Ekadanta, come home to spend the Vighna of the devotees

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ವಿಷೇಶ ಲೇಖನ: ರೇವಣಸಿದ್ದ ಬಗಲಿ

ಭಾರತೀಯರು ಹಬ್ಬ ಪ್ರೀಯರು. ಗಣೇಶ ಚತುರ್ಥಿ ಅನ್ನುವದು ರಾಷ್ಟ್ರೀಯ ಹಬ್ಬ. ಬ್ರೀಟಿಷರಿಗೆ ಭಾರತವನ್ನು ಬಿಟ್ಟು ತೊಲಗಿಸಲು ಅಂದು ನಮ್ಮ ನೆಚ್ಚಿನ ರಾಷ್ಟ್ರಾಭಿಮಾನಿಯಾದ ಬಾಲಗಂಗಾಧರ ತಿಲಕ ರವರು ಭಾರತೀಯರನ್ನು ಒಂದುಗೂಡಿಸುವ ಸಲ್ಲುವಾಗಿ ಈ ಗಣೇಶನನ್ನು ಸಾರ್ವಜನಿಕವಾಗಿ ಕೂರಿಸುವ ಉತ್ಸವವನ್ನು ಪ್ರಾರಂಭಿಸಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಅಂದಿನಿಂದ ರಾಷ್ಟ್ರ ವ್ಯಾಪಿಯಾಗಿ ಪ್ರತಿವರ್ಷವೂ ಭಾದ್ರಪದ ಮಾಸದ ಚತುರ್ಥಿಯಂದು ಶಿವ-ಗೌರಿಸುತ್ತನಾದ ಗಣಪತಿಯನ್ನು ನಗರ-ಗ್ರಾಮೀಣ ಪ್ರದೇಶವೆನ್ನದೇ ಎಲ್ಲಡೇಯೂ ಭಕ್ತಿ ಪೂರ್ವಕವಾಗಿ ಆರಾಧನೆ ಮಾಡುವುದು ಜೋರಾಗಿರುತ್ತದೆ.

ಗಣೇಶ ಚತುರ್ಥಿ ಬಂದರೆ ಸಾಕು ಪಟ್ಟಣವೇಲ್ಲ ವಿಘ್ನೇಶನ ಆರಾಧನೆಯಲ್ಲಿ ಮಗ್ನಗೊಳುವದು. ಅದರಲ್ಲೂ ಚಿಕ್ಕ ಪುಟ್ಟ ಮಕ್ಕಳಿಗಂತು ಗಣೇಶ ಕೂರಿಸುವದು ಒಂದು ಸಡಗರ ಹಾಗೂ ಸಂಭ್ರಮದ ಹಬ್ಬವಾಗಿದೆ. ಪ್ರತಿ ವರ್ಷವೂ ಪಟ್ಟಣದಲ್ಲಿ ನೂರಾರೂ ಕಡೆಗಳಲ್ಲಿ ವಿಘ್ನ ನಿವಾರಕನನ್ನು ಕೂಡಿಸುವದು ಸರ್ವೆ ಸಾಮಾನ್ಯ.

ಈ ಬಾರಿಯೂ ವ್ಯಾಪಾರಿ ನಗರಿ ಚಡಚಣ ಪಟ್ಟಣದಲ್ಲಿ ಗಣೇಶ ಚತುರ್ಥಿ ನಿಮಿತ್ಯವಾಗಿ ಗಣೇಶನ ಮೂರ್ತಿಯನ್ನು ಮನೆ, ಗಲ್ಲಿ, ಸರ್ಕಾರಿ ಕಛೇರಿ, ಸಂಘ-ಸಂಸ್ಥೆ, ಪ್ರಮುಖ ಬಿದಿಗಳಲ್ಲಿ ಐದು ದಿನ, ಏಳು ದಿನ, ಒಂಬತ್ತು ದಿನ ಹೀಗೆ ಆಯಾ ಮಂಡಳಿಗಳು ಪ್ರತಿಷ್ಠಾಪಿಸಿ ಮೋದಕ ಪ್ರೀಯ ಗಣೇಶನಿಗೆ ವಿಶೇಷ ತಿಂಡಿ ಕಡಬು, ಲಾಡು, ಗರಿಕೆ, ಹಣ್ಣು ಹಂಪಲ್‌ಗಳು ಅರ್ಪಿಸುವ ಮೂಲಕ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪೂಜೆ ಸಲ್ಲಿಸಲಾಗುವುದು.

ಭಾದ್ರಪದ ಶುಕ್ಲದ ಚೌತಿಯಂದು ಹಸ್ತಾ ನಕ್ಷತ್ರವಿರುವ ದಿನವೇ ಗಣೇಶ ಚತುರ್ಥಿ ದಿವಸ. ಈ ದಿವಸ ಶಿವ-ಗೌರಿ ದಂಪತಿಗಳಿಗೆ ವಿನಾಯಕನಾಗಿ ಜನಿಸಿದ ಗಣೇಶನ ಹುಟ್ಟಿದ ದಿನ. ಈ ದಿನವನ್ನು ಕರ್ನಾಟಕ, ಮಹಾರಾಷ್ಟ್ರ ಎನ್ನದೇ ಭಾರತದ ಅರ್ಧಕ್ಕೂ ಹೆಚ್ಚು ರಾಜ್ಯಗಳಲ್ಲಿ ಗಣೇಶನನ್ನು ಕೂರಿಸಿ, ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದೆ.

ನಮ್ಮ ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಂತು ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಗಣೇಶನನ್ನು ಕೂರಿಸಿ, ನಿತ್ಯವೂ ರಾತ್ರಿ ಒಂದೊಂದು ತರಹದ ಮನರಂಜನೆ, ನಾಟಕ, ಡ್ಯಾನ್ಸ್, ಹಾಡು, ಮಿಮಿಕ್ರೀಗಳು ಗಣೇಶ ಮಂಡಳಿಯವರು ಆಯೋಜಿಸುತ್ತಾ ಜನರನ್ನು ಭೇದ-ಭಾವವಿಲ್ಲದೇ ಒಂದೂಗೂಡಿಸುವ ಮೂಲಕ ಹಬ್ಬವನ್ನು ವಿಶಿಷ್ಟವಾಗಿ ಸಂಭ್ರಮಿಸುವ ಜತೆಯಲ್ಲಿ ಕೊನೆಯ ದಿನದಂದು ಭಕ್ತರಿಗಾಗಿ ಮಹಾಪ್ರಸಾದ ವ್ಯವಸ್ಯೆಯೂ ಮಾಡುವವರು.

ಹಳ್ಳಿಗಳಲ್ಲಿ ದೊಡ್ಡ ದೊಡ್ಡ ಗಣಪತಿ ಊರೋಳಗಡೆ ಕುಳಿತರೆ, ಜನರು ತಮ್ಮ ಮನೆಗಳಲ್ಲಿ ಪುಟ್ಟ ಪುಟ್ಟ ವಿನಾಯಕನ್ನು ಕೂರಿಸಿ ಹಬ್ಬವನ್ನು ಎಲ್ಲ ಹಬ್ಬಕ್ಕಿಂತ ವಿಜೃಂಭಣೆಯಿಂದ ಆಚರಿಸುವರು.

ಈ ಬಾರಿ ಪ್ರತಿಯೊಬ್ಬರೂ ಪರಿಸರಸ್ನೇಹಿ ಗಣಪನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗಣಪನ ಮೂರ್ತಿ ವಿಸರ್ಜನೆ ಸಮಯದಲ್ಲಿ ಮುನ್ನೆಚ್ಚರಿಕೆ ವಹಿಸಿ, ಶಾಂತಿಯುತ ಹಬ್ಬವನ್ನು ಆಚರಣೆ ಮಾಡುವಂತಾಗಲಿ ಎನ್ನುವದು ನನ್ನ ಆಶಯ.

Latest News

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಮುದ್ದೇಬಿಹಾಳ : ಈಚೆಗೆ ಮುದ್ದೇಬಿಹಾಳದಲ್ಲಿ ಜರುಗಿದ್ದ ಹಿಂದೂ ಮಹಾಸಮ್ಮೇಳನದಲ್ಲಿ ಜಮಾಖರ್ಚು ಆಗಿ ಉಳಿತಾಯದ ಹಣದಲ್ಲಿ ಯಲಗೂರಿನ ಗೋಶಾಲೆಗೆ ಇಲ್ಲಿನ ಹಿಂದೂ ಸಮಾಜದ ಬಾಂಧವರು ಐದು ಟ್ರಾö್ಯಕ್ಟರ್‌ನಷ್ಟು ಮೇವು ಕಾಣಿಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಪಟ್ಟಣದ ಹನುಮಾನ ದೇವಸ್ಥಾನದಲ್ಲಿ ಬುಧವಾರ ಸಂಜೆ ಮೇವು ತುಂಬಿದ್ದ ಟ್ರಾö್ಯಕ್ಟರ್‌ಗಳಿಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಲಗೂರ ಗೋಶಾಲೆ ಕಾರ್ಯದರ್ಶಿ ವಿಠ್ಠಲ ಬಿರಾದಾರ, ಇದೇ ಮೊದಲ ಬಾರಿಗೆ ಮುದ್ದೇಬಿಹಾಳದ ಹಿಂದೂ ಸಮಾಜದವರು

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..!                         ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅತ್ಯಂತ ಕೈಗೆಟುಕುವ ದರದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಪಿಯು ಶಿಕ್ಷಣ ನೀಡಲಾಗುತ್ತಿದ್ದು ಏ.3 ರಂದು 60 ಲಕ್ಷ ರೂ.ಗಳ ಶಿಷ್ಯವೇತನ ಗೆಲ್ಲುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ. ಈ ಶಾಲೆಯಲ್ಲಿ ಓದಿದ ಹಲವು ವಿದ್ಯಾರ್ಥಿಗಳು ರಾಜ್ಯಮಟ್ಟದ ಸಾಧನೆ ತೋರಿದ್ದು ಅವರಿಗೆ ಪೂರ್ಣ ಶುಲ್ಕದ ವಿನಾಯ್ತಿಯನ್ನು ಸಂಸ್ಥೆಯ ಚೇರಮನ್ ಬಿ.ಜಿ.ಮಠ