ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಸವರಾಜ ಹುಲಗಣ್ಣಿ 19, ಜಿ.ಎನ್.ಬಿರಗೊಂಡ ಅವರು 14 ಮತ ಪಡೆದರೆ ಅವರ ಪ್ರತಿಸ್ಪರ್ಧಿಗಳಾಗಿದ್ದ ರವೀಂದ್ರ ನಂದೆಪ್ಪನವರ್, ಬಂದೇನವಾಜ್ ಕುಮಸಿ ತಲಾ 10 ಮತ ಪಡೆದು ಸೋಲನುಭವಿಸಿದರು. ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಲಾಡ್ಲೇಮಶ್ಯಾಕ ಶೇಖ್ ನದಾಫ 19, ಕಾಶಿನಾಥ ಬಿರಾದಾರ 21 ಮತ ಪಡೆದರೆ ಅವರ ಪ್ರತಿಸ್ಪರ್ಧಿ ಗುರುನಾಥ ಕತ್ತಿ 11 ಮತ ಪಡೆದು ಸೋಲನುಭವಿಸಿದರು. ಎಚ್.ಆರ್.ಬಾಗವಾನ ಪ್ರಧಾನ ಕಾರ್ಯದರ್ಶಿಗಳಾಗಿ ಅವಿರೋಧವಾಗಿ ಆಯ್ಕೆಯಾದರು.

ಖಜಾಂಚಿ ಸ್ಥಾನಕ್ಕೆ ವಡವಡಗಿ ಪೆನಲನ ಅಮೀನಸಾ ಮುಲ್ಲಾ, ಬನ್ನೆಟ್ಟಿ ಪೆನಲನ ಪುಂಡಲೀಕ ಮುರಾಳ ನಾಮಪತ್ರ ಸಲ್ಲಿಸಿದ್ದರು. ಮುರಾಳ ನಾಮಪತ್ರ ಹಿಂದಕ್ಕೆ ಪಡೆದಿದ್ದರಿಂದ ಮುಲ್ಲಾ ಅವಿರೋಧವಾಗಿ ಆಯ್ಕೆಗೊಂಡರು.

ಒಟ್ಟು 35 ಸದಸ್ಯರ ಪೈಕಿ 28 ಸದಸ್ಯರು ಮತದಾನ ಮಾಡಿದರು. ಸಂಘದ ರಾಜ್ಯ ಕಾರ್ಯಕಾರಿಣಿ ಹಾಗೂ ತಾಲೂಕು ಘಟಕಗಳ ಚುನಾವಣಾ ಉಸ್ತುವಾರಿ ಪ್ರಕಾಶ ಬೆಣ್ಣೂರ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಜಿಲ್ಲಾ ಕಾರ್ಯದರ್ಶಿ ಅವಿನಾಶ ಬಿದರಿ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು.

ಪತ್ರಕರ್ತರಾದ ಅಲ್ಲಾಭಕ್ಷ ನಿಡಗುಂದಿ, ನೂರೇನಬಿ ನದಾಫ, ಮುತ್ತು ವಡವಡಗಿ, ಸಿದ್ದು ಚಲವಾದಿ, ಹಣಮಂತ ಬಿರಗೊಂಡ, ರಾಜಶೇಖರ ಸಜ್ಜನ, ಈಶ್ವರ ಈಳಗೇರ, ಬಸವರಾಜ ಕುಂಬಾರ, , ಬಂದೇನವಾಜ ಕುಮಸಿ, ರವೀಂದ್ರ ನಂದೆಪ್ಪನವರ್, ನೂರಹುಸೇನ ನದಾಫ, ರಿಯಾಜ್ ಮುಲ್ಲಾ, ಮಹೆಬೂಬ ಹಳ್ಳೂರ, ಸಾಗರ ಉಕ್ಕಲಿ, ಈರಯ್ಯ ಹಿರೇಮಠ, ಬಸನಗೌಡ ಪಾಟೀಲ ಸರೂರ, ಕೃಷ್ಣಾ ಕುಂಬಾರ, ಎಚ್.ಬಿ.ಟಕ್ಕಳಕಿ ಇನ್ನಿತರರು ಪಾಲ್ಗೊಂಡಿದ್ದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,