ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಸವರಾಜ ಹುಲಗಣ್ಣಿ 19, ಜಿ.ಎನ್.ಬಿರಗೊಂಡ ಅವರು 14 ಮತ ಪಡೆದರೆ ಅವರ ಪ್ರತಿಸ್ಪರ್ಧಿಗಳಾಗಿದ್ದ ರವೀಂದ್ರ ನಂದೆಪ್ಪನವರ್, ಬಂದೇನವಾಜ್ ಕುಮಸಿ ತಲಾ 10 ಮತ ಪಡೆದು ಸೋಲನುಭವಿಸಿದರು. ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಲಾಡ್ಲೇಮಶ್ಯಾಕ ಶೇಖ್ ನದಾಫ 19, ಕಾಶಿನಾಥ ಬಿರಾದಾರ 21 ಮತ ಪಡೆದರೆ ಅವರ ಪ್ರತಿಸ್ಪರ್ಧಿ ಗುರುನಾಥ ಕತ್ತಿ 11 ಮತ ಪಡೆದು ಸೋಲನುಭವಿಸಿದರು. ಎಚ್.ಆರ್.ಬಾಗವಾನ ಪ್ರಧಾನ ಕಾರ್ಯದರ್ಶಿಗಳಾಗಿ ಅವಿರೋಧವಾಗಿ ಆಯ್ಕೆಯಾದರು.

ಖಜಾಂಚಿ ಸ್ಥಾನಕ್ಕೆ ವಡವಡಗಿ ಪೆನಲನ ಅಮೀನಸಾ ಮುಲ್ಲಾ, ಬನ್ನೆಟ್ಟಿ ಪೆನಲನ ಪುಂಡಲೀಕ ಮುರಾಳ ನಾಮಪತ್ರ ಸಲ್ಲಿಸಿದ್ದರು. ಮುರಾಳ ನಾಮಪತ್ರ ಹಿಂದಕ್ಕೆ ಪಡೆದಿದ್ದರಿಂದ ಮುಲ್ಲಾ ಅವಿರೋಧವಾಗಿ ಆಯ್ಕೆಗೊಂಡರು.

ಒಟ್ಟು 35 ಸದಸ್ಯರ ಪೈಕಿ 28 ಸದಸ್ಯರು ಮತದಾನ ಮಾಡಿದರು. ಸಂಘದ ರಾಜ್ಯ ಕಾರ್ಯಕಾರಿಣಿ ಹಾಗೂ ತಾಲೂಕು ಘಟಕಗಳ ಚುನಾವಣಾ ಉಸ್ತುವಾರಿ ಪ್ರಕಾಶ ಬೆಣ್ಣೂರ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಜಿಲ್ಲಾ ಕಾರ್ಯದರ್ಶಿ ಅವಿನಾಶ ಬಿದರಿ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು.

ಪತ್ರಕರ್ತರಾದ ಅಲ್ಲಾಭಕ್ಷ ನಿಡಗುಂದಿ, ನೂರೇನಬಿ ನದಾಫ, ಮುತ್ತು ವಡವಡಗಿ, ಸಿದ್ದು ಚಲವಾದಿ, ಹಣಮಂತ ಬಿರಗೊಂಡ, ರಾಜಶೇಖರ ಸಜ್ಜನ, ಈಶ್ವರ ಈಳಗೇರ, ಬಸವರಾಜ ಕುಂಬಾರ, , ಬಂದೇನವಾಜ ಕುಮಸಿ, ರವೀಂದ್ರ ನಂದೆಪ್ಪನವರ್, ನೂರಹುಸೇನ ನದಾಫ, ರಿಯಾಜ್ ಮುಲ್ಲಾ, ಮಹೆಬೂಬ ಹಳ್ಳೂರ, ಸಾಗರ ಉಕ್ಕಲಿ, ಈರಯ್ಯ ಹಿರೇಮಠ, ಬಸನಗೌಡ ಪಾಟೀಲ ಸರೂರ, ಕೃಷ್ಣಾ ಕುಂಬಾರ, ಎಚ್.ಬಿ.ಟಕ್ಕಳಕಿ ಇನ್ನಿತರರು ಪಾಲ್ಗೊಂಡಿದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ