ ಆರಾಧನೆ ಮಾಡುವುದು ಜೋರಾಗಿರುತ್ತದೆ.

ಗಣೇಶ ಚತುರ್ಥಿ ಬಂದರೆ ಸಾಕು ಪಟ್ಟಣವೇಲ್ಲ ವಿಘ್ನೇಶನ ಆರಾಧನೆಯಲ್ಲಿ ಮಗ್ನಗೊಳುವದು. ಅದರಲ್ಲೂ ಚಿಕ್ಕ ಪುಟ್ಟ ಮಕ್ಕಳಿಗಂತು ಗಣೇಶ ಕೂರಿಸುವದು ಒಂದು ಸಡಗರ ಹಾಗೂ ಸಂಭ್ರಮದ ಹಬ್ಬವಾಗಿದೆ. ಪ್ರತಿ ವರ್ಷವೂ ಪಟ್ಟಣದಲ್ಲಿ ನೂರಾರೂ ಕಡೆಗಳಲ್ಲಿ ವಿಘ್ನ ನಿವಾರಕನನ್ನು ಕೂಡಿಸುವದು ಸರ್ವೆ ಸಾಮಾನ್ಯ.

ಈ ಬಾರಿಯೂ ವ್ಯಾಪಾರಿ ನಗರಿ ಚಡಚಣ ಪಟ್ಟಣದಲ್ಲಿ ಗಣೇಶ ಚತುರ್ಥಿ ನಿಮಿತ್ಯವಾಗಿ ಗಣೇಶನ ಮೂರ್ತಿಯನ್ನು ಮನೆ, ಗಲ್ಲಿ, ಸರ್ಕಾರಿ ಕಛೇರಿ, ಸಂಘ-ಸಂಸ್ಥೆ, ಪ್ರಮುಖ ಬಿದಿಗಳಲ್ಲಿ ಐದು ದಿನ, ಏಳು ದಿನ, ಒಂಬತ್ತು ದಿನ ಹೀಗೆ ಆಯಾ ಮಂಡಳಿಗಳು ಪ್ರತಿಷ್ಠಾಪಿಸಿ ಮೋದಕ ಪ್ರೀಯ ಗಣೇಶನಿಗೆ ವಿಶೇಷ ತಿಂಡಿ ಕಡಬು, ಲಾಡು, ಗರಿಕೆ, ಹಣ್ಣು ಹಂಪಲ್‌ಗಳು ಅರ್ಪಿಸುವ ಮೂಲಕ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪೂಜೆ ಸಲ್ಲಿಸಲಾಗುವುದು.

ಭಾದ್ರಪದ ಶುಕ್ಲದ ಚೌತಿಯಂದು ಹಸ್ತಾ ನಕ್ಷತ್ರವಿರುವ ದಿನವೇ ಗಣೇಶ ಚತುರ್ಥಿ ದಿವಸ. ಈ ದಿವಸ ಶಿವ-ಗೌರಿ ದಂಪತಿಗಳಿಗೆ ವಿನಾಯಕನಾಗಿ ಜನಿಸಿದ ಗಣೇಶನ ಹುಟ್ಟಿದ ದಿನ. ಈ ದಿನವನ್ನು ಕರ್ನಾಟಕ, ಮಹಾರಾಷ್ಟ್ರ ಎನ್ನದೇ ಭಾರತದ ಅರ್ಧಕ್ಕೂ ಹೆಚ್ಚು ರಾಜ್ಯಗಳಲ್ಲಿ ಗಣೇಶನನ್ನು ಕೂರಿಸಿ, ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದೆ.

ನಮ್ಮ ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಂತು ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಗಣೇಶನನ್ನು ಕೂರಿಸಿ, ನಿತ್ಯವೂ ರಾತ್ರಿ ಒಂದೊಂದು ತರಹದ ಮನರಂಜನೆ, ನಾಟಕ, ಡ್ಯಾನ್ಸ್, ಹಾಡು, ಮಿಮಿಕ್ರೀಗಳು ಗಣೇಶ ಮಂಡಳಿಯವರು ಆಯೋಜಿಸುತ್ತಾ ಜನರನ್ನು ಭೇದ-ಭಾವವಿಲ್ಲದೇ ಒಂದೂಗೂಡಿಸುವ ಮೂಲಕ ಹಬ್ಬವನ್ನು ವಿಶಿಷ್ಟವಾಗಿ ಸಂಭ್ರಮಿಸುವ ಜತೆಯಲ್ಲಿ ಕೊನೆಯ ದಿನದಂದು ಭಕ್ತರಿಗಾಗಿ ಮಹಾಪ್ರಸಾದ ವ್ಯವಸ್ಯೆಯೂ ಮಾಡುವವರು.

ಹಳ್ಳಿಗಳಲ್ಲಿ ದೊಡ್ಡ ದೊಡ್ಡ ಗಣಪತಿ ಊರೋಳಗಡೆ ಕುಳಿತರೆ, ಜನರು ತಮ್ಮ ಮನೆಗಳಲ್ಲಿ ಪುಟ್ಟ ಪುಟ್ಟ ವಿನಾಯಕನ್ನು ಕೂರಿಸಿ ಹಬ್ಬವನ್ನು ಎಲ್ಲ ಹಬ್ಬಕ್ಕಿಂತ ವಿಜೃಂಭಣೆಯಿಂದ ಆಚರಿಸುವರು.

ಈ ಬಾರಿ ಪ್ರತಿಯೊಬ್ಬರೂ ಪರಿಸರಸ್ನೇಹಿ ಗಣಪನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗಣಪನ ಮೂರ್ತಿ ವಿಸರ್ಜನೆ ಸಮಯದಲ್ಲಿ ಮುನ್ನೆಚ್ಚರಿಕೆ ವಹಿಸಿ, ಶಾಂತಿಯುತ ಹಬ್ಬವನ್ನು ಆಚರಣೆ ಮಾಡುವಂತಾಗಲಿ ಎನ್ನುವದು ನನ್ನ ಆಶಯ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು