ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧು! ಹೈಕೋರ್ಟ್ ಮಹತ್ವದ ಆದೇಶ

ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧು! ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಮತ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ವೈ ನಂಜೇಗೌಡ (K Y Nanjegowda) ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್‌ ಅಸಿಂಧುಗೊಳಿಸಿ ಆದೇಶ ನೀಡಿದೆ.

ಅಷ್ಟು ಮಾತ್ರವಲ್ಲದೆ, ಮತಗಳ ಮರು ಎಣಿಕೆ ಮಾಡುವಂತೆ ಸೂಚನೆ ನೀಡಿದೆ. 2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕೆ.ವೈ ನಂಜೇಗೌಡ ಆಯ್ಕೆಯಾಗಿರುವುದನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಕೆಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಆ‌ರ್. ದೇವದಾಸ್ ಅವರದ್ದ ಪೀಠ ವಿಚಾರಣೆ ಮಾಡಿತು.

ಕಳೆದ ಎರಡು ವರ್ಷಗಳ ವಿಚಾರಣೆಯ ಬಳಿಕ ಹೈಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ.

ಚುನಾವಣೆ ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿಯು ಆರೋಪ ಮಾಡಿದ್ದರು. ಹೀಗಾಗಿ, ಕೋರ್ಟ್‌ ಮತ್ತೊಮ್ಮೆ ಎಣಿಕೆಯನ್ನೂ ಮಾಡುವಂತೆ ಸೂಚನೆ ನೀಡಿದೆ.

ಶಾಸಕರಾಗಿ ಕೆ.ವೈ ನಂಜೇಗೌಡ ಅವರ ವಕೀಲರ ಮನವಿ ಮೇರೆಗೆ ಶಾಸಕ ಸ್ಥಾನ ಅಸಿಂಧು ಎಂದು ನೀಡಿದ್ದ ಆದೇಶಕ್ಕೆ 30 ದಿನಗಳ ಕಾಲ ಹೈಕೋರ್ಟ್‌ ತಡೆ ನೀಡಿದೆ. ಅಷ್ಟರಲ್ಲಿ ಶಾಸಕರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಬಹುದು. ಒಂದು ವೇಳೆ ಸುಪ್ರೀಂ ಕೋರ್ಟ್‌ನಿಂದ ಯಾವುದೇ ನಿರ್ದೇಶನ ಬರದಿದ್ದರೆ ಶಾಸಕ ಸ್ಥಾನ ಅಸಿಂಧುವಾಗಲಿದೆ. ಮರು ಮತ ಎಣಿಕೆ ನಡೆಯಲಿದೆ.

248 ಮತಗಳ ಅಂತದ ಗೆಲುವು:

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶಾಸಕ ಕೆವೈ ನಂಜೇಗೌಡ 248 ಮತಗಳ ಅಂತರದಿಂದ ಜಯಗಳಿಸಿದ್ದರು. ಈ ಬಗ್ಗೆ ಮಾಜಿ ಶಾಸಕ, ಬಿಜೆಪಿ ಅಭ್ಯರ್ಥಿಯಾಗಿದ್ದ ಕೆಎಸ್ ಮಂಜುನಾಥ ಗೌಡ ಅನುಮಾನ ವ್ಯಕ್ತಪಡಿಸಿದ್ದರು. ಆ ಸಂದರ್ಭದಲ್ಲಿಯೇ ಮತ ಎಣಿಕೆಯಲ್ಲಿ ಲೋಪವಾಗಿದ್ದು, ಮರು ಮತ ಎಣಿಕೆಗೆ ಆದೇಶ ನೀಡುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ತಕರಾರು ಅರ್ಜಿ ಹಾಕಿದ ಬಳಿಕ ಸಿಸಿಟಿವಿ ದೃಶ್ಯಾವಳಿ, 17 ಸಿ ಫಾರಂಗಳನ್ನು ನೀಡುವಂತೆ ನ್ಯಾಯಾಲಯವು ಆದೇಶವನ್ನು ನೀಡಿತ್ತು. ಸೂಕ್ತ ದಾಖಲೆ ನೀಡಿಲ್ಲ. 251 ಸಿ ಫಾರಂಗಳ ಪೈಕಿ 120 ಫಾರಂನಲ್ಲಿ ನಮ್ಮ ಏಜೆಂಟರ ಸಹಿಗಳೇ ಇಲ್ಲ. ಸಿಸಿಟಿವಿ ದೃಶ್ಯಾವಳಿ ದೊರೆತರೆ ನಮ್ಮ ಏಜೆಂಟರು ಇದ್ದರು ಅಥವಾ ಇಲ್ಲ ಎನ್ನುವುದು ತಿಳಿಯುತ್ತದೆ. ಮರು ಮತ ಎಣಿಕೆ ಆಗಬೇಕು ಎನ್ನುವುದಷ್ಟೇ ನನ್ನ ಉದ್ದೇಶ ಎಂದು ಮಾಜಿ ಶಾಸಕ ಕೆ.ಎಸ್‌. ಮಂಜುನಾಥ್‌ಗೌಡ ಹೇಳಿದ್ದರು.

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ