Election of office bearers for photographers' association: Ravi Talikoti elected as president, Parasurama Nagarabetta as vice president

ಛಾಯಾಚಿತ್ರಗ್ರಾಹಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ: ರವಿ ತಾಳಿಕೋಟಿ ಅಧ್ಯಕ್ಷ,ಪರಶುರಾಮ ನಾಗರಬೆಟ್ಟ ಉಪಾಧ್ಯಕ್ಷರಾಗಿ ಆಯ್ಕೆ

ಛಾಯಾಚಿತ್ರಗ್ರಾಹಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ: ರವಿ ತಾಳಿಕೋಟಿ ಅಧ್ಯಕ್ಷ,ಪರಶುರಾಮ ನಾಗರಬೆಟ್ಟ ಉಪಾಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಛಾಯಾಚಿತ್ರ ಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ನೂತನ ಪದಾಧಿಕಾರಿಗಳನ್ನು ಭಾನುವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಆಯ್ಕೆ ಮಾಡಲಾಯಿತು.

ಸಂಘದ ಸಲಹ ಸಮೀತಿ ಸದಸ್ಯರಾದ ಹಿರಿಯ ಛಾಯಾಗ್ರಾಹಕರಾದ ಬುಡ್ಡಾ ಕುಂಟೋಜಿ, ಬಸವರಾಜ ಅಂಗಡಗೇರಿ, ಗುಲಾಮಮೊಹ್ಮದ ದಫೇದಾರ, ಮಹೇಶ ಕೆಂಧೂಳಿ, ಶೇಖರ ಪತ್ತಾರ, ಮುತ್ತು ಮಾದಿನಾಳ ಅವರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಸಂಘದ ನೂತನ ಅಧ್ಯಕ್ಷರಾಗಿ ರವಿ ತಾಳಿಕೋಟಿ, ಉಪಾಧ್ಯಕ್ಷರಾಗಿ ಪರಶುರಾಮ ನಾಗರಬೆಟ್ಟ, ಪ್ರಧಾನ ಕಾರ್ಯದರ್ಶಿಯಾಗಿ ವಿವೇಕ ದೋಟಿಹಾಳ, ಸಹ ಕಾರ್ಯದರ್ಶಿಯಾಗಿ ಶಿವು ತಾಳಿಕೋಟಿ, ಖಜಾಂಚಿಯಾಗಿ ಲಕ್ಕಪ್ಪ ತುರುಡಗಿ, ಸಂಘಟನಾ ಕಾರ್ಯದರ್ಶಿಯಾಗಿ ಅಯ್ಯಪ್ಪ ತಂಗಡಗಿ, ಕಾರ್ಯಕಾರಿ ಸಮೀತಿ ಸದಸ್ಯರಾಗಿ ಹೊಳೆಪ್ಪ ಕಣಕಾಲ, ಯಲ್ಲಪ್ಪ ಮ್ಯಾಗೇರಿ, ಸೋಮು ಸಜ್ಜನ(ಬಿದರಕುಂದಿ), ಮಲ್ಲು ಕಡಿ, ಮುನ್ನಾ ಸಾತಕೇಡ, ಸೋಮು ಸಜ್ಜನ, ಜಗದೀಶ ಹಡಪದ, ಬಸವರಾಜ ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು.

ನೂತನ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಸಂಘದ ನೂತನ ಅಧ್ಯಕ್ಷ ರವಿ ತಾಳಿಕೋಟಿ, ನಿಂತ ನೀರಾಗಿದ್ದ ಛಾಯಾಚಿತ್ರಗ್ರಾಹಕರ ಸಂಘದ ಚಟುವಟಿಕೆಗಳನ್ನು ಸಕ್ರಿಯಗೊಳಿಸಲು ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದು ಖುಷಿ ತಂದಿದೆ. ಕಟ್ಟ ಕಡೆಯ ಫೋಟೋಗ್ರಾಫರ್ ಕೂಡಾ ಆರ್ಥಿಕವಾಗಿ ಸಬಲರಾಗಬೇಕು ಎಂಬ ಗುರಿಯನ್ನಿಟ್ಟುಕೊಂಡು ಸರ್ವ ಸದಸ್ಯರ ಸಹಕಾರದಿಂದ ಸಂಘವನ್ನು ಮುನ್ನಡೆಸುವುದಾಗಿ ತಿಳಿಸಿದರು.

ಉಪಾಧ್ಯಕ್ಷ ಪರಶುರಾಮ ನಾಗರಬೆಟ್ಟ ಮಾತನಾಡಿ, ಸಂಘದ ಎಲ್ಲ ಸದಸ್ಯರ ಸಹಕಾರದೊಂದಿಗೆ ರಾಜ್ಯ ಸಂಘದವರು ತಿರುಗಿ ನೋಡುವಂತೆ ಮತ್ತೊಮ್ಮೆ ಸಂಘಟನೆಯನ್ನು ಬಲಪಡಿಸುತ್ತೇವೆ ಎಂದು ಹೇಳಿದರು.

ಇದೇ ವೇಳೆ ಬಿಎಲ್‌ಡಿ ಸೌಹಾರ್ದ ಸಹಕಾರಿ ಬ್ಯಾಂಕಿನ ಸಲಹಾ ಸಮಿತಿ ನಿರ್ದೇಶಕರಾಗಿ ನೇಮಕಗೊಂಡ ಹಿರಿಯ ಛಾಯಾಗ್ರಾಹಕ ಬುಡ್ಡಾ ಕುಂಟೋಜಿ ಅವರನ್ನು ಸಂಘದ ಪರವಾಗಿ ಸನ್ಮಾನಿಸಲಾಯಿತು. ಮುದ್ದೇಬಿಹಾಳ ತಾಲ್ಲೂಕು ಛಾಯಾಚಿತ್ರ ಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಇದ್ದರು.

Latest News

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ಎದುರಿಗೆ