Ekadanta, come home to spend the Vighna of the devotees

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ವಿಷೇಶ ಲೇಖನ: ರೇವಣಸಿದ್ದ ಬಗಲಿ

ಭಾರತೀಯರು ಹಬ್ಬ ಪ್ರೀಯರು. ಗಣೇಶ ಚತುರ್ಥಿ ಅನ್ನುವದು ರಾಷ್ಟ್ರೀಯ ಹಬ್ಬ. ಬ್ರೀಟಿಷರಿಗೆ ಭಾರತವನ್ನು ಬಿಟ್ಟು ತೊಲಗಿಸಲು ಅಂದು ನಮ್ಮ ನೆಚ್ಚಿನ ರಾಷ್ಟ್ರಾಭಿಮಾನಿಯಾದ ಬಾಲಗಂಗಾಧರ ತಿಲಕ ರವರು ಭಾರತೀಯರನ್ನು ಒಂದುಗೂಡಿಸುವ ಸಲ್ಲುವಾಗಿ ಈ ಗಣೇಶನನ್ನು ಸಾರ್ವಜನಿಕವಾಗಿ ಕೂರಿಸುವ ಉತ್ಸವವನ್ನು ಪ್ರಾರಂಭಿಸಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಅಂದಿನಿಂದ ರಾಷ್ಟ್ರ ವ್ಯಾಪಿಯಾಗಿ ಪ್ರತಿವರ್ಷವೂ ಭಾದ್ರಪದ ಮಾಸದ ಚತುರ್ಥಿಯಂದು ಶಿವ-ಗೌರಿಸುತ್ತನಾದ ಗಣಪತಿಯನ್ನು ನಗರ-ಗ್ರಾಮೀಣ ಪ್ರದೇಶವೆನ್ನದೇ ಎಲ್ಲಡೇಯೂ ಭಕ್ತಿ ಪೂರ್ವಕವಾಗಿ ಆರಾಧನೆ ಮಾಡುವುದು ಜೋರಾಗಿರುತ್ತದೆ.

ಗಣೇಶ ಚತುರ್ಥಿ ಬಂದರೆ ಸಾಕು ಪಟ್ಟಣವೇಲ್ಲ ವಿಘ್ನೇಶನ ಆರಾಧನೆಯಲ್ಲಿ ಮಗ್ನಗೊಳುವದು. ಅದರಲ್ಲೂ ಚಿಕ್ಕ ಪುಟ್ಟ ಮಕ್ಕಳಿಗಂತು ಗಣೇಶ ಕೂರಿಸುವದು ಒಂದು ಸಡಗರ ಹಾಗೂ ಸಂಭ್ರಮದ ಹಬ್ಬವಾಗಿದೆ. ಪ್ರತಿ ವರ್ಷವೂ ಪಟ್ಟಣದಲ್ಲಿ ನೂರಾರೂ ಕಡೆಗಳಲ್ಲಿ ವಿಘ್ನ ನಿವಾರಕನನ್ನು ಕೂಡಿಸುವದು ಸರ್ವೆ ಸಾಮಾನ್ಯ.

ಈ ಬಾರಿಯೂ ವ್ಯಾಪಾರಿ ನಗರಿ ಚಡಚಣ ಪಟ್ಟಣದಲ್ಲಿ ಗಣೇಶ ಚತುರ್ಥಿ ನಿಮಿತ್ಯವಾಗಿ ಗಣೇಶನ ಮೂರ್ತಿಯನ್ನು ಮನೆ, ಗಲ್ಲಿ, ಸರ್ಕಾರಿ ಕಛೇರಿ, ಸಂಘ-ಸಂಸ್ಥೆ, ಪ್ರಮುಖ ಬಿದಿಗಳಲ್ಲಿ ಐದು ದಿನ, ಏಳು ದಿನ, ಒಂಬತ್ತು ದಿನ ಹೀಗೆ ಆಯಾ ಮಂಡಳಿಗಳು ಪ್ರತಿಷ್ಠಾಪಿಸಿ ಮೋದಕ ಪ್ರೀಯ ಗಣೇಶನಿಗೆ ವಿಶೇಷ ತಿಂಡಿ ಕಡಬು, ಲಾಡು, ಗರಿಕೆ, ಹಣ್ಣು ಹಂಪಲ್‌ಗಳು ಅರ್ಪಿಸುವ ಮೂಲಕ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪೂಜೆ ಸಲ್ಲಿಸಲಾಗುವುದು.

ಭಾದ್ರಪದ ಶುಕ್ಲದ ಚೌತಿಯಂದು ಹಸ್ತಾ ನಕ್ಷತ್ರವಿರುವ ದಿನವೇ ಗಣೇಶ ಚತುರ್ಥಿ ದಿವಸ. ಈ ದಿವಸ ಶಿವ-ಗೌರಿ ದಂಪತಿಗಳಿಗೆ ವಿನಾಯಕನಾಗಿ ಜನಿಸಿದ ಗಣೇಶನ ಹುಟ್ಟಿದ ದಿನ. ಈ ದಿನವನ್ನು ಕರ್ನಾಟಕ, ಮಹಾರಾಷ್ಟ್ರ ಎನ್ನದೇ ಭಾರತದ ಅರ್ಧಕ್ಕೂ ಹೆಚ್ಚು ರಾಜ್ಯಗಳಲ್ಲಿ ಗಣೇಶನನ್ನು ಕೂರಿಸಿ, ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದೆ.

ನಮ್ಮ ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಂತು ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಗಣೇಶನನ್ನು ಕೂರಿಸಿ, ನಿತ್ಯವೂ ರಾತ್ರಿ ಒಂದೊಂದು ತರಹದ ಮನರಂಜನೆ, ನಾಟಕ, ಡ್ಯಾನ್ಸ್, ಹಾಡು, ಮಿಮಿಕ್ರೀಗಳು ಗಣೇಶ ಮಂಡಳಿಯವರು ಆಯೋಜಿಸುತ್ತಾ ಜನರನ್ನು ಭೇದ-ಭಾವವಿಲ್ಲದೇ ಒಂದೂಗೂಡಿಸುವ ಮೂಲಕ ಹಬ್ಬವನ್ನು ವಿಶಿಷ್ಟವಾಗಿ ಸಂಭ್ರಮಿಸುವ ಜತೆಯಲ್ಲಿ ಕೊನೆಯ ದಿನದಂದು ಭಕ್ತರಿಗಾಗಿ ಮಹಾಪ್ರಸಾದ ವ್ಯವಸ್ಯೆಯೂ ಮಾಡುವವರು.

ಹಳ್ಳಿಗಳಲ್ಲಿ ದೊಡ್ಡ ದೊಡ್ಡ ಗಣಪತಿ ಊರೋಳಗಡೆ ಕುಳಿತರೆ, ಜನರು ತಮ್ಮ ಮನೆಗಳಲ್ಲಿ ಪುಟ್ಟ ಪುಟ್ಟ ವಿನಾಯಕನ್ನು ಕೂರಿಸಿ ಹಬ್ಬವನ್ನು ಎಲ್ಲ ಹಬ್ಬಕ್ಕಿಂತ ವಿಜೃಂಭಣೆಯಿಂದ ಆಚರಿಸುವರು.

ಈ ಬಾರಿ ಪ್ರತಿಯೊಬ್ಬರೂ ಪರಿಸರಸ್ನೇಹಿ ಗಣಪನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗಣಪನ ಮೂರ್ತಿ ವಿಸರ್ಜನೆ ಸಮಯದಲ್ಲಿ ಮುನ್ನೆಚ್ಚರಿಕೆ ವಹಿಸಿ, ಶಾಂತಿಯುತ ಹಬ್ಬವನ್ನು ಆಚರಣೆ ಮಾಡುವಂತಾಗಲಿ ಎನ್ನುವದು ನನ್ನ ಆಶಯ.

Latest News

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ