ಸರಕಾರಿ ನೌಕರರ ಸಂಘಕ್ಕೆ ಚುನಾವಣೆ : ಬಿರುಸಿನ ಮತದಾನ

ಸರಕಾರಿ ನೌಕರರ ಸಂಘಕ್ಕೆ ಚುನಾವಣೆ : ಬಿರುಸಿನ ಮತದಾನ

ಮುದ್ದೇಬಿಹಾಳ : ರಾಜ್ಯ ಸರ್ಕಾರಿ ನೌಕರರ ಸಂಘದ ಒಂದು ನಿರ್ದೇಶಕ ಸ್ಥಾನಕ್ಕೆ ಸೋಮವಾರ ಮತದಾನ ಕಾರ್ಯ ನಡೆದಿದ್ದು ಶಿಕ್ಷಕರಿಂದ ಉತ್ತಮ ಸ್ಪಂದನೆ ದೊರೆತಿದೆ.

ಶಿಕ್ಷಣ ಇಲಾಖೆಯ ಭಾಗ ಸಂಖ್ಯೆ 2 ರಲ್ಲಿ ಕಣದಲ್ಲಿ ಉಳಿದಿರುವ ಶಂಕರಗೌಡ ಬಿರಾದಾರ, ಬಂದಗಿಪಟೇಲ್ ಗಣಿಯಾರ ಮಧ್ಯೆ ಸ್ಪರ್ಧೆ ಇದೆ.
ಚುನಾವಣಾಧಿಕಾರಿ ಎಸ್.ಆರ್.ಕಟ್ಟಿಮನಿ , ಸಹಾಯಕ ಚುನಾವಣಾಧಿಕಾರಿ ಬಿ.ಎಚ್.ಹೂಗಾರ , ಸಹಾಯಕರಾಗಿ ವೆಂಕಟೇಶ ಅಂಬಿಗೇರ ಕಾರ್ಯನಿರ್ವಹಿಸುತ್ತಿದ್ದು ಬೆಳಗ್ಗೆ 9 ರಿಂದ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮದ್ಯಾಹ್ನ 12.30 ರವರೆಗಿನ ಮಾಹಿತಿಯಂತೆ 160 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಅಭ್ಯರ್ಥಿಗಳು ಪ್ರತ್ಯೇಕ ವಾಹನಗಳಲ್ಲಿ ಶಿಕ್ಷಕರನ್ನು ಕರೆತರುತ್ತಿರುವ ದೃಶ್ಯಗಳು ಕಂಡು ಬಂದವು. ಎ.ಎಸ್.ಐ ಬಿ.ಡಿ.ಪವಾರ ಅವರ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ.


ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳುವ ರೀತಿಯಲ್ಲಿ ಬಸವೇಶ್ವರ ವೃತ್ತಕ್ಕೆ ಪ್ರಚಾರದ ಬ್ಯಾನರ್ ಹಚ್ಚಿದ್ದು ಕಂಡು ಬಂದಿತು.



Latest News

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಎರಡನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದ

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ ನಿರ್ಮಿಸಲು ಸ್ವಾಧೀನಪಡಿಸಿಕೊಂಡಿರುವ ಜಮೀನಿಗೆ ಸಂಬoಧಿಸಿದoತೆ ಎರಡು ದಶಕಗಳು ಕಳೆದರೂ ಈವರೆಗೂ ಬಾಧಿತ ರೈತರಿಗೆ ಯಾವುದೇ ರೀತಿಯಿಂದ ಪರಿಹಾರ ದೊರೆತಿಲ್ಲ.ಅಧಿಕಾರಿಗಳು ಪರಿಹಾರ ದೊರಕಿಸಿಕೊಡಬೇಕು ಎಂದು ತಾಲ್ಲೂಕಿನ ಮದರಿ ಮತ್ತು ಗರಸಂಗಿ ಗ್ರಾಮದ ರೈತರು ಕೆಬಿಜೆಎನ್‌ಎಲ್ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ಹುಡ್ಕೋದಲ್ಲಿರುವ ಕೆಬಿಜೆಎನ್‌ಎಲ್ ಎಎಲ್‌ಬಿಸಿ ವಿಭಾಗ-3 ಕಚೇರಿಗೆ ಆಗಮಿಸಿದ್ದ ರೈತರು,

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ ಎಂಬುದನ್ನು ಮನಗಾಣಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಶುಕ್ರವಾರ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಸರ್ಕಾರಿ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರನ್ನು ನಿಯೋಜಿಸಲಾಗಿರುತ್ತದೆ.ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಸಾಗಿ ಬಂದವರು ಇರುತ್ತಾರೆ.ಆದರೆ ಸ್ಪರ್ಧಾತ್ಮಕ