ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧು! ಹೈಕೋರ್ಟ್ ಮಹತ್ವದ ಆದೇಶ

ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧು! ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಮತ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ವೈ ನಂಜೇಗೌಡ (K Y Nanjegowda) ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್‌ ಅಸಿಂಧುಗೊಳಿಸಿ ಆದೇಶ ನೀಡಿದೆ.

ಅಷ್ಟು ಮಾತ್ರವಲ್ಲದೆ, ಮತಗಳ ಮರು ಎಣಿಕೆ ಮಾಡುವಂತೆ ಸೂಚನೆ ನೀಡಿದೆ. 2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕೆ.ವೈ ನಂಜೇಗೌಡ ಆಯ್ಕೆಯಾಗಿರುವುದನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಕೆಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಆ‌ರ್. ದೇವದಾಸ್ ಅವರದ್ದ ಪೀಠ ವಿಚಾರಣೆ ಮಾಡಿತು.

ಕಳೆದ ಎರಡು ವರ್ಷಗಳ ವಿಚಾರಣೆಯ ಬಳಿಕ ಹೈಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ.

ಚುನಾವಣೆ ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿಯು ಆರೋಪ ಮಾಡಿದ್ದರು. ಹೀಗಾಗಿ, ಕೋರ್ಟ್‌ ಮತ್ತೊಮ್ಮೆ ಎಣಿಕೆಯನ್ನೂ ಮಾಡುವಂತೆ ಸೂಚನೆ ನೀಡಿದೆ.

ಶಾಸಕರಾಗಿ ಕೆ.ವೈ ನಂಜೇಗೌಡ ಅವರ ವಕೀಲರ ಮನವಿ ಮೇರೆಗೆ ಶಾಸಕ ಸ್ಥಾನ ಅಸಿಂಧು ಎಂದು ನೀಡಿದ್ದ ಆದೇಶಕ್ಕೆ 30 ದಿನಗಳ ಕಾಲ ಹೈಕೋರ್ಟ್‌ ತಡೆ ನೀಡಿದೆ. ಅಷ್ಟರಲ್ಲಿ ಶಾಸಕರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಬಹುದು. ಒಂದು ವೇಳೆ ಸುಪ್ರೀಂ ಕೋರ್ಟ್‌ನಿಂದ ಯಾವುದೇ ನಿರ್ದೇಶನ ಬರದಿದ್ದರೆ ಶಾಸಕ ಸ್ಥಾನ ಅಸಿಂಧುವಾಗಲಿದೆ. ಮರು ಮತ ಎಣಿಕೆ ನಡೆಯಲಿದೆ.

248 ಮತಗಳ ಅಂತದ ಗೆಲುವು:

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶಾಸಕ ಕೆವೈ ನಂಜೇಗೌಡ 248 ಮತಗಳ ಅಂತರದಿಂದ ಜಯಗಳಿಸಿದ್ದರು. ಈ ಬಗ್ಗೆ ಮಾಜಿ ಶಾಸಕ, ಬಿಜೆಪಿ ಅಭ್ಯರ್ಥಿಯಾಗಿದ್ದ ಕೆಎಸ್ ಮಂಜುನಾಥ ಗೌಡ ಅನುಮಾನ ವ್ಯಕ್ತಪಡಿಸಿದ್ದರು. ಆ ಸಂದರ್ಭದಲ್ಲಿಯೇ ಮತ ಎಣಿಕೆಯಲ್ಲಿ ಲೋಪವಾಗಿದ್ದು, ಮರು ಮತ ಎಣಿಕೆಗೆ ಆದೇಶ ನೀಡುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ತಕರಾರು ಅರ್ಜಿ ಹಾಕಿದ ಬಳಿಕ ಸಿಸಿಟಿವಿ ದೃಶ್ಯಾವಳಿ, 17 ಸಿ ಫಾರಂಗಳನ್ನು ನೀಡುವಂತೆ ನ್ಯಾಯಾಲಯವು ಆದೇಶವನ್ನು ನೀಡಿತ್ತು. ಸೂಕ್ತ ದಾಖಲೆ ನೀಡಿಲ್ಲ. 251 ಸಿ ಫಾರಂಗಳ ಪೈಕಿ 120 ಫಾರಂನಲ್ಲಿ ನಮ್ಮ ಏಜೆಂಟರ ಸಹಿಗಳೇ ಇಲ್ಲ. ಸಿಸಿಟಿವಿ ದೃಶ್ಯಾವಳಿ ದೊರೆತರೆ ನಮ್ಮ ಏಜೆಂಟರು ಇದ್ದರು ಅಥವಾ ಇಲ್ಲ ಎನ್ನುವುದು ತಿಳಿಯುತ್ತದೆ. ಮರು ಮತ ಎಣಿಕೆ ಆಗಬೇಕು ಎನ್ನುವುದಷ್ಟೇ ನನ್ನ ಉದ್ದೇಶ ಎಂದು ಮಾಜಿ ಶಾಸಕ ಕೆ.ಎಸ್‌. ಮಂಜುನಾಥ್‌ಗೌಡ ಹೇಳಿದ್ದರು.

Latest News

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಒಟ್ಟು ಶೇ.92.95ರಷ್ಟು ಮತದಾನ ಆಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 2625 ಮತದಾರರಲ್ಲಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಆರಂಭದಲ್ಲಿ ಚುರುಕುಗೊಂಡಿದ್ದ ಮತದಾನ ಪ್ರಕ್ರಿಯೆ ಮದ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿತ್ತು.ಅಂತಿಮ ಸಮಯ ಮೀರುವ ಮುನ್ನವೇ ಬಹುತೇಕ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಒಂದು ಮತಗಟ್ಟೆಯಲ್ಲಿ ಇಬ್ಬರು ಮತದಾರರು ನಕಲಿ ಮತದಾನಕ್ಕೆ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಕಾಂಗ್ರೆಸ್‌ ನಾಯಕರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ರಸ್ತೆ ಮಧ್ಯೆ ಬೆಂಕಿ ಹಚ್ಚಿ, ಟೈರ್‌ ಸುಡಲು ಯತ್ನಿಸಿದರು. ಪೊಲೀಸರು ಟೈರ್‌ ಅನ್ನು ಕುಸಿದುಕೊಂಡಾಗ ನೂಕಾಟ ಉಂಟಾಯಿತು. ಕಾರ್ಯಕರ್ತರು ಒಮ್ಮೆಲೆ ನುಗ್ಗಿದ್ದರಿಂದ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಅಲ್ಪ ಪ್ರಮಾಣದಲ್ಲಿ