ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಸವರಾಜ ಹುಲಗಣ್ಣಿ 19, ಜಿ.ಎನ್.ಬಿರಗೊಂಡ ಅವರು 14 ಮತ ಪಡೆದರೆ ಅವರ ಪ್ರತಿಸ್ಪರ್ಧಿಗಳಾಗಿದ್ದ ರವೀಂದ್ರ ನಂದೆಪ್ಪನವರ್, ಬಂದೇನವಾಜ್ ಕುಮಸಿ ತಲಾ 10 ಮತ ಪಡೆದು ಸೋಲನುಭವಿಸಿದರು. ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಲಾಡ್ಲೇಮಶ್ಯಾಕ ಶೇಖ್ ನದಾಫ 19, ಕಾಶಿನಾಥ ಬಿರಾದಾರ 21 ಮತ ಪಡೆದರೆ ಅವರ ಪ್ರತಿಸ್ಪರ್ಧಿ ಗುರುನಾಥ ಕತ್ತಿ 11 ಮತ ಪಡೆದು ಸೋಲನುಭವಿಸಿದರು. ಎಚ್.ಆರ್.ಬಾಗವಾನ ಪ್ರಧಾನ ಕಾರ್ಯದರ್ಶಿಗಳಾಗಿ ಅವಿರೋಧವಾಗಿ ಆಯ್ಕೆಯಾದರು.

ಖಜಾಂಚಿ ಸ್ಥಾನಕ್ಕೆ ವಡವಡಗಿ ಪೆನಲನ ಅಮೀನಸಾ ಮುಲ್ಲಾ, ಬನ್ನೆಟ್ಟಿ ಪೆನಲನ ಪುಂಡಲೀಕ ಮುರಾಳ ನಾಮಪತ್ರ ಸಲ್ಲಿಸಿದ್ದರು. ಮುರಾಳ ನಾಮಪತ್ರ ಹಿಂದಕ್ಕೆ ಪಡೆದಿದ್ದರಿಂದ ಮುಲ್ಲಾ ಅವಿರೋಧವಾಗಿ ಆಯ್ಕೆಗೊಂಡರು.

ಒಟ್ಟು 35 ಸದಸ್ಯರ ಪೈಕಿ 28 ಸದಸ್ಯರು ಮತದಾನ ಮಾಡಿದರು. ಸಂಘದ ರಾಜ್ಯ ಕಾರ್ಯಕಾರಿಣಿ ಹಾಗೂ ತಾಲೂಕು ಘಟಕಗಳ ಚುನಾವಣಾ ಉಸ್ತುವಾರಿ ಪ್ರಕಾಶ ಬೆಣ್ಣೂರ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಜಿಲ್ಲಾ ಕಾರ್ಯದರ್ಶಿ ಅವಿನಾಶ ಬಿದರಿ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು.

ಪತ್ರಕರ್ತರಾದ ಅಲ್ಲಾಭಕ್ಷ ನಿಡಗುಂದಿ, ನೂರೇನಬಿ ನದಾಫ, ಮುತ್ತು ವಡವಡಗಿ, ಸಿದ್ದು ಚಲವಾದಿ, ಹಣಮಂತ ಬಿರಗೊಂಡ, ರಾಜಶೇಖರ ಸಜ್ಜನ, ಈಶ್ವರ ಈಳಗೇರ, ಬಸವರಾಜ ಕುಂಬಾರ, , ಬಂದೇನವಾಜ ಕುಮಸಿ, ರವೀಂದ್ರ ನಂದೆಪ್ಪನವರ್, ನೂರಹುಸೇನ ನದಾಫ, ರಿಯಾಜ್ ಮುಲ್ಲಾ, ಮಹೆಬೂಬ ಹಳ್ಳೂರ, ಸಾಗರ ಉಕ್ಕಲಿ, ಈರಯ್ಯ ಹಿರೇಮಠ, ಬಸನಗೌಡ ಪಾಟೀಲ ಸರೂರ, ಕೃಷ್ಣಾ ಕುಂಬಾರ, ಎಚ್.ಬಿ.ಟಕ್ಕಳಕಿ ಇನ್ನಿತರರು ಪಾಲ್ಗೊಂಡಿದ್ದರು.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ