Ekadanta, come home to spend the Vighna of the devotees

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ವಿಷೇಶ ಲೇಖನ: ರೇವಣಸಿದ್ದ ಬಗಲಿ

ಭಾರತೀಯರು ಹಬ್ಬ ಪ್ರೀಯರು. ಗಣೇಶ ಚತುರ್ಥಿ ಅನ್ನುವದು ರಾಷ್ಟ್ರೀಯ ಹಬ್ಬ. ಬ್ರೀಟಿಷರಿಗೆ ಭಾರತವನ್ನು ಬಿಟ್ಟು ತೊಲಗಿಸಲು ಅಂದು ನಮ್ಮ ನೆಚ್ಚಿನ ರಾಷ್ಟ್ರಾಭಿಮಾನಿಯಾದ ಬಾಲಗಂಗಾಧರ ತಿಲಕ ರವರು ಭಾರತೀಯರನ್ನು ಒಂದುಗೂಡಿಸುವ ಸಲ್ಲುವಾಗಿ ಈ ಗಣೇಶನನ್ನು ಸಾರ್ವಜನಿಕವಾಗಿ ಕೂರಿಸುವ ಉತ್ಸವವನ್ನು ಪ್ರಾರಂಭಿಸಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಅಂದಿನಿಂದ ರಾಷ್ಟ್ರ ವ್ಯಾಪಿಯಾಗಿ ಪ್ರತಿವರ್ಷವೂ ಭಾದ್ರಪದ ಮಾಸದ ಚತುರ್ಥಿಯಂದು ಶಿವ-ಗೌರಿಸುತ್ತನಾದ ಗಣಪತಿಯನ್ನು ನಗರ-ಗ್ರಾಮೀಣ ಪ್ರದೇಶವೆನ್ನದೇ ಎಲ್ಲಡೇಯೂ ಭಕ್ತಿ ಪೂರ್ವಕವಾಗಿ ಆರಾಧನೆ ಮಾಡುವುದು ಜೋರಾಗಿರುತ್ತದೆ.

ಗಣೇಶ ಚತುರ್ಥಿ ಬಂದರೆ ಸಾಕು ಪಟ್ಟಣವೇಲ್ಲ ವಿಘ್ನೇಶನ ಆರಾಧನೆಯಲ್ಲಿ ಮಗ್ನಗೊಳುವದು. ಅದರಲ್ಲೂ ಚಿಕ್ಕ ಪುಟ್ಟ ಮಕ್ಕಳಿಗಂತು ಗಣೇಶ ಕೂರಿಸುವದು ಒಂದು ಸಡಗರ ಹಾಗೂ ಸಂಭ್ರಮದ ಹಬ್ಬವಾಗಿದೆ. ಪ್ರತಿ ವರ್ಷವೂ ಪಟ್ಟಣದಲ್ಲಿ ನೂರಾರೂ ಕಡೆಗಳಲ್ಲಿ ವಿಘ್ನ ನಿವಾರಕನನ್ನು ಕೂಡಿಸುವದು ಸರ್ವೆ ಸಾಮಾನ್ಯ.

ಈ ಬಾರಿಯೂ ವ್ಯಾಪಾರಿ ನಗರಿ ಚಡಚಣ ಪಟ್ಟಣದಲ್ಲಿ ಗಣೇಶ ಚತುರ್ಥಿ ನಿಮಿತ್ಯವಾಗಿ ಗಣೇಶನ ಮೂರ್ತಿಯನ್ನು ಮನೆ, ಗಲ್ಲಿ, ಸರ್ಕಾರಿ ಕಛೇರಿ, ಸಂಘ-ಸಂಸ್ಥೆ, ಪ್ರಮುಖ ಬಿದಿಗಳಲ್ಲಿ ಐದು ದಿನ, ಏಳು ದಿನ, ಒಂಬತ್ತು ದಿನ ಹೀಗೆ ಆಯಾ ಮಂಡಳಿಗಳು ಪ್ರತಿಷ್ಠಾಪಿಸಿ ಮೋದಕ ಪ್ರೀಯ ಗಣೇಶನಿಗೆ ವಿಶೇಷ ತಿಂಡಿ ಕಡಬು, ಲಾಡು, ಗರಿಕೆ, ಹಣ್ಣು ಹಂಪಲ್‌ಗಳು ಅರ್ಪಿಸುವ ಮೂಲಕ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪೂಜೆ ಸಲ್ಲಿಸಲಾಗುವುದು.

ಭಾದ್ರಪದ ಶುಕ್ಲದ ಚೌತಿಯಂದು ಹಸ್ತಾ ನಕ್ಷತ್ರವಿರುವ ದಿನವೇ ಗಣೇಶ ಚತುರ್ಥಿ ದಿವಸ. ಈ ದಿವಸ ಶಿವ-ಗೌರಿ ದಂಪತಿಗಳಿಗೆ ವಿನಾಯಕನಾಗಿ ಜನಿಸಿದ ಗಣೇಶನ ಹುಟ್ಟಿದ ದಿನ. ಈ ದಿನವನ್ನು ಕರ್ನಾಟಕ, ಮಹಾರಾಷ್ಟ್ರ ಎನ್ನದೇ ಭಾರತದ ಅರ್ಧಕ್ಕೂ ಹೆಚ್ಚು ರಾಜ್ಯಗಳಲ್ಲಿ ಗಣೇಶನನ್ನು ಕೂರಿಸಿ, ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದೆ.

ನಮ್ಮ ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಂತು ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಗಣೇಶನನ್ನು ಕೂರಿಸಿ, ನಿತ್ಯವೂ ರಾತ್ರಿ ಒಂದೊಂದು ತರಹದ ಮನರಂಜನೆ, ನಾಟಕ, ಡ್ಯಾನ್ಸ್, ಹಾಡು, ಮಿಮಿಕ್ರೀಗಳು ಗಣೇಶ ಮಂಡಳಿಯವರು ಆಯೋಜಿಸುತ್ತಾ ಜನರನ್ನು ಭೇದ-ಭಾವವಿಲ್ಲದೇ ಒಂದೂಗೂಡಿಸುವ ಮೂಲಕ ಹಬ್ಬವನ್ನು ವಿಶಿಷ್ಟವಾಗಿ ಸಂಭ್ರಮಿಸುವ ಜತೆಯಲ್ಲಿ ಕೊನೆಯ ದಿನದಂದು ಭಕ್ತರಿಗಾಗಿ ಮಹಾಪ್ರಸಾದ ವ್ಯವಸ್ಯೆಯೂ ಮಾಡುವವರು.

ಹಳ್ಳಿಗಳಲ್ಲಿ ದೊಡ್ಡ ದೊಡ್ಡ ಗಣಪತಿ ಊರೋಳಗಡೆ ಕುಳಿತರೆ, ಜನರು ತಮ್ಮ ಮನೆಗಳಲ್ಲಿ ಪುಟ್ಟ ಪುಟ್ಟ ವಿನಾಯಕನ್ನು ಕೂರಿಸಿ ಹಬ್ಬವನ್ನು ಎಲ್ಲ ಹಬ್ಬಕ್ಕಿಂತ ವಿಜೃಂಭಣೆಯಿಂದ ಆಚರಿಸುವರು.

ಈ ಬಾರಿ ಪ್ರತಿಯೊಬ್ಬರೂ ಪರಿಸರಸ್ನೇಹಿ ಗಣಪನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗಣಪನ ಮೂರ್ತಿ ವಿಸರ್ಜನೆ ಸಮಯದಲ್ಲಿ ಮುನ್ನೆಚ್ಚರಿಕೆ ವಹಿಸಿ, ಶಾಂತಿಯುತ ಹಬ್ಬವನ್ನು ಆಚರಣೆ ಮಾಡುವಂತಾಗಲಿ ಎನ್ನುವದು ನನ್ನ ಆಶಯ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ