Ekadanta, come home to spend the Vighna of the devotees

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ವಿಷೇಶ ಲೇಖನ: ರೇವಣಸಿದ್ದ ಬಗಲಿ

ಭಾರತೀಯರು ಹಬ್ಬ ಪ್ರೀಯರು. ಗಣೇಶ ಚತುರ್ಥಿ ಅನ್ನುವದು ರಾಷ್ಟ್ರೀಯ ಹಬ್ಬ. ಬ್ರೀಟಿಷರಿಗೆ ಭಾರತವನ್ನು ಬಿಟ್ಟು ತೊಲಗಿಸಲು ಅಂದು ನಮ್ಮ ನೆಚ್ಚಿನ ರಾಷ್ಟ್ರಾಭಿಮಾನಿಯಾದ ಬಾಲಗಂಗಾಧರ ತಿಲಕ ರವರು ಭಾರತೀಯರನ್ನು ಒಂದುಗೂಡಿಸುವ ಸಲ್ಲುವಾಗಿ ಈ ಗಣೇಶನನ್ನು ಸಾರ್ವಜನಿಕವಾಗಿ ಕೂರಿಸುವ ಉತ್ಸವವನ್ನು ಪ್ರಾರಂಭಿಸಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಅಂದಿನಿಂದ ರಾಷ್ಟ್ರ ವ್ಯಾಪಿಯಾಗಿ ಪ್ರತಿವರ್ಷವೂ ಭಾದ್ರಪದ ಮಾಸದ ಚತುರ್ಥಿಯಂದು ಶಿವ-ಗೌರಿಸುತ್ತನಾದ ಗಣಪತಿಯನ್ನು ನಗರ-ಗ್ರಾಮೀಣ ಪ್ರದೇಶವೆನ್ನದೇ ಎಲ್ಲಡೇಯೂ ಭಕ್ತಿ ಪೂರ್ವಕವಾಗಿ ಆರಾಧನೆ ಮಾಡುವುದು ಜೋರಾಗಿರುತ್ತದೆ.

ಗಣೇಶ ಚತುರ್ಥಿ ಬಂದರೆ ಸಾಕು ಪಟ್ಟಣವೇಲ್ಲ ವಿಘ್ನೇಶನ ಆರಾಧನೆಯಲ್ಲಿ ಮಗ್ನಗೊಳುವದು. ಅದರಲ್ಲೂ ಚಿಕ್ಕ ಪುಟ್ಟ ಮಕ್ಕಳಿಗಂತು ಗಣೇಶ ಕೂರಿಸುವದು ಒಂದು ಸಡಗರ ಹಾಗೂ ಸಂಭ್ರಮದ ಹಬ್ಬವಾಗಿದೆ. ಪ್ರತಿ ವರ್ಷವೂ ಪಟ್ಟಣದಲ್ಲಿ ನೂರಾರೂ ಕಡೆಗಳಲ್ಲಿ ವಿಘ್ನ ನಿವಾರಕನನ್ನು ಕೂಡಿಸುವದು ಸರ್ವೆ ಸಾಮಾನ್ಯ.

ಈ ಬಾರಿಯೂ ವ್ಯಾಪಾರಿ ನಗರಿ ಚಡಚಣ ಪಟ್ಟಣದಲ್ಲಿ ಗಣೇಶ ಚತುರ್ಥಿ ನಿಮಿತ್ಯವಾಗಿ ಗಣೇಶನ ಮೂರ್ತಿಯನ್ನು ಮನೆ, ಗಲ್ಲಿ, ಸರ್ಕಾರಿ ಕಛೇರಿ, ಸಂಘ-ಸಂಸ್ಥೆ, ಪ್ರಮುಖ ಬಿದಿಗಳಲ್ಲಿ ಐದು ದಿನ, ಏಳು ದಿನ, ಒಂಬತ್ತು ದಿನ ಹೀಗೆ ಆಯಾ ಮಂಡಳಿಗಳು ಪ್ರತಿಷ್ಠಾಪಿಸಿ ಮೋದಕ ಪ್ರೀಯ ಗಣೇಶನಿಗೆ ವಿಶೇಷ ತಿಂಡಿ ಕಡಬು, ಲಾಡು, ಗರಿಕೆ, ಹಣ್ಣು ಹಂಪಲ್‌ಗಳು ಅರ್ಪಿಸುವ ಮೂಲಕ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪೂಜೆ ಸಲ್ಲಿಸಲಾಗುವುದು.

ಭಾದ್ರಪದ ಶುಕ್ಲದ ಚೌತಿಯಂದು ಹಸ್ತಾ ನಕ್ಷತ್ರವಿರುವ ದಿನವೇ ಗಣೇಶ ಚತುರ್ಥಿ ದಿವಸ. ಈ ದಿವಸ ಶಿವ-ಗೌರಿ ದಂಪತಿಗಳಿಗೆ ವಿನಾಯಕನಾಗಿ ಜನಿಸಿದ ಗಣೇಶನ ಹುಟ್ಟಿದ ದಿನ. ಈ ದಿನವನ್ನು ಕರ್ನಾಟಕ, ಮಹಾರಾಷ್ಟ್ರ ಎನ್ನದೇ ಭಾರತದ ಅರ್ಧಕ್ಕೂ ಹೆಚ್ಚು ರಾಜ್ಯಗಳಲ್ಲಿ ಗಣೇಶನನ್ನು ಕೂರಿಸಿ, ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದೆ.

ನಮ್ಮ ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಂತು ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಗಣೇಶನನ್ನು ಕೂರಿಸಿ, ನಿತ್ಯವೂ ರಾತ್ರಿ ಒಂದೊಂದು ತರಹದ ಮನರಂಜನೆ, ನಾಟಕ, ಡ್ಯಾನ್ಸ್, ಹಾಡು, ಮಿಮಿಕ್ರೀಗಳು ಗಣೇಶ ಮಂಡಳಿಯವರು ಆಯೋಜಿಸುತ್ತಾ ಜನರನ್ನು ಭೇದ-ಭಾವವಿಲ್ಲದೇ ಒಂದೂಗೂಡಿಸುವ ಮೂಲಕ ಹಬ್ಬವನ್ನು ವಿಶಿಷ್ಟವಾಗಿ ಸಂಭ್ರಮಿಸುವ ಜತೆಯಲ್ಲಿ ಕೊನೆಯ ದಿನದಂದು ಭಕ್ತರಿಗಾಗಿ ಮಹಾಪ್ರಸಾದ ವ್ಯವಸ್ಯೆಯೂ ಮಾಡುವವರು.

ಹಳ್ಳಿಗಳಲ್ಲಿ ದೊಡ್ಡ ದೊಡ್ಡ ಗಣಪತಿ ಊರೋಳಗಡೆ ಕುಳಿತರೆ, ಜನರು ತಮ್ಮ ಮನೆಗಳಲ್ಲಿ ಪುಟ್ಟ ಪುಟ್ಟ ವಿನಾಯಕನ್ನು ಕೂರಿಸಿ ಹಬ್ಬವನ್ನು ಎಲ್ಲ ಹಬ್ಬಕ್ಕಿಂತ ವಿಜೃಂಭಣೆಯಿಂದ ಆಚರಿಸುವರು.

ಈ ಬಾರಿ ಪ್ರತಿಯೊಬ್ಬರೂ ಪರಿಸರಸ್ನೇಹಿ ಗಣಪನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗಣಪನ ಮೂರ್ತಿ ವಿಸರ್ಜನೆ ಸಮಯದಲ್ಲಿ ಮುನ್ನೆಚ್ಚರಿಕೆ ವಹಿಸಿ, ಶಾಂತಿಯುತ ಹಬ್ಬವನ್ನು ಆಚರಣೆ ಮಾಡುವಂತಾಗಲಿ ಎನ್ನುವದು ನನ್ನ ಆಶಯ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ