Ekadanta, come home to spend the Vighna of the devotees

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ

ವಿಷೇಶ ಲೇಖನ: ರೇವಣಸಿದ್ದ ಬಗಲಿ

ಭಾರತೀಯರು ಹಬ್ಬ ಪ್ರೀಯರು. ಗಣೇಶ ಚತುರ್ಥಿ ಅನ್ನುವದು ರಾಷ್ಟ್ರೀಯ ಹಬ್ಬ. ಬ್ರೀಟಿಷರಿಗೆ ಭಾರತವನ್ನು ಬಿಟ್ಟು ತೊಲಗಿಸಲು ಅಂದು ನಮ್ಮ ನೆಚ್ಚಿನ ರಾಷ್ಟ್ರಾಭಿಮಾನಿಯಾದ ಬಾಲಗಂಗಾಧರ ತಿಲಕ ರವರು ಭಾರತೀಯರನ್ನು ಒಂದುಗೂಡಿಸುವ ಸಲ್ಲುವಾಗಿ ಈ ಗಣೇಶನನ್ನು ಸಾರ್ವಜನಿಕವಾಗಿ ಕೂರಿಸುವ ಉತ್ಸವವನ್ನು ಪ್ರಾರಂಭಿಸಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಅಂದಿನಿಂದ ರಾಷ್ಟ್ರ ವ್ಯಾಪಿಯಾಗಿ ಪ್ರತಿವರ್ಷವೂ ಭಾದ್ರಪದ ಮಾಸದ ಚತುರ್ಥಿಯಂದು ಶಿವ-ಗೌರಿಸುತ್ತನಾದ ಗಣಪತಿಯನ್ನು ನಗರ-ಗ್ರಾಮೀಣ ಪ್ರದೇಶವೆನ್ನದೇ ಎಲ್ಲಡೇಯೂ ಭಕ್ತಿ ಪೂರ್ವಕವಾಗಿ ಆರಾಧನೆ ಮಾಡುವುದು ಜೋರಾಗಿರುತ್ತದೆ.

ಗಣೇಶ ಚತುರ್ಥಿ ಬಂದರೆ ಸಾಕು ಪಟ್ಟಣವೇಲ್ಲ ವಿಘ್ನೇಶನ ಆರಾಧನೆಯಲ್ಲಿ ಮಗ್ನಗೊಳುವದು. ಅದರಲ್ಲೂ ಚಿಕ್ಕ ಪುಟ್ಟ ಮಕ್ಕಳಿಗಂತು ಗಣೇಶ ಕೂರಿಸುವದು ಒಂದು ಸಡಗರ ಹಾಗೂ ಸಂಭ್ರಮದ ಹಬ್ಬವಾಗಿದೆ. ಪ್ರತಿ ವರ್ಷವೂ ಪಟ್ಟಣದಲ್ಲಿ ನೂರಾರೂ ಕಡೆಗಳಲ್ಲಿ ವಿಘ್ನ ನಿವಾರಕನನ್ನು ಕೂಡಿಸುವದು ಸರ್ವೆ ಸಾಮಾನ್ಯ.

ಈ ಬಾರಿಯೂ ವ್ಯಾಪಾರಿ ನಗರಿ ಚಡಚಣ ಪಟ್ಟಣದಲ್ಲಿ ಗಣೇಶ ಚತುರ್ಥಿ ನಿಮಿತ್ಯವಾಗಿ ಗಣೇಶನ ಮೂರ್ತಿಯನ್ನು ಮನೆ, ಗಲ್ಲಿ, ಸರ್ಕಾರಿ ಕಛೇರಿ, ಸಂಘ-ಸಂಸ್ಥೆ, ಪ್ರಮುಖ ಬಿದಿಗಳಲ್ಲಿ ಐದು ದಿನ, ಏಳು ದಿನ, ಒಂಬತ್ತು ದಿನ ಹೀಗೆ ಆಯಾ ಮಂಡಳಿಗಳು ಪ್ರತಿಷ್ಠಾಪಿಸಿ ಮೋದಕ ಪ್ರೀಯ ಗಣೇಶನಿಗೆ ವಿಶೇಷ ತಿಂಡಿ ಕಡಬು, ಲಾಡು, ಗರಿಕೆ, ಹಣ್ಣು ಹಂಪಲ್‌ಗಳು ಅರ್ಪಿಸುವ ಮೂಲಕ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪೂಜೆ ಸಲ್ಲಿಸಲಾಗುವುದು.

ಭಾದ್ರಪದ ಶುಕ್ಲದ ಚೌತಿಯಂದು ಹಸ್ತಾ ನಕ್ಷತ್ರವಿರುವ ದಿನವೇ ಗಣೇಶ ಚತುರ್ಥಿ ದಿವಸ. ಈ ದಿವಸ ಶಿವ-ಗೌರಿ ದಂಪತಿಗಳಿಗೆ ವಿನಾಯಕನಾಗಿ ಜನಿಸಿದ ಗಣೇಶನ ಹುಟ್ಟಿದ ದಿನ. ಈ ದಿನವನ್ನು ಕರ್ನಾಟಕ, ಮಹಾರಾಷ್ಟ್ರ ಎನ್ನದೇ ಭಾರತದ ಅರ್ಧಕ್ಕೂ ಹೆಚ್ಚು ರಾಜ್ಯಗಳಲ್ಲಿ ಗಣೇಶನನ್ನು ಕೂರಿಸಿ, ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದೆ.

ನಮ್ಮ ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಂತು ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಗಣೇಶನನ್ನು ಕೂರಿಸಿ, ನಿತ್ಯವೂ ರಾತ್ರಿ ಒಂದೊಂದು ತರಹದ ಮನರಂಜನೆ, ನಾಟಕ, ಡ್ಯಾನ್ಸ್, ಹಾಡು, ಮಿಮಿಕ್ರೀಗಳು ಗಣೇಶ ಮಂಡಳಿಯವರು ಆಯೋಜಿಸುತ್ತಾ ಜನರನ್ನು ಭೇದ-ಭಾವವಿಲ್ಲದೇ ಒಂದೂಗೂಡಿಸುವ ಮೂಲಕ ಹಬ್ಬವನ್ನು ವಿಶಿಷ್ಟವಾಗಿ ಸಂಭ್ರಮಿಸುವ ಜತೆಯಲ್ಲಿ ಕೊನೆಯ ದಿನದಂದು ಭಕ್ತರಿಗಾಗಿ ಮಹಾಪ್ರಸಾದ ವ್ಯವಸ್ಯೆಯೂ ಮಾಡುವವರು.

ಹಳ್ಳಿಗಳಲ್ಲಿ ದೊಡ್ಡ ದೊಡ್ಡ ಗಣಪತಿ ಊರೋಳಗಡೆ ಕುಳಿತರೆ, ಜನರು ತಮ್ಮ ಮನೆಗಳಲ್ಲಿ ಪುಟ್ಟ ಪುಟ್ಟ ವಿನಾಯಕನ್ನು ಕೂರಿಸಿ ಹಬ್ಬವನ್ನು ಎಲ್ಲ ಹಬ್ಬಕ್ಕಿಂತ ವಿಜೃಂಭಣೆಯಿಂದ ಆಚರಿಸುವರು.

ಈ ಬಾರಿ ಪ್ರತಿಯೊಬ್ಬರೂ ಪರಿಸರಸ್ನೇಹಿ ಗಣಪನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗಣಪನ ಮೂರ್ತಿ ವಿಸರ್ಜನೆ ಸಮಯದಲ್ಲಿ ಮುನ್ನೆಚ್ಚರಿಕೆ ವಹಿಸಿ, ಶಾಂತಿಯುತ ಹಬ್ಬವನ್ನು ಆಚರಣೆ ಮಾಡುವಂತಾಗಲಿ ಎನ್ನುವದು ನನ್ನ ಆಶಯ.

Latest News

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಮುದ್ದೇಬಿಹಾಳ : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಲ್ಲಿ ಸರಳತೆಯು ಅವರನ್ನು ಬಹುದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ.ಸೇವೆಯಲ್ಲಿ ಪ್ರಾಮಾಣಿಕತೆ,ದಕ್ಷತೆಯಿಂದ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ವಿಜಯಪುರ : 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ ಕಬಡ್ಡಿ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂಜಾಬಿನ ಚಂಡಿಘಡ ನಗರದಲ್ಲಿ ನಡೆಯುವ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಮೂಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಯುವಕನೋರ್ವ ಮೊದಲನೇ ಬಾರಿಗೆ ರಾಷ್ಟಿçÃಯ ಕಬಡ್ಡಿ ತಂಡಕ್ಕೆ ಆಯ್ಕೆ ಆಗಿರುವುದಕ್ಕೆ ಕೇಸಾಪೂರ ಗ್ರಾಮದ ಗುರುಹಿರಿಯರು ಹಾಗೂ ಯುವಕ ಮಿತ್ರರು ಪೂಜಾರಿ ಅವರನ್ನು

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ ಮೂಲಕ ಆತನ ಕುಟುಂಬವು ಸಾವಿನಲ್ಲೂ ಸಾರ್ಥಕತೆ ಮೆರೆದ ಮಾನವೀಯ ಘಟನೆ ನಗರದ ಬಿ.ಎಲ್.ಡಿ.ಇ (ಬಿಎಂ ಪಾಟೀಲ) ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ. ಮುದ್ದೇಬಿಹಾಳ ತಾಲ್ಲೂಕಿನ ಮಲ್ಲಪ್ಪ ಹರಿಜನ ಹಾಗೂ ಸುಜಾತಾ ದಂಪತಿಯ ಏಕೈಕ ಪುತ್ರ ಆಕಾಶ ಹರಿಜನ (10) ಕಳೆದ ಮಾರ್ಚ್ 22ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದನು. ಕೂಡಲೇ ಬಾಲಕನನ್ನು ಬಿ.ಎಲ್.ಡಿ.ಇ ಆಸ್ಪತ್ರೆಗೆ